ಜಾತಿ ಗಣತಿಗೆ ಕೇಂದ್ರ ಸರ್ಕಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ರಿಯಾಕ್ಷನ್ ಏನು?

ಜಾತಿ ಜನಗಣತಿ ಮಾತ್ರ ಸಾಕಾಗುವುದಿಲ್ಲ. ಕೇಂದ್ರ ಸರ್ಕಾರ ಸಾಮಾಜಿಕ-ಆರ್ಥಿಕ ಸಮೀಕ್ಷೆಯನ್ನು ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.
CM Siddaramaiah
ಸಿಎಂ ಸಿದ್ದರಾಮಯ್ಯ
Updated on

ನವದೆಹಲಿ: ಜನಗಣತಿಯೊಂದಿಗೆ ಜಾತಿ ಗಣತಿಯನ್ನು ನಡೆಸಲು ಕೇಂದ್ರ ಸರ್ಕಾರ ನಿರ್ಧಾರಿಸಿದ್ದು, 'ಇದು ಹೆಚ್ಚು ತಡವಾದರೂ ಉತ್ತಮ' ಎಂದು ಕಾಂಗ್ರೆಸ್ ಬುಧವಾರ ಹೇಳಿದೆ.

ಒಂದು ಪ್ರಮುಖ ನಿರ್ಧಾರದಲ್ಲಿ, ಮುಂಬರುವ ಜನಗಣತಿಯೊಂದಿಗೆ ಜಾತಿ ಗಣತಿಯನ್ನು 'ಪಾರದರ್ಶಕ' ರೀತಿಯಲ್ಲಿ ಸೇರಿಸಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಿಸಿದೆ ಮತ್ತು ಜಾತಿ ಸಮೀಕ್ಷೆಯನ್ನು 'ರಾಜಕೀಯ ಸಾಧನ'ವಾಗಿ ಬಳಸಿದ್ದಕ್ಕಾಗಿ ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿತು.

ಕಾಂಗ್ರೆಸ್ ಸೇರಿದಂತೆ ಹಲವು ವಿರೋಧ ಪಕ್ಷಗಳು ರಾಷ್ಟ್ರವ್ಯಾಪಿ ಜಾತಿ ಗಣತಿ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದವು. ಇದು ಪ್ರಮುಖ ಚುನಾವಣಾ ವಿಷಯವಾಗಿದೆ ಮತ್ತು ಬಿಹಾರ, ತೆಲಂಗಾಣ ಮತ್ತು ಕರ್ನಾಟಕದಂತಹ ಕೆಲವು ರಾಜ್ಯಗಳು ಈಗಾಗಲೇ ಜಾತಿ ಗಣತಿ ನಡೆಸಿವೆ.

ಏಪ್ರಿಲ್ 9, 2025 ರಂದು ಅಹಮದಾಬಾದ್‌ನಲ್ಲಿ ಅಂಗೀಕರಿಸಲಾದ ಸಾಮಾಜಿಕ ನ್ಯಾಯದ ಕುರಿತಾದ ನಿರ್ಣಯದಲ್ಲಿ ನಮ್ಮ ಪಕ್ಷವು ಈ ವಿಷಯವನ್ನು ಎತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಹೇಳಿದ್ದಾರೆ.

'ಹೆಚ್ಚು ತಡವಾದರೂ ಉತ್ತಮ', ಎಂದು ಜೈರಾಮ್ ರಮೇಶ್ ಅವರು X ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ರಮೇಶ್ ಅವರು ಸಾಮಾಜಿಕ ನ್ಯಾಯವನ್ನು ಸಾಧಿಸಲು ಪಕ್ಷವು ತನ್ನ ಉಪಕ್ರಮಗಳನ್ನು ಪಟ್ಟಿ ಮಾಡಿದ 'ನ್ಯಾಯಪಥ್' ನಿರ್ಣಯದ ಸ್ಕ್ರೀನ್‌ಶಾಟ್‌ಗಳನ್ನು ಸಹ ಹಂಚಿಕೊಂಡಿದ್ದಾರೆ.

ಅಲ್ಲದೆ ಏಪ್ರಿಲ್ 16, 2023 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬರೆದ ಪತ್ರವನ್ನು ಹಂಚಿಕೊಂಡಿದ್ದು, ಅದರಲ್ಲಿ ಅವರು ದಶಕದಿಂದ ಬಾಕಿ ಇರುವ ಜನಗಣತಿಯನ್ನು ನಡೆಸಬೇಕು ಮತ್ತು ಸಮಗ್ರ ಜಾತಿ ಗಣತಿಯನ್ನು ಅದರ ಭಾಗವಾಗಿ ಮಾಡಬೇಕೆಂದು ಒತ್ತಾಯಿಸಿದ್ದಾರೆ.

