ಕಾಂಗ್ರೆಸ್ ಜಾತಿ ರಾಜಕಾರಣ ತಿರಸ್ಕರಿಸಿದ ಹರಿಯಾಣ ಮತದಾರರು: ಬಸವರಾಜ ಬೊಮ್ಮಾಯಿ

ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ, ಪಕ್ಷದ ಸ್ಥಳೀಯ ಸಂಘಟನೆಯ ಶಕ್ತಿಯಿಂದ ಹರಿಯಾಣದಲ್ಲಿ ಪಕ್ಷ ಸ್ಪಷ್ಟ ಬಹುಮತ ಗಳಿಸಿದೆ. ಲೋಕಸಭೆ ಚುನಾವಣೆ ನಂತರ ನಡೆದ ಹರಿಯಾಣದ ಫಲಿತಾಂಶ, ರಾಷ್ಟ್ರ ರಾಜಕಾರಣದ ಪಥವನ್ನು ತೋರಿಸುತ್ತಿದೆ
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Updated on

ಬೆಂಗಳೂರು: ಹರಿಯಾಣದಲ್ಲಿ ಬಿಜೆಪಿ ಸಂಪೂರ್ಣವಾಗಿ ಬಹುಮತ ಗಳಿಸಿರುವುದು ರಾಷ್ಟ್ರ ರಾಜಕಾರಣ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದರ ಸ್ಪಷ್ಟ ಸೂಚನೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೇಳಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ, ಪಕ್ಷದ ಸ್ಥಳೀಯ ಸಂಘಟನೆಯ ಶಕ್ತಿಯಿಂದ ಹರಿಯಾಣದಲ್ಲಿ ಪಕ್ಷ ಸ್ಪಷ್ಟ ಬಹುಮತ ಗಳಿಸಿದೆ. ಲೋಕಸಭೆ ಚುನಾವಣೆ ನಂತರ ನಡೆದ ಹರಿಯಾಣದ ಫಲಿತಾಂಶ, ರಾಷ್ಟ್ರ ರಾಜಕಾರಣದ ಪಥವನ್ನು ತೋರಿಸುತ್ತಿದೆ ಎಂದರು.

ಹರಿಯಾಣ ಜನರು ಕಾಂಗ್ರೆಸ್ ಪಕ್ಷದ ಜಾತಿ ಆಧಾರಿತ ರಾಜಕೀಯವನ್ನು ತಿರಸ್ಕರಿಸಿದ್ದಾರೆ. ಬಿಜೆಪಿಯನ್ನು ಸಂವಿಧಾನ ವಿರೋಧಿ ಎಂದು ಬಿಂಬಿಸಲು ಕಾಂಗ್ರೆಸ್ ಪ್ರಯತ್ನಿಸಿತು. ಆದರೆ ಜನರು ಸಾಬ್ ಕಾ ಸಾಥ್, ಸಾಬ್ ಕಾ ವಿಕಾಸ್, ಅಮೃತ ಕಾಲ ಪರಿಕಲ್ಪನೆಯನ್ನು ಬೆಂಬಲಿಸಿದ್ದಾರೆ. ಮಹಾರಾಷ್ಟ್ರದಲ್ಲೂ ಇದೇ ರೀತಿಯ ಫಲಿತಾಂಶ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಕಣಿವೆಯ ಹೊರಗೆಯೂ ಬಿಜೆಪಿ ಬೆಂಬಲ ಗಳಿಸಿದೆ. ರಾಜಕೀಯ ಇನ್ನೂ ನಡೆಯುತ್ತಿದೆ. ಇದು ಅಂತ್ಯವಲ್ಲ. ಹರಿಯಾಣದಲ್ಲಿ ಕಾಂಗ್ರೆಸ್ ತಮ್ಮ ಸೋಲನ್ನು ಘನತೆಯಿಂದ ಒಪ್ಪಿಕೊಂಡರೆ, ನಾವು ಅದನ್ನು ಗೌರವಿಸುತ್ತೇವೆ ಎಂದು ಅವರು ಹೇಳಿದರು.

