ರಾಜಕೀಯ ರಣಾಂಗಣವಾದ ಸಾಂಸ್ಕೃತಿಕ ನಗರಿ: ಮೈಸೂರು ಗೆಲ್ಲಲು ಮದಗಜಗಳ ಸೆಣಸಾಟ!

ಸಾಂಸ್ಕೃತಿಕ ಮತ್ತು ರಾಜಮನೆತನದ ಪರಂಪರೆಗೆ ಹೆಸರುವಾಸಿಯಾಗಿರುವ ಮೈಸೂರು ಇದೀಗ ನಿರ್ಣಾಯಕ ರಾಜಕೀಯ ರಣಾಂಗಣವಾಗಿ ಮಾರ್ಪಟ್ಟಿದ್ದು, ಮುಂಬರುವ ಲೋಕಸಭೆ ಚುನಾವಣೆಗೆ ರಣತಂತ್ರ ರೂಪಿಸಲು ಮೂರು ಪ್ರಮುಖ ಪಕ್ಷಗಳ ಮುಖಂಡರು ಜಿಲ್ಲೆಯಲ್ಲಿ ಬೀಡು ಬಿಟ್ಟಿದ್ದಾರೆ.
ಮೈಸೂರಿನಲ್ಲಿ ವಿಜಯೇಂದ್ರ ಮತ್ತು ಎಚ್ ಡಿಕೆ
ಮೈಸೂರಿನಲ್ಲಿ ವಿಜಯೇಂದ್ರ ಮತ್ತು ಎಚ್ ಡಿಕೆ
Updated on

ಮೈಸೂರು: ಸಾಂಸ್ಕೃತಿಕ ಮತ್ತು ರಾಜಮನೆತನದ ಪರಂಪರೆಗೆ ಹೆಸರುವಾಸಿಯಾಗಿರುವ ಮೈಸೂರು ಇದೀಗ ನಿರ್ಣಾಯಕ ರಾಜಕೀಯ ರಣಾಂಗಣವಾಗಿ ಮಾರ್ಪಟ್ಟಿದ್ದು, ಮುಂಬರುವ ಲೋಕಸಭೆ ಚುನಾವಣೆಗೆ ರಣತಂತ್ರ ರೂಪಿಸಲು ಮೂರು ಪ್ರಮುಖ ಪಕ್ಷಗಳ ಮುಖಂಡರು ಜಿಲ್ಲೆಯಲ್ಲಿ ಬೀಡು ಬಿಟ್ಟಿದ್ದಾರೆ.

ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಬಿಜೆಪಿ ಮತ್ತು ಜೆಡಿಎಸ್ ನಿಂದ ಆಗಮಿಸಿದ ನಾಯಕರಗಳನ್ನು ಸ್ವಾಗತಿಸಿದರು. ವಿರೋಧಿ ಪಾಳಯಗಳಿಂದ ಪ್ರಮುಖ ನಾಯಕರನ್ನು ಕರೆತರುವ ಕಾರ್ಯತಂತ್ರದ ಕ್ರಮವು ಆಡಳಿತ ಪಕ್ಷಕ್ಕೆ ಹೊಸ ಶಕ್ತಿಯನ್ನು ತುಂಬಿದೆ, ವಿಶೇಷವಾಗಿ ಸಿದ್ದರಾಮಯ್ಯ ಅವರು ಒಕ್ಕಲಿಗ ಮತ್ತು ಬ್ರಾಹ್ಮಣ ವಿರೋಧಿ ಎಂಬ ಆರೋಪಗಳನ್ನು ಎದುರಿಸುತ್ತಿರುವ ಸಮಯದಲ್ಲಿ ಸಿಎಂ ಗೆ ಮತ್ತಷ್ಟು ಬಲ ತಂದಿದೆ.

ಬಿಜೆಪಿಯ ಭದ್ರಕೋಟೆಯಾದ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಪ್ರಮುಖ ಬ್ರಾಹ್ಮಣ ಮುಖ ಎಚ್.ವಿ ರಾಜೀವ್ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ರಘುರಾಮ್ ವಾಜಪೇಯಿ ಮತ್ತು ನಟರಾಜ್ ಜೋಯಿಸ್ ಸೇರಿದಂತೆ ಹಲವಾರು ಬಿಜೆಪಿ ಸದಸ್ಯರು ಮತ್ತು ಬ್ರಾಹ್ಮಣ ನಾಯಕರ ಜೊತೆಗೆ ರಾಜೀವ್ ಅವರ ಪಕ್ಷಾಂತರವು ಕಾಂಗ್ರೆಸ್ ನಲ್ಲಿ ಗಮನಾರ್ಹ ಬದಲಾವಣೆಯನ್ನು ಸೂಚಿಸುತ್ತದೆ. ಇದರಿಂದಾಗಿ ಈ ಪ್ರದೇಶದಲ್ಲಿ ಕಾಂಗ್ರೆಸ್‌ಗೆ ಹೆಚ್ಚುವರಿ ಬೆಂಬಲ ಗಳಿಸುವ ನಿರೀಕ್ಷೆಯಿದೆ.

ಮೈಸೂರಿನಲ್ಲಿ ವಿಜಯೇಂದ್ರ ಮತ್ತು ಎಚ್ ಡಿಕೆ
ಮೈಸೂರು-ಕೊಡಗು ಲೋಕಸಭಾ ಚುನಾವಣೆ: ಯದುವೀರ್ ಗೆಲವು ಖಚಿತಪಡಿಸಲು ಶೀಘ್ರದಲ್ಲೇ ಬಿಜೆಪಿ ಮಹತ್ವದ ಸಭೆ!

ಸಿಎಂ ತವರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರ ಗೆಲುವು ಕೇವಲ ವೈಯಕ್ತಿಕ ವಿಜಯವಲ್ಲ, ಸಾಂಕೇತಿಕ ಗೆಲುವು ಎಂಬ ಹೇಳಿಕೆಯಲ್ಲಿ ಸಿದ್ದರಾಮಯ್ಯನವರ ಕಾರ್ಯತಂತ್ರದ ತಂತ್ರ ಎದ್ದು ಕಾಣುತ್ತದೆ.

ಈ ಮಧ್ಯೆ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ರಾಜ್ಯ ಜೆಡಿಎಸ್ ಮುಖ್ಯಸ್ಥರೂ ಆಗಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಕ್ಷೇತ್ರಗಳನ್ನು ಕೇಂದ್ರೀಕರಿಸಿ ಕೋರ್ ಕಮಿಟಿ ಸಭೆ ಮತ್ತು ಸಮಾವೇಶಗಳನ್ನು ನಡೆಸುತ್ತಿದ್ದಾರೆ.

ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ವಿಜಯೇಂದ್ರ, ಆಂತರಿಕ ಸವಾಲುಗಳ ನಡುವೆಯೂ, ವಿಶೇಷವಾಗಿ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಒಗ್ಗಟ್ಟಿನ ಅಗತ್ಯವನ್ನು ಒತ್ತಿ ಹೇಳಿದರು. ಹಾಲಿ ಸಂಸದ ಪ್ರತಾಪ್ ಸಿಂಹ ಬದಲಿಗೆ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಕಣಕ್ಕಿಳಿಸುವ ನಿರ್ಧಾರ ಬಿಜೆಪಿಯಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಮೈಸೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಾಜಕೀಯ ರಣತಂತ್ರ ತೀವ್ರಗೊಂಡಂತೆ, ಚುನಾವಣೆ ಗೆಲ್ಲಲೇಬೇಕೆಂಬ ಪಣ ತೊಟ್ಟಿರುವ ನಾಯಕರು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com