ಮುಡಾ ಹಗರಣದ ತನಿಖೆ CBIಗೆ ವರ್ಗಾಯಿಸಿ: ಸರ್ಕಾರಕ್ಕೆ BJP ಆಗ್ರಹ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿ ನಡೆದಿರುವ ಅಕ್ರಮಗಳ ತನಿಖೆಯನ್ನು ಸಿಬಿಐಗೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಬಿಜೆಪಿ ಒತ್ತಾಯಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿ ನಡೆದಿರುವ ಅಕ್ರಮಗಳ ತನಿಖೆಯನ್ನು ಸಿಬಿಐಗೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಬಿಜೆಪಿ ಒತ್ತಾಯಿಸಿದೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಎಂಎಲ್‌ಸಿ ಎನ್‌ ರವಿಕುಮಾರ್‌ಅವರು, ಸಿಎಂ ಸಿದ್ದರಾಮಯ್ಯ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಆಗ್ರಹಿಸಿದರು.

ಮುಡಾ ಪ್ರಕರಣದಲ್ಲಿ ಜೆಡಿಎಸ್‌ನ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರು ಸಿದ್ದರಾಮಯ್ಯ ಅವರನ್ನು ಬೆಂಬಲಿಸಿರುವ ಕುರಿತು ಪ್ರತಿಕ್ರಿಯಿಸಿ, ತಮ್ಮ ನಿವೇಶನಗಳನ್ನು ಕಳೆದುಕೊಳ್ಳುವ ಭೀತಿಯಿಂದ ಈ ರೀತಿ ಹೇಳಿಕೆ ನೀಡಿರಬಹುದು ಎಂದು ಹೇಳಿದರು.

ಸಾಂದರ್ಭಿಕ ಚಿತ್ರ
ಮುಡಾ ಹಗರಣದ ಗಮನ ಬೇರೆಡೆ ಸೆಳೆಯಲು ಕಾಂಗ್ರೆಸ್ ಸರ್ಕಾರದಿಂದ ಸಾವರ್ಕರ್ ಟಾರ್ಗೆಟ್: ವಿಜಯೇಂದ್ರ

ದಸರಾ ಉದ್ಘಾಟನೆ ವೇಳೆ ಸಿಎಂ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಜೆಡಿಎಸ್ ಮುಖಂಡರು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು.

ಇದೇ ವೇಳೆ ಮೈಸೂರಿನಲ್ಲಿ ಇತ್ತೀಚೆಗೆ ನಡೆದ ದಸರಾ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ ಅವರು ರಾಜಕೀಯ ಮಾತನಾಡಿದ್ದಕ್ಕಾಗಿ ಮತ್ತು ಸಿದ್ದರಾಮಯ್ಯನವರನ್ನು ಹೊಗಳಿದ್ದಕ್ಕಾಗಿ ವಾಗ್ದಾಳಿ ನಡೆಸಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com