ಬೆಂಗಳೂರು: ಮಂಡ್ಯ ಸಂಸದೆ, ನಟಿ ಸುಮಲತಾ ಅಂಬರೀಶ್ ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನು ಭೇಟಿಯಾಗಿದ್ದಾರೆ. ಈ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಬಗ್ಗೆ ಒತ್ತಡ ಹಾಕಿರುವ ಊಹಾಪೋಹಗಳು ಹರಿದಾಡುತ್ತಿವೆ.
2019ರ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಸೋಲಿಸಿದ್ದ ಸಮಲತಾ ಅಂಬರೀಷ್, ನವದೆಹಲಿಯಲ್ಲಿಂದು ಬಿಜೆಪಿಯ ಈ ಇಬ್ಬರು ಉನ್ನತ ನಾಯಕರನ್ನು ಭೇಟಿ ಮಾಡಿದ್ದು, ಅವರೊಂದಿಗೆ ಮಂಡ್ಯ ಲೋಕಸಭಾ ಕ್ಷೇತ್ರ ಹಾಗೂ ಚುನಾವಣೆ ಕುರಿತು ಅನೌಪಚಾರಿಕವಾಗಿ ಮಾತುಕತೆ ನಡೆಸಿದ್ದು, ತಮ್ಮ ಸಹಕಾರದ ಮಾತುಗಳಿಗೆ ಧ್ಯನವಾದ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ ನಡ್ಡಾ ಅವರನ್ನು ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ.ಎಲ್. ಸಂತೋಷ್ ಅವರನ್ನು ಅನೌಪಚಾರಿಕವಾಗಿ ಇಂದು ಭೇಟಿ ಭೇಟಿ ಮಾಡಿ ಮಂಡ್ಯ ಕ್ಷೇತ್ರ ಹಾಗೂ ಲೋಕಸಭಾ ಚುನಾವಣೆ ಕುರಿತಂತೆ ಚರ್ಚಿಸಲಾಯಿತು.
ತಮ್ಮ ಅಮೂಲ್ಯ ಸಮಯವನ್ನು ನೀಡಿ, ನನ್ನ ಮಾತುಗಳನ್ನು ಆಲಿಸಿದ… pic.twitter.com/T4qP7cdyNd
— Sumalatha Ambareesh
Advertisement