JPC ಅಧ್ಯಕ್ಷರಿಂದ ವಕ್ಫ್ ಕಾಯ್ದೆಗೆ ತಿದ್ದುಪಡಿ ಭರವಸೆ: ಯತ್ನಾಳ್ ಅನಿರ್ದಿಷ್ಟಾವಧಿ ಧರಣಿ ಅಂತ್ಯ

ಇಂದು ಧರಣಿ ಸ್ಥಳಕ್ಕೆ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಹಾಗೂ ಜೆಪಿಸಿ ಸದಸ್ಯ ತೇಜಸ್ವಿ ಸೂರ್ಯ ಅವರು ಭೇಟಿ ನೀಡಿದರು.
ಧರಣಿ ಅಂತ್ಯ
ಧರಣಿ ಅಂತ್ಯ
Updated on

ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ 'ವಕ್ಫ್ ಹಠಾವೋ, ದೇಶ ಬಚಾವೋ' ಎಂಬ ಘೋಷಣೆಯೊಂದಿಗೆ ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಧರಣಿ ಗುರುವಾರ ಅಂತ್ಯವಾಗಿದೆ.

ಇಂದು ಧರಣಿ ಸ್ಥಳಕ್ಕೆ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಹಾಗೂ ಜೆಪಿಸಿ ಸದಸ್ಯ ತೇಜಸ್ವಿ ಸೂರ್ಯ ಅವರು ಭೇಟಿ ನೀಡಿ, ವಕ್ಪ್ ಬೋರ್ಡ್ ಸಮಸ್ಯೆ ಆಲಿಸಿ ಅಹವಾಲು ಸ್ವೀಕರಿಸಿದರು. ಅಲ್ಲದೆ ಎಲ್ಲಾ ಸಮಸ್ಯೆಗಳಿಗೆ ಹೊಸ ವಕ್ಪ್ ತಿದ್ದುಪಡಿ ಕಾಯ್ದೆ ಮೂಲಕ ಪರಿಹಾರ ನೀಡುವ ಭರವಸೆ ನೀಡಿದ ನಂತರ ಧರಣಿ ಹಿಂಪಡೆಯಲಾಯಿತು.

ಈ ವೇಳೆ ಮಾತನಾಡ ಪಾಲ್ ಅವರು, ಜೆಪಿಸಿ ಮೂಲಕ ವಕ್ಪ್ ಕಾಯ್ದೆಗೆ ಪಾರದರ್ಶಕ ತಿದ್ದುಪಡಿ ತರಲಾಗುವುದು. ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸಲಾಗುವುದು. ಭವಿಷ್ಯದಲ್ಲಿ ವಕ್ಪ್ ನಿಂದ ರೈತರಿಗೆ, ಮಠ, ಮಂದಿರ, ಐತಿಹಾಸಿಕ ಸ್ಮಾರಕ ಸೇರಿದಂತೆ ಯಾರಿಗೂ ತೊಂದರೆಯಾಗದಂತೆ ಅಗತ್ಯ ತಿದ್ದುಪಡಿ ತರಲು ಜೆಪಿಸಿ ಪೂರಕ ಸಲಹೆ ನೀಡಲಿದೆ ಎಂದು ಹೇಳಿದರು.

ಧರಣಿ ಅಂತ್ಯ
ವಕ್ಫ್ ಆಸ್ತಿ ವಿವಾದ: ಹುಬ್ಬಳ್ಳಿ, ವಿಜಯಪುರಕ್ಕೆ JPC ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ; ರೈತರಿಂದ 500 ಅಹವಾಲು ಸ್ವೀಕಾರ

ಅಗತ್ಯಬಿದ್ದರೆ ರೈತರಿಗೆ ನೋಟಿಸ್ ನೀಡಿರುವ ಜಿಲ್ಲಾಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ವಕ್ಫ್ ಬೋರ್ಡ್ ಅಧಿಕಾರಿಗಳನ್ನು ದೆಹಲಿಗೆ ಕರೆಯಿಸಿ ವಿಚಾರಣೆಗೆ ಒಳಪಡಿಸಲಾಗುವುದು ಎಂದು ಪಾಲ್ ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com