ಮಂಗಳೂರು: ವಿಧಾನಪರಿಷತ್ ಚುನಾವಣಾ ಕಣದಲ್ಲಿ ನಿವೃತ್ತ ಡಿಡಿಪಿಐ!

ಉಡುಪಿ ಜಿಲ್ಲೆಯ ಡಿಡಿಪಿಐ ಆಗಿ ನಿವೃತ್ತರಾಗಿರುವ ಶಿಕ್ಷಕ ಟಿ. ಭಾಸ್ಕರ್ ಶೆಟ್ಟಿ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಪರಿಷತ್ ಚುನಾವಣೆಗೆ ಸ್ಪರ್ಧಿಸಿದ್ದಾರೆ.
ಡಾ.ಅರುಣ್ ಹೊಸಕೊಪ್ಪ
ಡಾ.ಅರುಣ್ ಹೊಸಕೊಪ್ಪ
Updated on

ಮಂಗಳೂರು: ಉಡುಪಿ ಜಿಲ್ಲೆಯ ಡಿಡಿಪಿಐ ಆಗಿ ನಿವೃತ್ತರಾಗಿರುವ ಶಿಕ್ಷಕ ಟಿ. ಭಾಸ್ಕರ್ ಶೆಟ್ಟಿ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಪರಿಷತ್ ಚುನಾವಣೆಗೆ ಸ್ಪರ್ಧಿಸಿದ್ದಾರೆ.

ಬೋಧನೆ ಮತ್ತು ಆಡಳಿತದಲ್ಲಿ ಮೂರು ದಶಕಗಳಿಗೂ ಹೆಚ್ಚು ಅನುಭವ ಹೊಂದಿರುವ ತಾನು ಶಿಕ್ಷಕರನ್ನು ಪ್ರತಿನಿಧಿಸಲು ಅರ್ಹ ಅಭ್ಯರ್ಥಿ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ತಮಗೆ ಉತ್ತಮ ತಿಳುವಳಿಕೆ ಇದೆ ಎಂದ ಅವರು, ಶಿಕ್ಷಕರು ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಡಾ.ಅರುಣ್ ಹೊಸಕೊಪ್ಪ
ಕರ್ನಾಟಕ ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಗೆ ಬಿಜೆಪಿಗಿಂತ ಶೇ.5.9 ರಷ್ಟು ಹೆಚ್ಚು ಮತ!

ಇದೇ ಕ್ಷೇತ್ರದ ಮತ್ತೊಬ್ಬ ಸ್ವತಂತ್ರ ಅಭ್ಯರ್ಥಿ ಡಾ.ಅರುಣ್ ಹೊಸಕೊಪ್ಪ, ಶಿಕ್ಷಕರನ್ನು ಪ್ರತಿನಿಧಿಯಾಗಿ ಆಯ್ಕೆ ಮಾಡುವಂತೆ ಮತದಾರರಲ್ಲಿ ಮನವಿ ಮಾಡಿದರು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಹೊಸಕೊಪ್ಪ ಅವರು ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಾಲೆಗಳಲ್ಲಿ ಕೆಲಸ ಮಾಡಿದ್ದು, ಶಿಕ್ಷಕರ ಸಮಸ್ಯೆಗಳನ್ನು ಅರ್ಥಮಾಡಿಕೊಂಡಿದ್ದಾರೆ.

ಹಾಲಿ ಶಾಸಕ ಭೋಜೇಗೌಡ ಅವರು ಹಿಂದಿನ ಚುನಾವಣೆಯಲ್ಲಿ ಶಿಕ್ಷಕರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಅವರು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com