ಮಂಡ್ಯದಲ್ಲಿ ಬಿಜೆಪಿ ಪಕ್ಷ ಕಟ್ಟಲು ಮಾಜಿ ಸಂಸದೆ ಸುಮಲತಾ ಅಂಬರೀಶ್ ಮುಂದು!

ಪಕ್ಷ ದುರ್ಬಲವಾಗಿರುವ ಮಂಡ್ಯದಲ್ಲಿ ಬಿಜೆಪಿಯನ್ನು ಕಟ್ಟಬೇಕೆಂದಿದ್ದೇನೆ, ಪಕ್ಷ ಕಟ್ಟಲು ಬಲಿಷ್ಠ ನಾಯಕರ ಅವಶ್ಯಕತೆ ಇದೆ. ಹಲವು ವರ್ಷಗಳಿಂದ ಮಂಡ್ಯ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳನ್ನು ಪಕ್ಷ ಸಿ ವರ್ಗದಲ್ಲಿ ಇರಿಸಿದೆ.
ಸುಮಲತಾ ಅಂಬರೀಶ್
ಸುಮಲತಾ ಅಂಬರೀಶ್
Updated on

ಮಂಡ್ಯ: ಮಂಡ್ಯದಲ್ಲಿ ಬಿಜೆಪಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದಾಗಿ ಮಾಜಿ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

ಪಕ್ಷ ದುರ್ಬಲವಾಗಿರುವ ಮಂಡ್ಯದಲ್ಲಿ ಬಿಜೆಪಿಯನ್ನು ಕಟ್ಟಬೇಕೆಂದಿದ್ದೇನೆ, ಪಕ್ಷ ಕಟ್ಟಲು ಬಲಿಷ್ಠ ನಾಯಕರ ಅವಶ್ಯಕತೆ ಇದೆ. ಹಲವು ವರ್ಷಗಳಿಂದ ಮಂಡ್ಯ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳನ್ನು ಪಕ್ಷ ಸಿ ವರ್ಗದಲ್ಲಿ ಇರಿಸಿದೆ. ಇದು ಈ ಕ್ಷೇತ್ರಗಳಲ್ಲಿ ಪಕ್ಷ ದುರ್ಬಲವಾಗಿರುವುದು ಮತ್ತು ಹೆಚ್ಚಿನ ಸಮಯಗಳಲ್ಲಿ ಮೂರನೇ ಸ್ಥಾನದಲ್ಲಿದೆ ಎಂಬುದನ್ನು ಸೂಚಿಸುತ್ತದೆ ಎಂದಿದ್ದಾರೆ.

ಕಳೆದ ಲೋಕಸಭೆ ಅವಧಿಯಲ್ಲಿ ಸ್ವತಂತ್ರ ಸಂಸದೆಯಾಗಿ ಸೇವೆ ಸಲ್ಲಿಸಿದ್ದ ಸುಮಲತಾ ಈ ವರ್ಷದ ಏಪ್ರಿಲ್‌ನಲ್ಲಿ ಬಿಜೆಪಿ ಸೇರಿದ್ದರು. ಆದರೆ ಇತ್ತೀಚಿಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಅವರನ್ನು ಕಣಕ್ಕಿಳಿಸಿರಲಿಲ್ಲ. ಈ ಹಿನ್ನಡೆಯ ಹೊರತಾಗಿಯೂ, ಅವರು ಆಶಾವಾದಿಯಾಗಿ ಉಳಿದಿದ್ದು, ಬಿಜೆಪಿಯಲ್ಲಿ ತನ್ನ ಹೊಸ ಪಾತ್ರಕ್ಕೆ ಸಮರ್ಪಿಸಿಕೊಂಡಿದ್ದಾರೆ. ಬಿಜೆಪಿ ಪರ ಕೆಲಸ ಮಾಡುತ್ತಿರುವುದಕ್ಕೆ ಖುಷಿಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಸಾಂಪ್ರದಾಯಿಕವಾಗಿ ಜೆಡಿಎಸ್ ಮತ್ತು ಕಾಂಗ್ರೆಸ್ ಪ್ರಾಬಲ್ಯ ಹೊಂದಿರುವ ಮಂಡ್ಯ ರಾಜಕೀಯದಲ್ಲಿ ಬಿಜೆಪಿಯೊಂದಿಗಿನ ಅವರ ಹೊಂದಾಣಿಕೆ ನಿರ್ಧಾರ ಮಹತ್ವದ್ದಾಗಿದೆ. ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಳ್ಳುವ ಮೂಲಕ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ನಿರಾಯಾಸವಾಗಿ ಗೆಲುವು ಸಾಧಿಸಿದ್ದರು.

ಸುಮಲತಾ ಅಂಬರೀಶ್
ದರ್ಶನ್ ಮತ್ತಿನ್ಯಾರ ಜೊತೆ ಮಾತಾಡ್ಬೇಕು, ಜೈಲಲ್ಲಿ ಕ್ರಿಮಿನಲ್ಸ್ ಅಲ್ಲದೆ ಮತ್ತ್ಯಾರು ಸಿಗ್ತಾರೆ ಹೇಳಿ: ಸುಮಲತಾ ಅಂಬರೀಷ್

ಸುಮಲತಾ ಅವರು ದಿವಂಗತ ನಟ ಮತ್ತು ರಾಜಕಾರಣಿ ಅಂಬರೀಶ್ ಅವರ ಪತ್ನಿ. ಪಕ್ಷದ ಸಾಂಸ್ಥಿಕ ರಚನೆಯನ್ನು ಬಲಪಡಿಸಲು ತನ್ನ ಸ್ಥಳೀಯ ಬೆಂಬಲವನ್ನು ಬಳಸಿಕೊಳ್ಳುವ ಗುರಿಯನ್ನು ಅವರು ಹೊಂದಿದ್ದಾರೆ. ಈ ಪ್ರದೇಶದಲ್ಲಿ ಪಕ್ಷದ ದೌರ್ಬಲ್ಯಗಳನ್ನು ಪರಿಹರಿಸಲು ಸ್ಥಳೀಯ ಬಿಜೆಪಿ ಘಟಕಗಳಲ್ಲಿ ಪ್ರಬಲ ನಾಯಕರನ್ನು ಬೆಳೆಸಲು ಅವರು ಒತ್ತು ನೀಡುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com