Lok Sabha election 2024: ಕರ್ನಾಟಕದಲ್ಲಿ ಕುಟುಂಬ ರಾಜಕಾರಣ ಈಗ ವಿಷಯವೇ ಅಲ್ಲ!

ಪ್ರತಿ ಚುನಾವಣೆ ಬಂದಾಗಲೂ ಆಡಳಿತ ಪಕ್ಷ-ಪ್ರತಿಪಕ್ಷಗಳು ಪರಸ್ಪರ ಕುಟುಂಬ ರಾಜಕೀಯದ ವಿಷಯ ತೆಗೆದುಕೊಂಡು ಆರೋಪ-ಪ್ರತ್ಯಾರೋಪ ಮಾಡುವುದು ಸಾಮಾನ್ಯ. ಕಳೆದ 2023ರ ವಿಧಾನಸಭೆ ಚುನಾವಣೆಯಲ್ಲಿ ಕುಟುಂಬ ರಾಜಕೀಯ ವಿಷಯ ಸದ್ದುಮಾಡಿತ್ತು, ರಾಜಕೀಯ ಪಕ್ಷಗಳು ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಲು ಹಿಂದೆಮುಂದೆ ಯೋಚಿಸಿದ್ದವು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಪ್ರತಿ ಚುನಾವಣೆ ಬಂದಾಗಲೂ ಆಡಳಿತ ಪಕ್ಷ-ಪ್ರತಿಪಕ್ಷಗಳು ಪರಸ್ಪರ ಕುಟುಂಬ ರಾಜಕೀಯದ ವಿಷಯ ತೆಗೆದುಕೊಂಡು ಆರೋಪ-ಪ್ರತ್ಯಾರೋಪ ಮಾಡುವುದು ಸಾಮಾನ್ಯ. ಕಳೆದ 2023ರ ವಿಧಾನಸಭೆ ಚುನಾವಣೆಯಲ್ಲಿ ಕುಟುಂಬ ರಾಜಕೀಯ ವಿಷಯ ಸದ್ದುಮಾಡಿತ್ತು, ರಾಜಕೀಯ ಪಕ್ಷಗಳು ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಲು ಹಿಂದೆಮುಂದೆ ಯೋಚಿಸಿದ್ದವು.

ಆದರೆ ಅದಕ್ಕೆ ಭಿನ್ನವಾಗಿ, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ವಂಶಾಡಳಿತ ರಾಜಕೀಯವು ವಿವಾದಾಸ್ಪದವಾದಂತೆ ಕಂಡುಬರುತ್ತಿಲ್ಲ. ಎಲ್ಲಾ ಪಕ್ಷಗಳು ಕುಟುಂಬದ ಸದಸ್ಯರನ್ನು ಸಮಾನವಾಗಿ ಪುತ್ರರು, ಹೆಣ್ಣುಮಕ್ಕಳು ಮತ್ತು ಅಳಿಯಂದಿರನ್ನು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಸಿರುವುದು ವಿಶೇಷವಾಗಿದೆ.

ಸಾಂಪ್ರದಾಯಿಕವಾಗಿ ವಂಶಾಡಳಿತ ರಾಜಕಾರಣದ ವಿರುದ್ಧ ಇಷ್ಟುದಿನ ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಬಿಜೆಪಿ, ಈ ಬಾರಿ ‘ಅಪ್ಪ-ಮಕ್ಕಳ ಪಕ್ಷ’ ಎಂಬ ಹಣೆಪಟ್ಟಿ ಕಟ್ಟಿಕೊಂಡ ಜೆಡಿಎಸ್ ಜತೆಗೆ ಮೈತ್ರಿ ಮಾಡಿಕೊಂಡು ಈಗ ವಂಶ ರಾಜಕಾರಣ ಬಗ್ಗೆ ಮೌನ ತಾಳಿದೆ. ಕಾಂಗ್ರೆಸ್, ವಿಶೇಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬ ರಾಜಕಾರಣ ಬಗ್ಗೆ ಗುಡುಗುತ್ತಿದ್ದರು. ಆದರೆ ಈ ಬಾರಿ ಕಾಂಗ್ರೆಸ್ ಸ್ವತಃ ಉನ್ನತ ಮಟ್ಟದ ನಾಯಕರ ಕುಟುಂಬ ಸದಸ್ಯರನ್ನು ಕಣಕ್ಕಿಳಿಸಿದೆ.

