KPCC ಅಧ್ಯಕ್ಷ ಸ್ಥಾನ ಬದಲಾವಣೆ ನಿರ್ಧಾರ ಹೈಕಮಾಂಡ್‌ಗೆ ಬಿಟ್ಟಿದ್ದು: ಸತೀಶ್ ಜಾರಕಿಹೊಳಿ

ನಾನು ಬಸವಣ್ಣ, ಅಂಬೇಡ್ಕರ್ ಮತ್ತು ಕುವೆಂಪು ಅವರ ಸಮಾನತೆಯ ಪರಿಕಲ್ಪನೆಯನ್ನು ನಂಬುತ್ತೇನೆ ಮತ್ತು ಅದನ್ನು ನನ್ನ ರಾಜಕೀಯ ಜೀವನದಲ್ಲಿ ಅಳವಡಿಸಿಕೊಂಡಿದ್ದೇನೆ ಎಂದಿದ್ದಾರೆ.
Satish Jarkiholi
ಸತೀಶ್ ಜಾರಕಿಹೊಳಿ
Updated on

ಬೆಂಗಳೂರು: ಕಾಂಗ್ರೆಸ್ ರಾಜ್ಯಾಧ್ಯಕ್ಷರ ನೇಮಕಾತಿ ನಿರ್ಧಾರ ಹೈಕಮಾಂಡ್ ಗೆ ಬಿಟ್ಟದ್ದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಅವರು, ಸಂಭಾವ್ಯ ನೇಮಕಾತಿಯ ಕುರಿತು ಮಾತನಾಡಿದ್ದಾರೆ.

ಇದು ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಷಯ, ಆದರೆ ಎಲ್ಲಾ ವಿಭಾಗಗಳನ್ನು ಒಟ್ಟಿಗೆ ಕರೆದೊಯ್ಯುವುದು ಪಕ್ಷಕ್ಕೆ ಬಹಳ ಮುಖ್ಯ ಎಂಬುದನ್ನು ನಾವು ನೆನಪಿನಲ್ಲಿಡಬೇಕು ಎಂದು ಅವರು ಹೇಳಿದರು. "ನಾನು ಬಸವಣ್ಣ, ಅಂಬೇಡ್ಕರ್ ಮತ್ತು ಕುವೆಂಪು ಅವರ ಸಮಾನತೆಯ ಪರಿಕಲ್ಪನೆಯನ್ನು ನಂಬುತ್ತೇನೆ ಮತ್ತು ಅದನ್ನು ನನ್ನ ರಾಜಕೀಯ ಜೀವನದಲ್ಲಿ ಅಳವಡಿಸಿಕೊಂಡಿದ್ದೇನೆ ಎಂದಿದ್ದಾರೆ.

ಕಾಂಗ್ರೆಸ್ ರಾಷ್ಟ್ರೀಯವಾಗಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯುವಕರನ್ನು ಆಕರ್ಷಿಸುವಲ್ಲಿ ವಿಫಲವಾಗಿದೆ ಎಂಬ ಟೀಕೆಗೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಶಿಗ್ಗಾಂವ್ ಉಪಚುನಾವಣೆಯಲ್ಲಿ ಪಕ್ಷವು ತನ್ನ ನಿಲುವನ್ನು ತಪ್ಪು ಎಂದು ಸಾಬೀತುಪಡಿಸಿದೆ ಎಂದು ಹೇಳಿದರು. ಅಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಬಿಜೆಪಿ ಮುಖ್ಯಮಂತ್ರಿಯ ಮಗನನ್ನು ಸೋಲಿಸಿದರು. ಚಿಕ್ಕೋಡಿ ಕ್ಷೇತ್ರದಲ್ಲೂ, ಕಾಂಗ್ರೆಸ್ ಯುವಜನರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸುವಲ್ಲಿ ಯಶಸ್ವಿಯಾಯಿತು, ಸಂಸತ್ತಿನ ಸ್ಥಾನದಲ್ಲಿ ಬಿಜೆಪಿಗೆ ಪ್ರತಿಸ್ಪರ್ಧಿಯಾಗಿದೆ. ಹೈಕಮಾಂಡ್ ನನಗೆ ಅವಕಾಶ ನೀಡಿದರೆ, ಶಿಗ್ಗಾಂವ್ ಮಾದರಿಯಲ್ಲಿ ರಾಜ್ಯಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಯುವಕರನ್ನು ಆಕರ್ಷಿಸಲು ಬಳಸಬಹುದು ಎಂದು ಅವರು ಹೇಳಿದರು.

