ಟಿಕೆಟ್ ಹಂಚಿಕೆಯಲ್ಲಿ ಒಕ್ಕಲಿಗರಿಗೆ ಯಾವುದೇ ಅನ್ಯಾಯವಾಗಿಲ್ಲ: ಆರ್.ಅಶೋಕ್

ಟಿಕೆಟ್ ಹಂಚಿಕೆ ವೇಳೆ ಬಿಜೆಪಿ ಒಕ್ಕಲಿಗರಿಗೆ ಯಾವುದೇ ಅನ್ಯಾಯ ಮಾಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಭಾನುವಾರ ಹೇಳಿದರು.
ಆರ್.ಅಶೋಕ್
ಆರ್.ಅಶೋಕ್
Updated on

ಬೆಂಗಳೂರು: ಟಿಕೆಟ್ ಹಂಚಿಕೆ ವೇಳೆ ಬಿಜೆಪಿ ಒಕ್ಕಲಿಗರಿಗೆ ಯಾವುದೇ ಅನ್ಯಾಯ ಮಾಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಭಾನುವಾರ ಹೇಳಿದರು.

ಬಿಜೆಪಿಯಲ್ಲಿ ಒಕ್ಕಲಿಗರನ್ನು ಕಡೆಗಣಿಸಲಾಗಿದೆ ಎಂಬ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅಶೋಕ್ ಅವರು, ಇಲ್ಲಿಯವರೆಗೆ ಬಿಜೆಪಿ ಒಕ್ಕಲಿಗರನ್ನು ನ್ಯಾಯಯುತವಾಗಿ ನಡೆಸಿಕೊಂಡಿದೆ. ರಾಜ್ಯದಲ್ಲಿ ಇನ್ನೂ ಎಂಟು ಸ್ಥಾನಗಳಿಗೆ ಟಿಕೆಟ್ ಬಗ್ಗೆ ಪಕ್ಷವು ನಿರ್ಧರಿಸಿಲ್ಲ ಎಂದು ಹೇಳಿದರು.

ಆರ್.ಅಶೋಕ್
ಪಕ್ಷಕ್ಕೆ ಬೆಂಬಲ ನೀಡಿದ್ದಾರೆ, ಸೇರ್ಪಡೆಗೊಂಡಿಲ್ಲ: ಸುಮಲತಾಗೆ ಟಿಕೆಟ್ ಕೈತಪ್ಪುವ ಸುಳಿವು ನೀಡಿದ ಅಶೋಕ್!

ಒಕ್ಕಲಿಗರಲ್ಲಿ ಮೊರಸು, ಗಂಗಾಟ್ಕರ್ ಮತ್ತು ಕುಂಚಿಟಿಗ ಮುಂತಾದ ಹಲವಾರು ಪ್ರಬಲ ಉಪಜಾತಿಗಳಿವೆ. ಪಕ್ಷವು ತನ್ನ ಎರಡನೇ ಪಟ್ಟಿಯನ್ನು ಪ್ರಕಟಿಸಿದಾಗ ಈ ಎಲ್ಲಾ ಪ್ರಬಲ ಸಮುದಾಯಗಳಿಗೆ ಅವಕಾಶ ಸಿಗುತ್ತದೆ ಎಂಬ ಭರವಸೆ ನನಗಿದೆ ಎಂದು ತಿಳಿಸಿದರು.

ಬೆಂಗಳೂರು ಉತ್ತರದಿಂದ ತಮಗೆ ಟಿಕೆಟ್ ನೀಡಬೇಕೆಂದು ಸದಾನಂದಗೌಡ ಅವರು ಸಾಕಷ್ಟು ಲಾಬಿ ನಡೆಸಿದ್ದರು. ಆದರೆ ನಾಯಕರು ಬೇರೆ ಯೋಜನೆಗಳನ್ನು ಇಟ್ಟುಕೊಂಡು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ನೇಮಿಸಿದರು. ಈಗ, ಪಕ್ಷದ ಎಲ್ಲಾ ಕಾರ್ಯಕರ್ತರು ಪಕ್ಷವನ್ನು ಅಧಿಕಾರಕ್ಕೆ ತರಲು ಕೆಲಸ ಮಾಡಲು ನಿರ್ಧರಿಸಿದ್ದಾರೆಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com