ಜಾತಿ ಜನಗಣತಿ ವರದಿ ಮೂಲಕ ಸಮಾಜ ಒಡೆಯಲು ಸಂಚು: ಸರ್ಕಾರದ ವಿರುದ್ಧ ಅರವಿಂದ ಬೆಲ್ಲದ್ ವಾಗ್ದಾಳಿ

ಮನೆ-ಮನೆಗೆ ತೆರಳಿ ದತ್ತಾಂಶ ಸಂಗ್ರಹವನ್ನು ಕೈಗೊಳ್ಳದೆ ಸಿದ್ದರಾಮಯ್ಯ ಸರ್ಕಾರ ಜಾತಿ ಜನಗಣತಿ ನಡೆಸಿದೆ. ಇದು ಸಮಾಜವನ್ನು ವಿಭಜಿಸುವ ಪಿತೂರಿಯಾಗಿದೆ.
ಶಾಸಕ ಅರವಿಂದ ಬೆಲ್ಲದ್
ಶಾಸಕ ಅರವಿಂದ ಬೆಲ್ಲದ್
Updated on

ಬೆಂಗಳೂರು: ರಾಜ್ಯ ಸರ್ಕಾರ ಪರಿಗಣಿಸಿರುವ ಜಾತಿ ಜನಗಣತಿ ವರದಿಯ ಬಗ್ಗೆ ಬೇಸರ ವ್ಯಕ್ತಪಡಿಸಿರುವ ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ್ ಅವರು, ಇದು ಸಮಾಜವನ್ನು ವಿಭಜಿಸುವ ಪಿತೂರಿಯಲ್ಲದೆ ಬೇರೇನೂ ಅಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ್ ಅವರು ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮನೆ-ಮನೆಗೆ ತೆರಳಿ ದತ್ತಾಂಶ ಸಂಗ್ರಹವನ್ನು ಕೈಗೊಳ್ಳದೆ ಸಿದ್ದರಾಮಯ್ಯ ಸರ್ಕಾರ ಜಾತಿ ಜನಗಣತಿ ನಡೆಸಿದೆ. ಇದು ಸಮಾಜವನ್ನು ವಿಭಜಿಸುವ ಪಿತೂರಿಯಾಗಿದೆ ಎಂದು ವಾಗ್ದಾಳಿ ನಡೆಸಿದರು.

ಇದು ಎಲ್ಲಾ ಸಮುದಾಯಗಳಿಗೆ ಎಚ್ಚರಿಕೆಯ ಗಂಟೆಯಾಗಿದೆ. ಇದು ಜನಗಣತಿಯಲ್ಲ, ಆದರೆ ಕಾಂಗ್ರೆಸ್‌ನ ತುಷ್ಟೀಕರಣ ರಾಜಕೀಯದ ಒಂದು ಸಾಧನ ಎಂದು ಆರೋಪಿಸಿದರು.

ಸರ್ಕಾರದ ನಡೆ 66.35 ಲಕ್ಷ ಲಿಂಗಾಯತರು ಮತ್ತು 10.49 ಲಕ್ಷ ವೀರಶೈವ ಲಿಂಗಾಯತರನ್ನು ಬೇರ್ಪಡಿಸುವ ಮತ್ತು ಬಣಜಿಗ, ಗಾಣಿಗ, ಸಾದರ, ಉಪ್ಪಾರ, ಒಕ್ಕಲಿಗ, ಜಂಗಮ ಮುಂತಾದ ಉಪಪಂಗಡಗಳಾಗಿ ವಿಭಜಿಸುವ ಮೂಲಕ ಲಿಂಗಾಯತ ಸಮುದಾಯದ ಅಸ್ತಿತ್ವವನ್ನೇ ದುರ್ಬಲಗೊಳಿಸಲು ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು

ಶಾಸಕ ಅರವಿಂದ ಬೆಲ್ಲದ್
ಜಾತಿಗಣತಿ ವಿಚಾರವಾಗಿ ವಿರೋಧ ಪಕ್ಷಗಳಿಂದ ಗೊಂದಲ ಸೃಷ್ಟಿ, ಅದಕ್ಕೆಲ್ಲಾ ತಕ್ಕ ಉತ್ತರ: ಡಿ.ಕೆ ಶಿವಕುಮಾರ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com