ಲೋಕಸಭಾ ಚುನಾವಣೆ: ಚಿಕ್ಕೋಡಿ ಸೇರಿದಂತೆ ಆರು ಕ್ಷೇತ್ರಗಳ ಆಕಾಂಕ್ಷಿಗಳಿಂದ ಪ್ರಜಾಕೀಯ ಅರ್ಜಿ ಆಹ್ವಾನ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರಜಾಕೀಯದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತಿದೆ. ಇದಕ್ಕಾಗಿ ಚಿಕ್ಕೋಡಿ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಆರು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸುತ್ತಿದೆ.
ಪ್ರಜಾಕೀಯ ಸಾಂದರ್ಭಿಕ ಚಿತ್ರ
ಪ್ರಜಾಕೀಯ ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರಜಾಕೀಯದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತಿದೆ. ಇದಕ್ಕಾಗಿ ಚಿಕ್ಕೋಡಿ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಆರು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸುತ್ತಿದೆ. ಚಿಕ್ಕೋಡಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ ಮತ್ತು ಧಾರವಾಡ ಲೋಕಸಭಾ ಕ್ಷೇತ್ರಗಳ ಆಸಕ್ತ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಜಾಕೀಯ ಸಾಂದರ್ಭಿಕ ಚಿತ್ರ
ಉಪೇಂದ್ರ 'ಪ್ರಜಾಕೀಯ' ಪಕ್ಷದ ಅಧಿಕೃತ ಚಿಹ್ನೆ 'ಆಟೋ'; ಚುನಾವಣಾ ಆಯೋಗ ಆದೇಶ; ಮಾಹಿತಿ ಹಂಚಿಕೊಂಡ ನಟ

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಜಾಕೀಯ ಸಂಸ್ಥಾಪಕ, ನಟ ಉಪೇಂದ್ರ, ಆಸಕ್ತ ಆಕಾಂಕ್ಷಿಗಳು ತಮ್ಮ ಎಲ್ಲಾ ಮಾಹಿತಿಗಳೊಂದಿಗೆ ಈ ಕೂಡಲೇ http://prajaakeeya.org ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಏಪ್ರಿಲ್ 5 ಕೊನೆಯ ದಿನ ಎಂದಿದ್ದಾರೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಏಪ್ರಿಲ್ 7 ರಂದು ಪಕ್ಷದ ವತಿಯಿಂದ ಬಿ ಫಾರಂ ವಿತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com