ಈ ಬಾರಿ ಚುನಾವಣೆಯಲ್ಲಿ ಸೋತರೇ... ನಾನು ಇದ್ದೂ ಸತ್ತಂತೆ: ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಸೋಲನುಭವಿಸಿದರೆ ಅದು ನನಗೆ ಇದ್ದು ಸತ್ತಂತೆಯೇ ಇರುತ್ತದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಶುಕ್ರವಾರ ಹೇಳಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on

ಮೈಸೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಸೋಲನುಭವಿಸಿದರೆ ಅದು ನನಗೆ ಇದ್ದು ಸತ್ತಂತೆಯೇ ಇರುತ್ತದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಶುಕ್ರವಾರ ಹೇಳಿದ್ದಾರೆ.

ಈ ಹಿಂದೆ ನಾಲ್ಕು ಬಾರಿ ಸ್ಪರ್ಧಿಸಿದ್ದೆ ಆದರೆ, ಮತದಾರರು ನನ್ನನ್ನು ಬೆಂಬಲಿಸಲಿಲ್ಲ. ಕಾಂಗ್ರೆಸ್ ನನ್ನನ್ನು ಸೂಕ್ತ ಅಭ್ಯರ್ಥಿ ಎಂದು ಪರಿಗಣಿಸಿ ಈ ಬಾರಿ ಟಿಕೆಟ್ ನೀಡಿದೆ. ಈ ಬಾರಿ ಮತ್ತೊಮ್ಮೆ ಸೋಲನುಭವಿಸಿದರೆ, ಅದು ನಾನು ಇದ್ದು ಸತ್ತಂತೆಯೇ ಇರುತ್ತದೆ ಎಂದು ಹೇಳಿದರು.

ಮೈಸೂರಿನಿಂದ ಎರಡು ಬಾರಿ ಸಂಸದರಾಗಿದ್ದ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಈ ಬಾರಿ ಟಿಕೆಟ್ ನಿರಾಕರಿಸಿದ್ದು, ರಾಜವಂಶಸ್ಥ ಯದುವೀರ್ ಒಡೆಯರ್ ಅವರನ್ನು ಕಣಕ್ಕಿಳಿಸಿದೆ.

ಪ್ರಾತಿನಿಧಿಕ ಚಿತ್ರ
ಕಾಂಗ್ರೆಸ್‌ 3ನೇ ಪಟ್ಟಿಯಲ್ಲಿ ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ, ಸಚಿವರ ಸಂಬಂಧಿಕರಿಗೆ ಮಣೆ!

10 ವರ್ಷ ಸಂಸದರಾಗಿದ್ದವರಿಗೆ ಟಿಕೆಟ್ ನಿರಾಕರಿಸಲಾಗಿದೆ. ನಾನು ಪ್ರತಾಪ್ ಸಿಂಹ ವಿರುದ್ಧ ಸ್ಪರ್ಧಿಸಲು ಬಯಸಿದ್ದೆ. ಆದರೆ, ಚುನಾವಣೆಗೂ ಮುನ್ನವೇ ಪ್ರತಾಪ್ ಸಿಂಹ ಸ್ಪರ್ಧೆಯಿಂದ ಹೊರಬಿದ್ದರು. ಬಿಜೆಪಿ ಪ್ರತಾಪ್ ಸಿಂಹಗೆ ಟಿಕೆಟ್ ನಿರಾಕರಿಸಿದ್ದಕ್ಕೆ ಕಾರಣ ನೀಡಬೇಕು. ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನಿರಾಕರಿಸಿದ್ದಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಟೀಕಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com