ಶಿಗ್ಗಾಂವಿ ಬಂಡಾಯ: ಅಜ್ಜಂಪೀರ್ ಖಾದ್ರಿ ಮನವೊಲಿಸುವಲ್ಲಿ ಸಿಎಂ ಸಿದ್ದರಾಮಯ್ಯ ಯಶಸ್ವಿ

ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ವಿರುದ್ಧ ಬಂಡೆದ್ದ ಅಜ್ಜಂಪೀರ್ ಖಾದ್ರಿ ಕೊನೆ ಗಳಿಗೆಯಲ್ಲಿ ನಿನ್ನೆ ನಾಮಪತ್ರ ಸಲ್ಲಿಸಿದ್ದರು. ಅವರನ್ನು ಮನವೊಲಿಸುವಲ್ಲಿ ಸಿಎಂ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ.
CM Siddaramaiah with Ajjampir khadri
ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಅಜ್ಜಂಪೀರ್ ಖಾದ್ರಿ
Updated on

ಬೆಂಗಳೂರು: ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಅಖಾಡ ರಂಗೇರಿದೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ನಿನ್ನೆ ಪ್ರಮುಖ ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವುದರೊಂದಿಗೆ ಪ್ರಚಾರ ಆರಂಭಿಸಿವೆ.

ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ವಿರುದ್ಧ ಬಂಡೆದ್ದ ಅಜ್ಜಂಪೀರ್ ಖಾದ್ರಿ ಕೊನೆ ಗಳಿಗೆಯಲ್ಲಿ ನಿನ್ನೆ ನಾಮಪತ್ರ ಸಲ್ಲಿಸಿದ್ದರು. ಅವರನ್ನು ಮನವೊಲಿಸುವಲ್ಲಿ ಸಿಎಂ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸುಮಾರು ಅರ್ಧಗಂಟೆ ಅಜ್ಜಂಪೀರ್ ಖಾದ್ರಿ ಅವರೊಂದಿಗೆ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ. ಈ ವೇಳೆ ಅವರು ನಾಮಪತ್ರ ವಾಪಸ್ ಪಡೆಯುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಬೇಕು, ಬಿಜೆಪಿ ಅಭ್ಯರ್ಥಿ ಸೋಲಿಸಬೇಕು, ನೀನು ಪಕ್ಷದ ಪರ ಕೆಲಸ ಮಾಡು ಎಂದು ಮನವೊಲಿಸಿದ್ದು, ಮಾಜಿ ಶಾಸಕ ಅಜ್ಜಂಪೀರ್ ತಮ್ಮ ನಾಮಪತ್ರ ವಾಪಸ್ ಪಡೆಯುತ್ತಾರೆ ಎನ್ನಲಾಗಿದೆ. ಆದರೆ, ಮತ್ತೋರ್ವ ಬಂಡಾಯ ಅಭ್ಯರ್ಥಿ ಮಂಜುನಾಥ್ ಕುನ್ನೂರು ಅವರು ನಾಮಪತ್ರ ವಾಪಸ್ ಪಡೆಯುತ್ತಾರಾ ಎಂಬುದನ್ನು ಕಾದು ನೋಡಬೇಕಾಗಿದೆ.

CM Siddaramaiah with Ajjampir khadri
ಉಪ ಚುನಾವಣೆ ನಂತರ ರಾಜ್ಯ ರಾಜಕಾರಣದಲ್ಲಿ ಬದಲಾವಣೆ? (ಸುದ್ದಿ ವಿಶ್ಲೇಷಣೆ)

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com