ಶೆಟ್ಟರ್‌ ಬಳಿಕ ಜನಾರ್ದನ ರೆಡ್ಡಿ ಮರಳಿ ಗೂಡಿಗೆ: ಘರ್ ವಾಪ್ಸಿಗೆ ಮುಹೂರ್ತ ಫಿಕ್ಸ್?

ರಾಜ್ಯ ರಾಜಕೀಯದಲ್ಲಿ ನಡೆದ ಕ್ಷಿಪ್ರ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಮರಳಿ ಬಿಜೆಪಿಗೆ ಸೇರ್ಪಡೆಯಾಗುವುದು ಖಾತ್ರಿಯಾಗಿದೆ.
ಜನಾರ್ದನ ರೆಡ್ಡಿ
ಜನಾರ್ದನ ರೆಡ್ಡಿ
Updated on

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಡೆದ ಕ್ಷಿಪ್ರ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಮರಳಿ ಬಿಜೆಪಿಗೆ ಸೇರ್ಪಡೆಯಾಗುವುದು ಖಾತ್ರಿಯಾಗಿದೆ.

ಪಕ್ಷ ಸೇರ್ಪಡೆಗೆ ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌ ನೀಡಿದ ಬೆನ್ನಲ್ಲೇ ಜನಾರ್ದನ ರೆಡ್ಡಿ ಯಾವುದೇ ಷರತ್ತುಗಳು ಇಲ್ಲದೇ ಸೋಮವಾರ ಬಿಜೆಪಿ ಸೇರ್ಪಡೆಯಾಗಲು ಸಜ್ಜಾಗಿದ್ದಾರೆಂದು ತಿಳಿದುಬಂದಿದೆ.

ಜನಾರ್ನದ ರೆಡ್ಡಿ ಅವರು, ಬೆಂಗಳೂರಿನ ತಮ್ಮ ನಿವಾಸದಲ್ಲಿ ಇಂದು ಸಂಜೆ 4 ಗಂಟೆಗೆ ಕೆಆರ್‌ಪಿಪಿ ಪಕ್ಷದ ಪದಾಧಿಕಾರಿಗಳ ಸಭೆಯನ್ನು ಕರೆದಿದ್ದಾರೆ. ಈ ಸಭೆಯಲ್ಲಿ ಅಂತಿಮ ನಿರ್ಧಾರ ಪ್ರಕಟವಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಕೆಆರ್‌ಪಿಪಿ ವಿಲೀನಕ್ಕೆ ಬಿಜೆಪಿ ಆಫರ್ ನೀಡಿದ್ದು, ಈ ವಿಚಾರದ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ನಡೆಯಲಿದೆ ಎನ್ನಲಾಗುತ್ತಿದೆ.

ಜನಾರ್ದನ ರೆಡ್ಡಿ
ಲೋಕಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿ ಸಿದ್ಧ, ಶೀಘ್ರ ಸಮಾವೇಶದಲ್ಲಿ ಘೋಷಣೆ: ಜನಾರ್ಧನ ರೆಡ್ಡಿ

ರಾಜ್ಯಸಭೆ ಚುನಾವಣೆಯ ಒಂದು ದಿನದ ಮೊದಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಅವರು ಜನಾರ್ದನ ರೆಡ್ಡಿ ಅವರನ್ನು ಭೇಟಿಯಾಗಿ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಿದ್ದರು.

ಈ ಮನವಿಗೆ ಸ್ಪಂದಿಸಿದ್ದ ಜನಾರ್ದನ ರೆಡ್ಡಿ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಬೆಂಬಲಿಸಿದ್ದರು.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಜನಾರ್ದನ ರೆಡ್ಡಿ ಮುಂದಾಗಿದ್ದರು. ಆದರೆ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್‌ ಒಪ್ಪಿಗೆ ಸೂಚಿಸಿರಲಿಲ್ಲ. ನಂತರ ಬಿಜೆಪಿಗೆ ರಾಜೀನಾಮೆ ನೀಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿ ಗಂಗಾವತಿಯಿಂದ ಸ್ಪರ್ಧಿಸಿ ಗೆದ್ದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com