'ಅಸಹಾಯಕ, ದುರ್ಬಲ ಸಿಎಂ': ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಕಿಡಿ

ಸಿದ್ದರಾಮಯ್ಯ ಈ ರಾಜ್ಯಕಂಡ ಅತ್ಯಂತ ದುರ್ಬಲ ಮತ್ತು ಅಸಹಾಯಕ ಮುಖ್ಯಮಂತ್ರಿ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಕಿಡಿ
ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಕಿಡಿ

ಬೆಂಗಳೂರು: ಸಿದ್ದರಾಮಯ್ಯ ಈ ರಾಜ್ಯಕಂಡ ಅತ್ಯಂತ ದುರ್ಬಲ ಮತ್ತು ಅಸಹಾಯಕ ಮುಖ್ಯಮಂತ್ರಿ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ.

ಮುಂದಿನ 5 ವರ್ಷ ಸಿಎಂ ಯಾರು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರ ಕಾಲೆಳೆದಿರುವ ಆರ್ ಅಶೋಕ್, 'ಸಿಎಂ ಸಿದ್ದರಾಮಯ್ಯನವರೇ ಕರ್ನಾಟಕ ಕಂಡ ಅತ್ಯಂತ ದುರ್ಬಲ, ಅಸಹಾಯಕ ಮುಖ್ಯಮಂತ್ರಿ ತಾವು. ಹಾಗೆ ಹರಿಪ್ರಸಾದ್‌ ಅವರು ತಮ್ಮ ಮೇಲೆ ಪದೇ ಪದೇ ವಾಗ್ದಾಳಿ ನಡೆಸಿದರೂ ಅವರ ಮೇಲೆ ಯಾವುದೇ ಕ್ರಮ ಕೈಗೊಳ್ಳಲಾಗದಷ್ಟು, ಕನಿಷ್ಠ ಪಕ್ಷ ಪ್ರತ್ಯುತ್ತರ ಕೂಡ ನೀಡಲಾಗದಷ್ಟೂ ಅಸಹಾಯಕರ ತಾವು ಎಂದು ಹರಿಹಾಯ್ದಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಕಿಡಿ
ಕರ್ನಾಟಕದಲ್ಲಿರುವುದು ‘‘ಸ್ಟ್ರಾಂಗ್ ಸಿಎಂ’’, ನಿಮ್ಮ ಹಾಗೆ ‘‘ವೀಕ್ ಪಿಎಂ’’ ಅಲ್ಲ: ಮೋದಿಗೆ ಸಿದ್ದರಾಮಯ್ಯ ತಿರುಗೇಟು

ಈ ಕುರಿತು ಟ್ವೀಟ್ ಮಾಡಿರುವ ಆರ್ ಅಶೋಕ್, 'ಡಿಸಿಎಂ ಅವರ ಬಣ ಅವಕಾಶ ಸಿಕ್ಕಾಗಲೆಲ್ಲಾ ಬಂಡಾಯದ ಬಾವುಟ ಹಾರಿಸಿ ತಮ್ಮ ಕುರ್ಚಿಯ expiry date ಮುಗಿಯುತ್ತದೆ ಎಂದು ಕಾಲೆಳೆಯುತ್ತಿದ್ದರೂ ಏನೂ ಮಾಡಲಾಗದ ಅಸಹಾಯಕ ಸ್ಥಿತಿ ನಿಮ್ಮದು. ಡಿಸಿಎಂ ಅವರ ಬಣ ಅವಕಾಶ ಸಿಕ್ಕಾಗಲೆಲ್ಲಾ ಬಂಡಾಯದ ಬಾವುಟ ಹಾರಿಸಿ ತಮ್ಮ ಕುರ್ಚಿಯ expiry date ಮುಗಿಯುತ್ತದೆ ಎಂದು ಕಾಲೆಳೆಯುತ್ತಿದ್ದರೂ ಏನೂ ಮಾಡಲಾಗದ ಅಸಹಾಯಕ ಸ್ಥಿತಿ ನಿಮ್ಮದು.. ಎಂದು ಟೀಕೆ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com