ಸಾಂದರ್ಭಿಕ ಚಿತ್ರ
ಸಚಿವರ ಮಕ್ಕಳು, ಸಂಬಂಧಿಕರಿಗೆ ಟಿಕೆಟ್ ನೀಡುವುದು ಕುಟುಂಬ ರಾಜಕಾರಣವಲ್ಲ: ಸಿಎಂ ಸಿದ್ದರಾಮಯ್ಯ

ಕುಟುಂಬ ಸದಸ್ಯರು ಕಣಕ್ಕೆ: ಈ ಬಾರಿ ಕಲಬುರಗಿಯಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಮನಿ, ಬೆಂಗಳೂರು ಗ್ರಾಮಾಂತರದಿಂದ ಬಿಜೆಪಿ ಟಿಕೆಟ್‌ನಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರ ಅಳಿಯ ಡಾ.ಸಿ.ಎನ್.ಮಂಜುನಾಥ್ ಸ್ಪರ್ಧಿಸುತ್ತಿದ್ದಾರೆ. ರಾಜ್ಯಸಭಾ ಸದಸ್ಯರಾದ ಖರ್ಗೆ ಮತ್ತು ಗೌಡ ಇಬ್ಬರೂ ತಮ್ಮದೇ ಆದ ಕಾರಣಗಳಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ.

ದೇವೇಗೌಡರ ಮೊಮ್ಮಗ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮತ್ತೊಮ್ಮೆ ಅಭ್ಯರ್ಥಿಯಾಗಿದ್ದು, ಮಂಡ್ಯದಿಂದ ದೇವೇಗೌಡರ ಪುತ್ರ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸ್ಪರ್ಧಿಸುತ್ತಿದ್ದಾರೆ. ಕುತೂಹಲಕಾರಿಯಾಗಿ, ಎಸ್‌ಸಿ ವರ್ಗಕ್ಕೆ ಮೀಸಲಾದ ಕೋಲಾರವನ್ನು ಹೊರತುಪಡಿಸಿ, ಒಕ್ಕಲಿಗ ಭದ್ರಕೋಟೆ ಎಂದು ಪರಿಗಣಿಸಲಾದ ಹಳೇ ಮೈಸೂರು ಪ್ರದೇಶದಲ್ಲಿ ದೇವೇ ಗೌಡರ ಸಂಬಂಧಿಕರು ಮಾತ್ರ ಕಣದಲ್ಲಿದ್ದಾರೆ.

ಬಿಜೆಪಿಯ ಕಥೆಯೂ ಇದಕ್ಕಿಂತ ಭಿನ್ನವಾಗಿಲ್ಲ. ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಶಿಕಾರಿಪುರ ಶಾಸಕ ಮತ್ತು ರಾಜ್ಯ ಪಕ್ಷದ ಮುಖ್ಯಸ್ಥರಾಗಿದ್ದರೆ, ಅವರ ಮತ್ತೊಬ್ಬ ಪುತ್ರ ಹಾಲಿ ಸಂಸದ ಬಿವೈ ರಾಘವೇಂದ್ರ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಮರುನಾಮಕರಣಗೊಂಡಿದ್ದಾರೆ. ಪಕ್ಷದೊಳಗಿನ ಅವರ ವಿರೋಧಿ ಹಾಗೂ ಆರ್‌ಎಸ್‌ಎಸ್ ನಿಷ್ಠಾವಂತ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಬಂಡಾಯವೆದ್ದಿದ್ದಾರೆ. ಯಡಿಯೂರಪ್ಪ ಅವರ ಪುತ್ರರಿಗೆ ಪ್ರಾಮುಖ್ಯತೆ ನೀಡುತ್ತಿರುವಾಗ, ಪಕ್ಷವು ಅವರ ಪುತ್ರ ಕಾಂತೇಶ್ ಅವರನ್ನು ಅದೇ ರೀತಿ ನಡೆಸಿಕೊಂಡಿಲ್ಲ ಎಂಬುದು ಅವರ ಆರೋಪವಾಗಿದೆ. ಕಾಂತೇಶ್ ಹಾವೇರಿ ಲೋಕಸಭಾ ಕ್ಷೇತ್ರದ ಆಕಾಂಕ್ಷಿಯಾಗಿದ್ದರು, ಆದರೆ ಪಕ್ಷವು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಅಭ್ಯರ್ಥಿ ಎಂದು ಘೋಷಿಸಿತು.