2028 ರ ವಿಧಾನಸಭಾ ಚುನಾವಣೆಯ ಬಗ್ಗೆ ಮಾತನಾಡಿದ ಕಾಂಗ್ರೆಸ್ NDA (BJP+JDS) ಮೈತ್ರಿ ವಿರುದ್ಧ ಸ್ಪರ್ಧಿಸುವ ನಿರೀಕ್ಷೆಯಿದೆ. ಅಂತಹ ಸನ್ನಿವೇಶದಲ್ಲಿ ಪಕ್ಷದ ಕಾರ್ಯಕ್ಷಮತೆಯ ಬಗ್ಗೆ ಕೆಲವರು ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ,ಆದರೆ ಅದು ಚೆನ್ನಾಗಿ ಕೆಲಸ ಮಾಡುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Satish Jarkiholi
ಖರ್ಗೆ ರಾಜ್ಯ ರಾಜಕಾರಣ ವಾಪಸ್ ಕುರಿತು ಸೋನಿಯಾ-ರಾಹುಲ್ ನಿರ್ಧಾರಿಸುತ್ತಾರೆ: ಸಚಿವ ಸತೀಶ್ ಜಾರಕಿಹೊಳಿ

ನಮಗೆ ಈಗ ಸುಮಾರು 140 ಸ್ಥಾನಗಳಿವೆ ಮತ್ತು ನಮಗೆ ಬೇಕಾಗಿರುವುದು "ಸರ್ಕಾರ ರಚಿಸಲು 120 ಜನರು ಬೇಕು. 2028 ರಲ್ಲಿ ನಾವು ಉತ್ತಮವಾಗಿ ಕಾರ್ಯನಿರ್ವಹಿಸುತ್ತೇವೆ ಮತ್ತು ನಮ್ಮ ಸ್ಥಾನಗಳನ್ನು ಉಳಿಸಿಕೊಳ್ಳುತ್ತೇವೆ" ಎಂದು ಜಾರಕಿಹೊಳಿ ಹೇಳಿದರು.

ಕೆಪಿಸಿಸಿ ಅಧ್ಯಕ್ಷರಾದರೆ ಉತ್ತರ ಕರ್ನಾಟಕದಲ್ಲಿ ಪಕ್ಷದ ಯಶಸ್ಸಿಗೆ ಏನು ಮಾಡುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಡಾ. ಜಿ. ಪರಮೇಶ್ವರ, ದಿನೇಶ್ ಗುಂಡೂರಾವ್ ಮತ್ತು ಡಿಕೆ ಶಿವಕುಮಾರ್ ನಂತರ ಸುಮಾರು 15 ವರ್ಷಗಳಲ್ಲಿ ಆ ಪ್ರದೇಶದಿಂದ ಮೊದಲ ಅಧ್ಯಕ್ಷರಾಗುತ್ತೇನೆ ಎಂದು ಅವರು ಹೇಳಿದರು. ಈ ಬಾರಿ ಉತ್ತರ ಕರ್ನಾಟಕದಲ್ಲಿ ಪಕ್ಷವು ಉತ್ತಮ ಪ್ರದರ್ಶನ ನೀಡಿದೆ ಮತ್ತು 2028 ರಲ್ಲಿಯೂ ಹೆಚ್ಚಿನ ಸಂಖ್ಯೆಯ ಸೀಟುಗಳನ್ನು ಉಳಿಸಿಕೊಳ್ಳುವುದಾಗಿ ತಿಳಿಸಿದರು.

ಪಕ್ಷದ ಪ್ರಬಲ ಲಿಂಗಾಯತ ಸಮುದಾಯದ ಮತ ಪಾಲನ್ನು ಹೇಗೆ ಹೆಚ್ಚಿಸುವುದು ಎಂಬುದರ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಹಲವಾರು ಪಕ್ಷದ ವೇದಿಕೆಗಳಲ್ಲಿ ಇದನ್ನು ಚರ್ಚಿಸಲಾಗಿದೆ. ಬಸವಣ್ಣನನ್ನು ರಾಜ್ಯದ ಸಾಂಸ್ಕೃತಿಕ ಐಕಾನ್ ಎಂದು ಘೋಷಿಸುವುದು ಸಾಕಾಗುವುದಿಲ್ಲ. "ಲಿಂಗಾಯತರು ಮೊದಲಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕುತ್ತಿರುವುದರಿಂದ ಈ ಬಾರಿ ನಮಗೆ ಗಣನೀಯ ಪ್ರಮಾಣದ ಲಿಂಗಾಯತ ಮತಗಳು ಬಂದಿವೆ" ಎಂದು ಜಾರಕಿಹೊಳಿ ಹೇಳಿದರು.

ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಹಿಂದುಳಿದ ವರ್ಗಗಳ ಸಭೆಯ ನಂತರ ಪಕ್ಷದ ರಾಷ್ಟ್ರೀಯ ಅಹಿಂದ ಪ್ರಚಾರದೊಂದಿಗೆ, ಅವರು ಸಂಭಾವ್ಯ ಮಂಡಲ್ 2.0 ಎದುರು ನೋಡುತ್ತಿರುವುದಾಗಿ ಅವರು ಹೇಳಿದರು, "ಕಾಂಗ್ರೆಸ್ ಯಾವಾಗಲೂ ಅಹಿಂದ ಬೆಂಬಲವನ್ನು ಹೊಂದಿದೆ, ಅದನ್ನು ವ್ಯಕ್ತಪಡಿಸುವಲ್ಲಿ ಕೆಲವು ಸಮಸ್ಯೆಗಳಿರಬಹುದು ಎಂದು ತಿಳಿಸಿದ್ದಾರೆ. ನಾವು ಪಕ್ಷದ ಜಾಗದಲ್ಲಿ ಪಕ್ಷದ ಆದ್ಯತೆಗಳಿಗೆ ಮತ್ತು ವೈಯಕ್ತಿಕ ಜಾಗದಲ್ಲಿ ವೈಚಾರಿಕತೆಗೆ ಅಂಟಿಕೊಳ್ಳುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com