
ನವದೆಹಲಿ: ಪಾಕಿಸ್ತಾನದೊಂದಿಗೆ ಯುದ್ಧದ ಅಗತ್ಯತೆ ಅನೀವಾರ್ಯವಲ್ಲ ಮತ್ತು ಪಹಲ್ಗಾಮ್ ನಲ್ಲಿ ಹಿಂದೂಗಳನ್ನು ಮಾತ್ರ ಉಗ್ರರು ಗುರಿಯಾಗಿಸಿಕೊಂಡಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ಹೇಳಿಕೆ ವಿರುದ್ಧ ಬಿಜೆಪಿ ಕಿಡಿಕಾರಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಪಕ್ಷದ ಮೇಲೆ ಹಿಡಿತವಿಲ್ಲವೇ ಎಂದು ಪ್ರಶ್ನಿಸಿದೆ.
ಮಾಜಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ವಿವಾದಾತ್ಮಕ ಹೇಳಿಕೆಗಳಿಗಾಗಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಾರಾಷ್ಟ್ರದ ಹಿರಿಯ ನಾಯಕ ವಿಜಯ್ ವಾಡೆತ್ತಿವಾರ್, ಕರ್ನಾಟಕದ ಸಚಿವ ಆರ್ ಬಿ ತಿಮ್ಮಾಪುರ್ ಮತ್ತು ರಾಹುಲ್ ಗಾಂಧಿ ಅವರ ಸೋದರ ಮಾವ ರಾಬರ್ಟ್ ವಾದ್ರಾ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ಹೆಸರಿಸಿದ್ದಾರೆ.
"ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಪಕ್ಷದ ಮೇಲೆ ಹಿಡಿತವಿಲ್ಲವೇ? ಅಥವಾ ಅವರಿಬ್ಬರೂ ಮೇಲ್ನೋಟಕ್ಕೆ ಪಾಕ್ ವಿರುದ್ಧ ಮಾತನಾಡುತ್ತಾ, ಇತರರು ತಮ್ಮಇಚ್ಚೆಯಂತೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆಯೇ ಎಂದು ಪ್ರಶ್ನಿಸಿದ್ದು, ಅವರ ಹೇಳಿಕೆಗಳು ಪಾಕಿಸ್ತಾನದ ಮಾಧ್ಯಮಗಳಲ್ಲಿ ರಾರಾಜಿಸುವ ಮೂಲಕ ಭಾರತಕ್ಕೆ ಅಪಮಾನವಾಗಿದೆ ಎಂದು ಕಿಡಿಕಾರಿದ್ದಾರೆ.
ಭಯೋತ್ಪಾದನಾ ದಾಳಿಯ ನಂತರ ಯುಎಸ್, ಫ್ರಾನ್ಸ್ ಅಥವಾ ಸೌದಿ ಅರೇಬಿಯಾ ಆಗಿರಬಹುದು ಎಲ್ಲಾ ರಾಷ್ಟ್ರಗಳು ಭಾರತದೊಂದಿಗಿರುವಾಗ, ಈ ನಾಯಕರು ಇಂತಹ ನಿರ್ಲಜ್ಜ ಮತ್ತು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಹೇಳಿದರು.
ಇದು ಅಸೂಕ್ಷ್ಮತೆಯ ಪರಮಾವಧಿ ಎಂದ ಅವರು, ಭಯೋತ್ಪಾದಕರು ಗುಂಡು ಹಾರಿಸುವ ಹಿಂದೂಗಳ ಎಂಬುದನ್ನು ಕೇಳಿದ್ದಾರೆ ಎಂಬುದನ್ನು ವಡೆತ್ತಿವಾರ್ ಮತ್ತು ತಿಮ್ಮಾಪುರ ಅವರಂತಹವರು ಪ್ರಶ್ನಿಸಿದ್ದಾರೆ ಎಂದರು.
ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಭಯೋತ್ಪಾದಕ ದಾಳಿಯ ನಂತರದ ಪ್ರತಿತಂತ್ರಗಳ ಕುರಿತು ಸರ್ವಪಕ್ಷಗಳ ಸಭೆಯಲ್ಲಿ ಸರ್ಕಾರಕ್ಕೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಇದು ಭಾರತದ ಪ್ರಬುದ್ಧ ಪ್ರಜಾಪ್ರಭುತ್ವದ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ. ದಾಳಿ ಹಿನ್ನೆಲೆಯಲ್ಲಿ ಹಲವು ಕಾಂಗ್ರೆಸ್ ನಾಯಕರು ಆಸೂಕ್ಷ್ಮವಾಗಿ ಹೇಳಿಕೆ ನೀಡುತ್ತಿರುವಾಗ ಅವರ ನಾಯಕರು ಸರ್ಕಾರಕ್ಕೆ ಬೆಂಬಲ ನೀಡುವುದಾಗಿ ಹೇಳಿರುವುದು ಆಶ್ಚರ್ಯ ಮೂಡಿಸಿದೆ ಎಂದ ರವಿಶಂಕರ್ ಪ್ರಸಾದ್ ತಿಳಿಸಿದರು.
Advertisement