ಕುರ್ಚಿ ಉಳಿಸಿಕೊಳ್ಳಲು ಜಾತಿ ಜನಗಣತಿ ಮುನ್ನೆಲೆಗೆ ತಂದಿಲ್ಲ, ಈ ವರದಿ ಎಲ್ಲರಿಗೂ ಪ್ರಯೋಜನೆ ನೀಡುತ್ತದೆ: ಯತೀಂದ್ರ ಸಿದ್ದರಾಮಯ್ಯ

ವರದಿಯು ಜಾತಿಗಳ ಜನಸಂಖ್ಯೆ, ಆರ್ಥಿಕ, ಸಾಮಾಜಿಕ ಮತ್ತು ಉದ್ಯೋಗ ಸ್ಥಿತಿಯ ವಿವರಗಳನ್ನು ಹೊಂದಿದೆ. ಅದರ ಆಧಾರದ ಮೇಲೆ ಸರ್ಕಾರವು ಪ್ರತಿ ಸಮುದಾಯಕ್ಕೆ ಮೀಸಲಾತಿಯ ಪ್ರಮಾಣವನ್ನು ನಿರ್ಧರಿಸುತ್ತದೆ.
Yathindra Siddaramaiah
ಯತೀಂದ್ರ ಸಿದ್ದರಾಮಯ್ಯ
Updated on

ಮೈಸೂರು: ಜಾತಿ ಜನಗಣತಿ ಎಂದು ಕರೆಯಲ್ಪಡುವ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಸಮೀಕ್ಷೆಯ ಅನುಷ್ಠಾನವು ಪ್ರಬಲ ಸಮುದಾಯಗಳ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ ಎಂಬ ಆರೋಪಗಳನ್ನು ಕಾಂಗ್ರೆಸ್ ಎಂಎಲ್‌ಸಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಸೋಮವಾರ ನಿರಾಕರಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಕುರ್ಚಿ ಉಳಿಸಿಕೊಳ್ಳಲು ಜಾತಿ ಜನಗಣತಿಯನ್ನು ಮುನ್ನಲೆಗೆ ತಂದಿಲ್ಲ. ಈ ವರದಿಯು ಎಲ್ಲರಿಗೂ ಪ್ರಯೋಜನವನ್ನು ನೀಡುತ್ತದೆ. ವರದಿಯು ಜಾತಿಗಳ ಜನಸಂಖ್ಯೆ, ಆರ್ಥಿಕ, ಸಾಮಾಜಿಕ ಮತ್ತು ಉದ್ಯೋಗ ಸ್ಥಿತಿಯ ವಿವರಗಳನ್ನು ಹೊಂದಿದೆ. ಅದರ ಆಧಾರದ ಮೇಲೆ ಸರ್ಕಾರವು ಪ್ರತಿ ಸಮುದಾಯಕ್ಕೆ ಮೀಸಲಾತಿಯ ಪ್ರಮಾಣವನ್ನು ನಿರ್ಧರಿಸುತ್ತದೆ. ಹಿಂದುಳಿದ ವರ್ಗಗಳಿಗೆ ಮೀಸಲಾತಿಯ ಮಿತಿಯನ್ನು ಹೆಚ್ಚಿಸಲು ರಾಜ್ಯ ಸರ್ಕಾರವು ಕೇಂದ್ರದ ಮೇಲೆ ಮೇಲುಗೈ ಸಾಧಿಸುತ್ತದೆ, ಇದು ಒಕ್ಕಲಿಗರು ಮತ್ತು ಲಿಂಗಾಯತರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಹೇಳಿದರು.

ಬಿಜೆಪಿ ಸರ್ಕಾರವು 2A ಮತ್ತು 2B ವರ್ಗಗಳಿಗೆ ಮೀಸಲಾತಿಯನ್ನು ಶೇ.2ರಷ್ಟು ಹೆಚ್ಚಿಸಿದೆ, ಆದರೆ ಜಯಪ್ರಕಾಶ್ ಹೆಗ್ಡೆ ಆಯೋಗವು ಅದನ್ನು ಶೇ.2ಕ್ಕೆ ಮತ್ತು ಹಿಂದುಳಿದ ವರ್ಗಗಳಿಗೆ ಶೇ.32 ರಿಂದ ಶೇ.51 ಕ್ಕೆ ಹೆಚ್ಚಿಸಲು ಶಿಫಾರಸು ಮಾಡಿದೆ. ಜಾತಿ ಜನಗಣತಿ ವರದಿಯಲ್ಲಿ ಪ್ರಸ್ತಾಪಿಸಲಾದ ಶೇ. 19 ರಷ್ಟು ಮೀಸಲಾತಿ ಹೆಚ್ಚಳಕ್ಕೆ ಅನುಗುಣವಾಗಿ, ಒಕ್ಕಲಿಗರು ಮತ್ತು ಲಿಂಗಾಯತರಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶೇ. 6 ರಷ್ಟು ಮೀಸಲಾತಿ ಸಿಗಲಿದೆ ಎಂದು ತಿಳಿಸಿದರು.

