ಬೆಳಗಾವಿ ಮೇಲೆ ಶೆಟ್ಟರ್ ಕಣ್ಣು: ಸ್ಥಳೀಯ ನಾಯಕರ ಅಪಸ್ವರ; ಮತ್ತೊಂದು ಕ್ಷೇತ್ರದಲ್ಲಿ BJP ಬಂಡಾಯದ ಸೂಚನೆ!

ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿಯಿಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿರುವುದು ಸ್ಥಳೀಯ ಬಹುತೇಕ ಬಿಜೆಪಿ ನಾಯಕರಿಗೆ ಇಷ್ಟವಿಲ್ಲ.
ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್

ಬೆಳಗಾವಿ: ಜಿಲ್ಲೆಯಲ್ಲಿ ಬಿಜೆಪಿಯಿಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿರುವುದು ಸ್ಥಳೀಯ ಬಹುತೇಕ ಬಿಜೆಪಿ ನಾಯಕರಿಗೆ ಇಷ್ಟವಿಲ್ಲ. ಪಕ್ಷದ ಹೈಕಮಾಂಡ್ ತನ್ನ ಮುಂದಿನ ಪಟ್ಟಿಯನ್ನು ಬಿಡುಗಡೆ ಮಾಡುವ ಮೊದಲು ಪಕ್ಷದ ಹಲವು ಹಿರಿಯ ಮುಖಂಡರು ಶೆಟ್ಟರ್ ಅವರನ್ನು ಕಣಕ್ಕಿಳಿಸದಂತೆ ಮಾಡಲು ಕೊನೆಯ ಪ್ರಯತ್ನ ಮಾಡುತ್ತಿದ್ದಾರೆ.

ಈ ಕುರಿತು ಬಿಜೆಪಿ ವರಿಷ್ಠರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬೆಳಗಾವಿಯಿಂದ ಶೆಟ್ಟರ್ ಅವರನ್ನು ಕಣಕ್ಕಿಳಿಸಿದರೆ ಪಕ್ಷದ ಉನ್ನತ ನಾಯಕರೊಬ್ಬರೊಬ್ಬರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಬಹುದು ಎಂದು ಹೇಳಲಾಗುತ್ತಿದೆ.

ಬೆಳಗಾವಿಯಿಂದ ಶೆಟ್ಟರ್ ಹೊರತುಪಡಿಸಿ ಈಗಾಗಲೇ ಹಲವು ಜನಪ್ರಿಯ ಸಮರ್ಥ ನಾಯಕರಿದ್ದು, ಹಿಂದೆ ಗೆದ್ದ ಎಲ್ಲಾ ನಾಯಕರು ಬೆಳಗಾವಿಯಿಂದ ಬಂದವರಾಗಿದ್ದು, ಟಿಕೆಟ್‌ ಆಕಾಂಕ್ಷಿಗಳಾಗಿದ್ದಾರೆ. ಇವರನ್ನು ಕಡೆಗಣಿಸಿ ಹೊರಗಿನವರಾದ ಶೆಟ್ಟರ್ ಅವರನ್ನು ಕಣಕ್ಕಿಳಿಸಿದರೆ ಚುನಾವಣೆಯನ್ನು ಎದುರಿಸಲು ಕಷ್ಟವಾಗಬಹುದು, ಸ್ಥಳೀಯ ನಾಯಕರಿಂದ ಬೆಂಬಲ ಸಿಗಲಿಕ್ಕಿಲ್ಲ ಎಂಬ ಸಂದೇಶವನ್ನು ಬಿಜೆಪಿ ನಾಯಕರಿಗೆ ರವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಬೆಳಗಾವಿಯಲ್ಲಿ ಬಿಜೆಪಿ ಮುಖಂಡರ ಸಭೆ ಬಳಿಕ ಮೂರು ಬಾರಿ ಶಾಸಕರಾಜ ಅಭಯ್ ಪಾಟೀಲ್, ಬೆಳಗಾವಿ ಪ್ರದೇಶದಲ್ಲಿ ಪಕ್ಷವು ಅನೇಕ ಸಮರ್ಥ ನಾಯಕರನ್ನು ಹೊಂದಿದೆ. ಇಲ್ಲಿನ ಬಹುತೇಕ ಬಿಜೆಪಿ ಕಾರ್ಯಕರ್ತರು ಸ್ಥಳೀಯ ವ್ಯಕ್ತಿಯೊಬ್ಬರು ಸ್ಪರ್ಧಿಸಬೇಕೆಂದು ಬಯಸಿದ್ದಾರೆ. ಈಗಾಗಲೇ ಸ್ಪರ್ಧಿಸಿ ಗೆದ್ದಿರುವ ನಾಯಕರನ್ನು ಪರಿಗಣಿಸಿ ಪಕ್ಷ ಸ್ಥಳೀಯ ನಾಯಕರಿಗೆ ಅವಕಾಶ ನೀಡಬೇಕು. ಬಿಜೆಪಿ ವರಿಷ್ಠರು ಏನು ತೀರ್ಮಾನ ಕೈಗೊಂಡಿದ್ದಾರೆ ಎಂದು ಗೊತ್ತಿಲ್ಲ ಎಂದರು.