ಸಾಂದರ್ಭಿಕ ಚಿತ್ರ
Lok Sabha election 2024: ಮೈಸೂರು-ಕೊಡಗು ಕ್ಷೇತ್ರದಲ್ಲಿ 25 ವರ್ಷಗಳ ನಂತರ ರಾಜಕೀಯ ಭೂಮಿಕೆಗೆ ಒಡೆಯರ್ ಕುಟುಂಬ!

2018ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪುತ್ರ ಡಾ.ಯತೀಂದ್ರ ವರುಣಾ ಶಾಸಕರಾಗಿ ಆಯ್ಕೆಯಾಗುವಂತೆ ನೋಡಿಕೊಂಡಿದ್ದ ಸಿಎಂ ಸಿದ್ದರಾಮಯ್ಯ, ಸಮೀಕ್ಷಾ ವರದಿ ಹಾಗೂ ಸ್ಥಳೀಯ ಮುಖಂಡರ ಅಭಿಪ್ರಾಯದ ಮೇರೆಗೆ ಈ ಬಾರಿ ಕೊಡಗು-ಮೈಸೂರು ಕ್ಷೇತ್ರದಿಂದ ಅವರನ್ನು ಕಣಕ್ಕಿಳಿಸದಿರಲು ನಿರ್ಧರಿಸಿದರು.

ಆದರೆ ಇಪ್ಪತ್ತರ ಮಧ್ಯ ಮತ್ತು ಮೂವತ್ತರ ಆಸುಪಾಸಿನಲ್ಲಿರುವ ಸಚಿವರ ಮಕ್ಕಳಿಗೆ ಲೋಕಸಭೆ ಟಿಕೆಟ್ ನೀಡಿರುವ ಕಾಂಗ್ರೆಸ್ ಪಕ್ಷ ರಾಜಕೀಯ ವಲಯದಲ್ಲಿ ಟೀಕೆಗಳನ್ನು ಎದುರಿಸುತ್ತಿದೆ. ಎಲ್ಲ ಪಕ್ಷಗಳ ರಾಜಕೀಯ ನಾಯಕರ ಸಮಸ್ಯೆ ಏನೆಂದರೆ ಅಧಿಕಾರ ತಮ್ಮ ಕುಟುಂಬದೊಳಗೆ ಉಳಿಯಬೇಕು. ಚುನಾವಣೆಯ ಫಲಿತಾಂಶ ಏನೇ ಇರಲಿ, ಯಾವುದೇ ಬೇರೆ ಯುವ ನಾಯಕರು ಹೊರಹೊಮ್ಮದಂತೆ ತಮ್ಮ ಭಾಗದಲ್ಲಿ ಬಲವಾದ ಹಿಡಿತವನ್ನು ಹೊಂದುವ ಆಕಾಂಕ್ಷೆಯಿರುವಾಗ ಬೇರೆ ನಾಯಕರು ಹೊರಹೊಮ್ಮುವುದು, ಬೆಳೆಯುವುದು ಹೇಗೆ ಎಂದು ರಾಜಕೀಯ ವಿಶ್ಲೇಷಕರು ಪ್ರಶ್ನಿಸುತ್ತಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com