ಇದೇ ವೇಳೆ ಮುಖ್ಯಮಂತ್ರಿಗಳು ತಮ್ಮ ಕುರ್ಚಿಯನ್ನು ಉಳಿಸಿಕೊಳ್ಳಲು ಜಾತಿ ಜನಗಣತಿಯನ್ನು ಮುನ್ನೆಲೆಗೆ ತಂದಿದ್ದಾರೆಂಬ ವಿರೋಧ ಪಕ್ಷಗಳು ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ಕುರ್ಚಿಗೆ ಆಪತ್ತೆಲ್ಲಿ ಬಂದಿದೆ? ಸುರಕ್ಷಿತವಾಗಿದೆ. ಇಳಿಸಬೇಕೆಂದು ಯಾರಾದರೂ ಹೇಳಿದ್ದಾರಾ? ನಮ್ಮ ಶಾಸಕರು ಮತ್ತು ಹೈಕಮಾಂಡ್‌ನವರು ಸಿ.ಎಂ. ಪರ ನಿಂತಿದ್ದಾರೆ. ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ತನಿಖೆಗೂ–ಜಾತಿ ಜನಗಣತಿ ವರದಿಗೂ ಸಂಬಂಧವಿಲ್ಲ. ಈಗಿನದಕ್ಕಿಂತಲೂ ಕಠಿಣ ಪರಿಸ್ಥಿತಿ ಹಿಂದೆ ಇದ್ದಾಗಲೂ ವರದಿ ತಂದಿರಲಿಲ್ಲ ಎಂದರು.

Yathindra Siddaramaiah
ಜವಾಬ್ದಾರಿಯುತ ಸ್ಥಾನದಲ್ಲಿರುವ ಅಶೋಕ್ ಸುಳ್ಳು ಹೇಳಬಾರದು: ಡಿ.ಕೆ.ಶಿವಕುಮಾರ್

‘ಮುಡಾ ಪ್ರಕರಣವನ್ನು ಇ.ಡಿಗೆ ವಹಿಸಿದರೂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪರಿಸ್ಥಿತಿ ಬರುವುದಿಲ್ಲ. ಮುಂದಿನ ನ್ಯಾಯಾಲಯಕ್ಕೆ ಅಪೀಲು ಹಾಕುತ್ತೇವೆ. ಇ.ಡಿ ಬೇಕೆಂದೇ ಹಿಂಸೆ ನೀಡುತ್ತಿದ್ದು, ಕಾನೂನು ಹೋರಾಟ ಮುಂದುವರಿಸುತ್ತೇವೆ. ಪ್ರಕರಣವನ್ನು ಸಿಬಿಐಗೇ ಕೊಡಲಿ. ತಪ್ಪೇ ಮಾಡಿಲ್ಲವಾದ್ದರಿಂದ ಹೆದರೋಲ್ಲ ಎಂದು ತಿಳಿಸಿದರು.

ಮೂಲ ಸಮೀಕ್ಷಾ ವರದಿಯನ್ನು ಮುಖ್ಯಮಂತ್ರಿಗಳ ನಿವಾಸದಲ್ಲಿದೆ ಎಂಬ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಆರೋಪ ಕುರಿತು ಮಾತನಾಡಿ, ‘ಜಾತಿ ಜನಗಣತಿಯ ಮೂಲಪ್ರತಿ ಹಾಳಾಗಿದ್ದರೆ ಆಯೋಗದ ಅಂದಿನ ಮುಖ್ಯಸ್ಥರು ಸ್ಪಷ್ಟನೆ ಕೊಡುತ್ತಾರೆ. ದತ್ತಾಂಶ ಕಂಪ್ಯೂಟರ್‌ನಲ್ಲಿ ಶೇಖರಿಸಿಟ್ಟಿರಬಹುದು. ಮೂಲಪ್ರತಿ ಸಿದ್ದರಾಮಯ್ಯ ಮನೆಯಲ್ಲಿದೆ ಎಂಬ ಆರೋಪದಲ್ಲಿ ಹುರುಳಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com