ಸಿಎಂ ಆಗಿದ್ದಾಗಲೂ ಬಸವರಾಜ ಬೊಮ್ಮಾಯಿ ಶಿಗ್ಗಾಂವಿಗೆ ಏನೂ ಮಾಡಿಲ್ಲ: ಈಶ್ವರ್ ಖಂಡ್ರೆ

ಖಾಸಗಿ ಹೊಟೇಲ್‌ನಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಎಚ್ ಕೆ ಪಾಟೀಲ್, ಶಿವಾನಂದ ಪಾಟೀಲ್, ಸತೀಶ ಜಾರಕಿಹೊಳಿ, ಶಾಸಕ ಲಕ್ಷ್ಮಣ್ ಸವದಿ ಮತ್ತಿತರ ಹಿರಿಯ ನಾಯಕರು ಪಾಲ್ಗೊಂಡರು.
Congress leaders meeting
ಈಶ್ವರ್ ಖಂಡ್ರೆ ನೇತೃತ್ವದಲ್ಲಿನ ಸಭೆ
Updated on

ಹುಬ್ಬಳ್ಳಿ: ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯತಂತ್ರ ಕುರಿತು ಚರ್ಚಿಸಲು ಹಲವಾರು ಸಚಿವರು ಹಾಗೂ ಹಿರಿಯ ಮುಖಂಡರು ಹುಬ್ಬಳ್ಳಿಯಲ್ಲಿ ಭಾನುವಾರ ಸಭೆ ನಡೆಸಿದರು.

ಖಾಸಗಿ ಹೊಟೇಲ್‌ನಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಎಚ್ ಕೆ ಪಾಟೀಲ್, ಶಿವಾನಂದ ಪಾಟೀಲ್, ಸತೀಶ ಜಾರಕಿಹೊಳಿ, ಶಾಸಕ ಲಕ್ಷ್ಮಣ್ ಸವದಿ ಮತ್ತಿತರ ಹಿರಿಯ ನಾಯಕರು ಪಾಲ್ಗೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಈಶ್ವರ್ ಖಂಡ್ರೆ, ಶಿಗ್ಗಾಂವಿ ಅಭಿವೃದ್ಧಿ ಆಧಾರದ ಮೇಲೆ ಉಪ ಚುನಾವಣೆ ಹೋರಾಟ ನಡೆಯಲಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗಲೂ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಈ ಭಾಗದ ಅಭಿವೃದ್ಧಿಯ ಭರವಸೆ ಈಡೇರಿಸುವಲ್ಲಿ ಬಿಜೆಪಿ ವಿಫಲವಾಗಿದೆ. ಇದಕ್ಕೆ ವ್ಯತಿರಿಕ್ತವಾಗಿ ಕಾಂಗ್ರೆಸ್ ತನ್ನ ಭರವಸೆಗಳನ್ನು ಈಡೇರಿಸಿರುವುದರಿಂದ ಜನರು ಪಕ್ಷವನ್ನು ಬೆಂಬಲಿಸುತ್ತಿದ್ದಾರೆ ಎಂದು ಹೇಳಿದರು.

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಯೋಜನೆಗಳನ್ನು ಹಿಂಪಡೆಯಲಾಗುತ್ತಿದೆ ಎಂದು ಬಿಜೆಪಿ ಸುಳ್ಳು ಮಾಹಿತಿಯನ್ನು ಹರಡುತ್ತಿದೆ. ಯೋಜನೆಗಳನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದರು.

Congress leaders meeting
ಶಿಗ್ಗಾಂವಿ ಉಪಚುನಾವಣೆ: ನನ್ನನ್ನೇ ಅಭ್ಯರ್ಥಿ ಎಂದು ಭಾವಿಸಿ ನನ್ನ ಮಗನಿಗೆ ಮತ ನೀಡಿ- ಸಂಸದ ಬೊಮ್ಮಾಯಿ

ಪ್ರವಾಸೋದ್ಯಮ ಸಚಿವ ಎಚ್‌ಕೆ ಪಾಟೀಲ್‌ ಮಾತನಾಡಿ, ಶಿಗ್ಗಾಂವಿಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com