ಜಾತಿಗಣತಿ ಮತ್ತು ಒಳಮೀಸಲಾತಿ ವಿಚಾರದಲ್ಲಿ ಬಿಜೆಪಿ ನಿಲುವು ಏನು ಎಂಬ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ಒಳಮೀಸಲಾತಿ ಕುರಿತು ನಮ್ಮ ನಿಲುವು ಸ್ಪಷ್ಟವಾಗಿದೆ.ಎಲ್ಲರಿಗೂ ನ್ಯಾಯ ದೊರಕಿಸಿಕೊಡುವಂತೆ ಶಿಫಾರಸು ಮಾಡಿದ್ದೇವೆ.ಕಾಂಗ್ರೆಸ್ ಡಬಲ್ ಗೇಮ್ ಆಡುತ್ತಿದೆ. ಆರಂಭದಲ್ಲಿ ಸಂವಿಧಾನ ತಿದ್ದುಪಡಿ ನಂತರ ಜಾರಿಗೆ ತರುವುದಾಗಿ ವಿಳಂಬ ತಂತ್ರ ಅನುಸರಿಸಿದವರು ಈಗ ಸುಪ್ರೀಂಕೋರ್ಟ್ ತೀರ್ಪಿನ ನಂತರ ಅದರ ಬಗ್ಗೆ ಚರ್ಚಿಸುವುದಾಗಿ ಹೇಳುತ್ತಿದ್ದಾರೆ. ಅವರಿಗೆ ದಲಿತ, ಹಿಂದುಳಿದ ವರ್ಗಗಳ ಅಭಿವೃದ್ಧಿಯಲ್ಲಿ ಆಸಕ್ತಿ ಇಲ್ಲ ಎಂದು ಟೀಕಿಸಿದರು.

ಬಸವರಾಜ ಬೊಮ್ಮಾಯಿ
Haryana, J&K Election 2024 Results LIVE: ಹರಿಯಾಣದಲ್ಲಿ ಹ್ಯಾಟ್ರಿಕ್ ಗೆಲುವಿನತ್ತ ಬಿಜೆಪಿ, ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆಯತ್ತ Congress-NC

ಜಾತಿ ಗಣತಿ ವಿಚಾರದಲ್ಲಿ ಕಾಂಗ್ರೆಸ್ ನಿಲುವನ್ನು ಟೀಕಿಸಿದ ಅವರು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ನಾನು ಜಾತಿ ಗಣತಿ ವರದಿ ತಿರಸ್ಕರಿಸಿರುವುದಾಗಿ ಪಕ್ಷ ಹೇಳಿದೆ. ಕಾಂತರಾಜು ಅವರು 2017ರಲ್ಲಿ ಸಿಎಂ ಸಿದ್ದರಾಮಯ್ಯ ಅವಧಿಯಲ್ಲಿ ವರದಿ ಸಲ್ಲಿಸಿದ್ದರು. ಅವರು ಹಿಂದುಳಿದ ವರ್ಗಗಳ ನಾಯಕ ಆಗಿದ್ದರೆ ಅವರು ಅದನ್ನು ಏಕೆ ಸ್ವೀಕರಿಸಲಿಲ್ಲ? ಎಂದು ಪ್ರಶ್ನಿಸಿದ ಅವರು, ಕಾಂತರಾಜು ಅವರು ಅಧ್ಯಯನ ನಡೆಸಿ ವರದಿ ಸಿದ್ಧಪಡಿಸಿದ್ದಾರೆ. ಹಿಂದುಳಿದ ವರ್ಗಗಳ ಆಯೋಗದ ಹಾಲಿ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ವರದಿ ತಿದ್ದುಪಡಿಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಜಾತಿ ಗಣತಿ ವಿಚಾರದಲ್ಲಿ ಬಿಜೆಪಿ ನಿಲುವು ಸ್ಪಷ್ಟವಾಗಿದೆ. ಹಿಂದುಳಿದ ವರ್ಗಗಳ ಅಭಿವೃದ್ಧಿ ಅತ್ಯಗತ್ಯ. ಈ ವಿಷಯವು ಗೊಂದಲದ ಮೂಲವಾಗಬಾರದು ಮತ್ತು ಸಮಾಜದಲ್ಲಿ ವೈಷಮ್ಯವನ್ನು ಉಂಟುಮಾಡಬಾರದು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com