CM Siddaramaiah
ಜನಗಣತಿಯಲ್ಲಿ ಜಾತಿ ಎಣಿಕೆಯನ್ನು ಸೇರಿಸಲು ಕೇಂದ್ರ ಸಚಿವ ಸಂಪುಟ ಮಹತ್ವದ ನಿರ್ಧಾರ!

ಸಾಮಾಜಿಕ-ಆರ್ಥಿಕ ಸಮೀಕ್ಷೆಯನ್ನೂ ನಡೆಸಿ: ಸಿಎಂ ಸಿದ್ದರಾಮಯ್ಯ

ಜಾತಿ ಜನಗಣತಿ ಮಾತ್ರ ಸಾಕಾಗುವುದಿಲ್ಲ. ಕೇಂದ್ರ ಸರ್ಕಾರ ಸಾಮಾಜಿಕ-ಆರ್ಥಿಕ ಸಮೀಕ್ಷೆಯನ್ನು ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

ಇಂದು ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, "ನಾವು ನಮ್ಮ(ಕಾಂಗ್ರೆಸ್) ಪ್ರಣಾಳಿಕೆಯಲ್ಲಿ ಸಾಮಾಜಿಕ-ಆರ್ಥಿಕ ಮತ್ತು ಜಾತಿ ಜನಗಣತಿ ನಡೆಸಬೇಕೆಂದು ಹೇಳಿದ್ದೇವೆ. ಅವರು ಕೇವಲ ಜಾತಿ ಗಣತಿಯನ್ನು ಮಾಡುತ್ತಾರೆಯೇ ಅಥವಾ ಸಾಮಾಜಿಕ-ಆರ್ಥಿಕ ಸಮೀಕ್ಷೆಯನ್ನು ಮಾಡುತ್ತಾರೆಯೇ ಎಂದು ನನಗೆ ತಿಳಿದಿಲ್ಲ. ಅದನ್ನು (ಕೇಂದ್ರದ ನಿರ್ಧಾರ) ಪರಿಶೀಲಿಸಿದ ನಂತರ ನಾನು ಪ್ರತಿಕ್ರಿಯಿಸುತ್ತೇನೆ" ಎಂದು ಹೇಳಿದರು.

ಸಾಮಾಜಿಕ ನ್ಯಾಯಕ್ಕಾಗಿ ಸಾಮಾಜಿಕ-ಆರ್ಥಿಕ ಸಮೀಕ್ಷೆ ಅಗತ್ಯ ಎಂದು ಸಿದ್ದರಾಮಯ್ಯ ಹೇಳಿದರು. "ಜನಗಣತಿ ಮತ್ತು ಜಾತಿ ಗಣತಿಯನ್ನು ಮಾಡುವುದಾಗಿ ಅವರು(ಕೇಂದ್ರ) ಹೇಳಿದ್ದಾರೆ. ಸಾಮಾಜಿಕ-ಆರ್ಥಿಕ ಸಮೀಕ್ಷೆ ಬಹಳ ಮುಖ್ಯ. ನಾವು ಸಾಮಾಜಿಕ ನ್ಯಾಯವನ್ನು ಕೊಡಬೇಕಾದರೆ, ಸಾಮಾಜಿಕ-ಆರ್ಥಿಕ ಸಮೀಕ್ಷೆಯನ್ನು ಮಾಡಬೇಕು" ಎಂದು ಹೇಳಿದರು.

ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡಿಸಿದ್ದಕ್ಕಾಗಿ ತೀವ್ರ ಟೀಕೆಗಳನ್ನು ಎದುರಿಸಿದ್ದನ್ನು ನೆನಪಿಸಿದಾಗ, ರಾಜ್ಯದಲ್ಲಿ ಜಾತಿ ಗಣತಿ ಮಾಡಿರೋದನ್ನು ಕ್ಯಾಬಿನೆಟ್ ನಲ್ಲಿ ಮಂಡಿಸಿದ್ದೇವೆ. ಎಲ್ಲಾ ಸಚಿವರಿಗೆ ಒಪ್ಪಿಗೆ ಕೊಡಿ ಅಂತ ಹೇಳಿದ್ದೇನೆ. ಅವ್ರು ಒಪ್ಪಿಗೆ ಕೊಟ್ಟ ಮೇಲೆ ಮತ್ತೆ ಕ್ಯಾಬಿನೆಟ್ ಮುಂದೆ ತಗೊಂಡು ಚರ್ಚೆ ಮಾಡ್ತೀನಿ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com