ಮಂಡ್ಯ ಮತದಾರರು ಬುದ್ದಿವಂತರು, ಭಾವನಾತ್ಮಕವಾಗಿ ಮಣಿಯಲ್ಲ; ಎಚ್‌ಡಿಕೆಯನ್ನು ಒಪ್ಪಲ್ಲ: ಚಲುವರಾಯಸ್ವಾಮಿ

ಮಂಡ್ಯ ಜಿಲ್ಲೆಯ ಜನ ಬುದ್ಧಿವಂತರು. ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಹೊರಗಿನವರಿಗೆ ಭಾವನಾತ್ಮಕವಾಗಿ ಎಂದೂ ಮಣಿದಿಲ್ಲ .
ಕೃಷಿ ಸಚಿವ ಚಲುವರಾಯಸ್ವಾಮಿ
ಕೃಷಿ ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ಜನ ಬುದ್ಧಿವಂತರು. ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಹೊರಗಿನವರಿಗೆ ಭಾವನಾತ್ಮಕವಾಗಿ ಎಂದೂ ಮಣಿದಿಲ್ಲ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದರು

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ ಅಥವಾ ಅವರ ಪುತ್ರ ನಿಖಿಲ್ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ, ಇದರ ನಡುವೆ ಕಾಂಗ್ರೆಸ್ ತನ್ನ ಅಭ್ಯರ್ಥಿ ವೆಂಕಟರಮಣೇಗೌಡ ಅಥವಾ ಸ್ಟಾರ್ ಚಂದ್ರುಗೆ ಮತ ಕೇಳಲು ಹೊರಗಿನ ವರ್ಸಸ್ ಸ್ಥಳೀಯ ಕಾರ್ಡ್ ಆಡಲು ನಿರ್ಧರಿಸಿದೆ.

ಮಂಡ್ಯ ಅಭ್ಯರ್ಥಿಸ್ಟಾರ್ ಚಂದ್ರು ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೃಷಿ ಸಚಿವ ಎನ್ .ಚಲುವರಾಯಸ್ವಾಮಿ, ಕುಮಾರಸ್ವಾಮಿ ಅವರನ್ನು ಜಿಲ್ಲೆಯ ಚುನಾವಣಾ ಇತಿಹಾಸದಲ್ಲಿ ಜನ ಎಂದೂ ಒಪ್ಪಿರಲಿಲ್ಲ. ಹೊರಗಿನಿಂದ ಬಂದವರಿಗೆ ಮಂಡ್ಯ ಜನ ಮತ ಹಾಕುವುದಿಲ್ಲ ಎಂದರು.

ಮೂರು ಬಾರಿ ಸಿಎಂ ಆದ ರಾಮನಗರವನ್ನು ಬಿಡುವುದಿಲ್ಲ ಎಂದು ಕುಮಾರಸ್ವಾಮಿ ಹಲವು ಸಂದರ್ಭಗಳಲ್ಲಿ ಹೇಳಿಕೊಂಡಿದ್ದರು. ಈಗ ರಾಮನಗರ ಬಿಟ್ಟು ಮಂಡ್ಯದಿಂದ ಸ್ಪರ್ಧಿಸಲು ಮುಂದಾಗಿದ್ದಾರೆ. ಮಂಡ್ಯದಿಂದ ಕುಮಾರಸ್ವಾಮಿ ಅಥವಾ ಅವರ ಮಗ ನಿಖಿಲ್ ಸ್ಪರ್ಧಿಸುತ್ತಾರೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ, ಆದರೆ ಮಂಡ್ಯ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಚಂದ್ರು ಸ್ಥಳೀಯ ನಾಯಕರಾಗಿದ್ದಾರೆ ಎಂದು ಚಲುವರಾಯಸ್ವಾಮಿ ಹೇಳಿದರು.

ಕೃಷಿ ಸಚಿವ ಚಲುವರಾಯಸ್ವಾಮಿ
ಮಂಡ್ಯದಿಂದ ಕುಮಾರಸ್ವಾಮಿ, ಕೋಲಾರದಿಂದ ಮಲ್ಲೇಶ್ ಬಾಬು, ಹಾಸನದಿಂದ ಪ್ರಜ್ವಲ್ ಸ್ಪರ್ಧೆ: ಮಾಜಿ ಪ್ರಧಾನಿ ದೇವೇಗೌಡ

ಹೊರಗಿನವರು ತಮ್ಮ ಭಾವನಾತ್ಮಕ ಹೇಳಿಕೆಗಳ ಮೂಲಕ ಮಂಡ್ಯದ ಜನರನ್ನು ನಿಯಂತ್ರಿಸಿದ ಘಟನೆಗಳಿಲ್ಲ. ಕುಮಾರಸ್ವಾಮಿ ಅವರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮಗನಾಗಿರುವುದರಿಂದ ನಮಗೆ ಅವರ ಬಗ್ಗೆ ಗೌರವವಿದೆ. ಆದರೆ ಹೊರಗಿನವರು ಮಂಡ್ಯದ ಜನರನ್ನು ಭಾವನಾತ್ಮಕವಾಗಿ ಬ್ಲಾಕ್ ಮೇಲ್ ಮಾಡಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಜನ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುತ್ತಾರೆ ಎಂದರು.

ಹಾಲಿ ಸಂಸದೆ ಸುಮಲತಾ ಅಂಬರೀಶ್‌ ಅವರು ಮಂಡ್ಯದಿಂದ ಪಕ್ಷೇತರರಾಗಿ ಸ್ಪರ್ಧಿಸಿರುವ ಕುರಿತು ಮಾತನಾಡಿದ ಚಲುವರಾಯಸ್ವಾಮಿ, ಕಾಂಗ್ರೆಸ್‌ ಪಕ್ಷ ಯಾವತ್ತೂ ಪಕ್ಷೇತರರಾಗಿ ಸ್ಪರ್ಧಿಸುವಂತೆ ಹೇಳಿಲ್ಲ, ಅವರ ಜತೆ ಯಾವುದೇ ಚರ್ಚೆ ನಡೆಸಿಲ್ಲ. ಸ್ಪರ್ಧಿಸುವ ವಿಚಾರ ಅವರ ವೈಯಕ್ತಿಕ ನಿರ್ಧಾರಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com