Karnataka MLC Elections: ಪಕ್ಷೇತರರಾಗಿ ಸ್ಪರ್ಧೆ; ರಘುಪತಿ ಭಟ್ ಗೆ ಬಿಜೆಪಿ ನೊಟೀಸ್!

ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆ ನಡೆಯುತ್ತಿದ್ದು, ಪಕ್ಷೇತರರಾಗಿ ಸ್ಪರ್ಧಿಸಿರುವ ಮಾಜಿ ಪರಿಷತ್ ಸದಸ್ಯ ರಘುಪತಿ ಭಟ್ ಗೆ ಬಿಜೆಪಿ ನೊಟೀಸ್ ಜಾರಿಗೊಳಿಸಿದೆ.
ರಘುಪತಿ ಭಟ್
ರಘುಪತಿ ಭಟ್
Updated on

ಬೆಂಗಳೂರು: ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆ ನಡೆಯುತ್ತಿದ್ದು, ಪಕ್ಷೇತರರಾಗಿ ಸ್ಪರ್ಧಿಸಿರುವ ಮಾಜಿ ಪರಿಷತ್ ಸದಸ್ಯ ರಘುಪತಿ ಭಟ್ ಗೆ ಬಿಜೆಪಿ ನೊಟೀಸ್ ಜಾರಿಗೊಳಿಸಿದೆ.

ಜೂ.03 ರಂದು ವಿಧಾನಪರಿಷತ್ ಚುನಾವಣೆ ನಡೆಯಲಿದ್ದು, ನೈಋತ್ಯ ಪದವೀಧರರ ಕ್ಷೇತ್ರದಿಂದ ರಘುಪತಿ ಭಟ್ ಪಕ್ಷೇತರರಾಗಿ ಸ್ಪರ್ಧಿಸಿದ್ದಾರೆ.

ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಸ್ಪರ್ಧಿಸುತ್ತಿರುವುದು ಪಕ್ಷದ ಶಿಸ್ತಿಗೆ ಧಕ್ಕೆ ಉಂಟುಮಾಡಿದೆ ಎಂದು ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಹೇಳಿದ್ದು, 2 ದಿನಗಳಲ್ಲಿ ಪಕ್ಷಕ್ಕೆ ಸ್ಪಷ್ಟನೆ ನೀಡಬೇಕೆಂದು ಸೂಚಿಸಿದ್ದಾರೆ. ನೈಋತ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ರಘುಪತಿ ಭಟ್ ಬದಲಿಗೆ ಧನಂಜಯ ಸರ್ಜಿ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಿದೆ.

ರಘುಪತಿ ಭಟ್
ಕೈ ತಪ್ಪಿದ ವಿಧಾನ ಪರಿಷತ್ ಟಿಕೆಟ್‌: ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ರಘುಪತಿ ಭಟ್ ನಿರ್ಧಾರ!

2023 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಅವರಿಗೆ ಟಿಕೆಟ್ ನಿರಾಕರಿಸಿದಾಗಿನಿಂದ ಮತ್ತು ಚುನಾವಣೆಯಲ್ಲಿ ಗೆದ್ದ ಯಶಪಾಲ್ ಸುವರ್ಣರನ್ನು ಕಣಕ್ಕಿಳಿಸಿದಾಗಿನಿಂದ ರಘುಪತಿ ಭಟ್ ಅಸಮಾಧಾನ ಹೊಂದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com