ಜಗದೀಶ್ ಶೆಟ್ಟರ್
ಪ್ರಭಾವಿ ಆಕಾಂಕ್ಷಿತರ ಹೆಚ್ಚಿದ ಒತ್ತಡ: ಬೆಳಗಾವಿ-ಚಿಕ್ಕೋಡಿ ಲೋಕಸಭಾ ಕೈ-ಕಮಲ ಟಿಕೆಟ್ ಯಾರಿಗೆ?

ಸಭೆಯಲ್ಲಿ ಪಾಲ್ಗೊಂಡಿದ್ದ ಕೆಲ ಪ್ರಮುಖ ನಾಯಕರು ಬೆಳಗಾವಿ ಲೋಕಸಭಾ ಸ್ಥಾನಕ್ಕೆ ಶೆಟ್ಟರ್ ಅವರ ಉಮೇದುವಾರಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ರಾಜ್ಯಸಭಾ ಸದಸ್ಯ ಈರಣ್ಣ ಕರಡಿ, ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ, ಮಾಜಿ ಶಾಸಕ ಅನಿಲ ಬೆನಕೆ, ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ, ಮಾಜಿ ಎಂಎಲ್‌ಸಿ ಮಹಾಂತೇಶ ಕವಟಗಿಮಠ ಸಭೆಯಲ್ಲಿ ಭಾಗವಹಿಸಿದ್ದರು.

ಕಳೆದ ಕೆಲ ತಿಂಗಳಿಂದ ಕವಟಗಿಮಠ, ಮಾಜಿ ಶಾಸಕ ಸಂಜಯ ಪಾಟೀಲ ಮತ್ತು ಅನಿಲ ಬೆನಕೆ ಬಿಜೆಪಿ ಟಿಕೆಟ್‌ನ ಪ್ರಮುಖ ಆಕಾಂಕ್ಷಿಗಳಾಗಿದ್ದಾರೆ. ಟಿಕೆಟ್ ಆಕಾಂಕ್ಷೆಯಿಂದ ಹಲವಾರು ಪ್ರಚಾರಗಳು ಮತ್ತು ರಾಜಕೀಯ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಸಮೀಕ್ಷೆಗಳು. ಲಿಂಗಾಯತ ಮತಗಳನ್ನು ಕ್ರೋಢೀಕರಿಸಲು ಪಕ್ಷದ ಒಂದು ಭಾಗ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಬಿಜೆಪಿ ಉನ್ನತ ನಾಯಕತ್ವ ಚಿಂತನೆ ನಡೆಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಚಿಕ್ಕೋಡಿ ಮಾಜಿ ಸಂಸದ ರಮೇಶ ಕತ್ತಿ ಕೂಡ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಬೆಳಗಾವಿಯಿಂದ ಶೆಟ್ಟರ್ ಕಣಕ್ಕೆ ಇಳಿದರೆ ಲಿಂಗಾಯತ ಮತಗಳ ದೊಡ್ಡ ಭಾಗವು ಕಾಂಗ್ರೆಸ್ ಗೆ ಹಂಚಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಕಾಂಗ್ರೆಸ್ ಪಕ್ಷದಿಂದ ಲಿಂಗಾಯತ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ (ಪಂಚಮಸಾಲಿ ಲಿಂಗಾಯತ) ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.

ಬೆಳಗಾವಿಗೆ ಹೊರಗಿನವರಾದ ಶೆಟ್ಟರ್ ಅವರನ್ನು ಕಣಕ್ಕಿಳಿಸಿದರೆ ಸ್ಥಳೀಯ ನಾಯಕರು ಬಂಡಾಯವೇಳುವ ಸಾಧ್ಯತೆಯಿರುವುದರಿಂದ ಬಿಜೆಪಿ ಹೈಕಮಾಂಡ್ ಒತ್ತಡದಲ್ಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com