ತುಂಗಾಭದ್ರ ಅಣೆಕಟ್ಟು: ತಜ್ಞರ ವರದಿ ಕಸದ ಬುಟ್ಟಿಗೆ; ಕಾಂಗ್ರೆಸ್ ನಾಯಕರು ಗಾಢನಿದ್ರೆಗೆ!

ಈಗಾಗಲೇ ತಿಳಿದಿರುವಂತೆ ಕಳೆದ ವರ್ಷದ ಆಗಸ್ಟ್ 10ರಂದು ರಾತ್ರಿ ಅಣೆಕಟ್ಟೆ ಗರಿಷ್ಠ ಮಟ್ಟ ತಲುಪಿದ್ದಾಗ 19ನೆ ಗೇಟ್ ಕೊಚ್ಚಿಕೊಂಡು ಹೋಗಿತ್ತು.
BJP tweet
ಬಿಜೆಪಿ ಟ್ವೀಟ್
Updated on

ಬೆಂಗಳೂರು: ತುಂಗಭದ್ರಾ ಅಣೆಕಟ್ಟೆಯ ಎಲ್ಲಾ 33 ಕ್ರೆಸ್ಟ್‌ಗೇಟ್‌ಗಳೂ ಶಿಥಿಲಗೊಂಡಿವೆ, ಎಲ್ಲವನ್ನೂ ಬದಲಿಸಬೇಕು ಎಂಬ ತಜ್ಞರ ವರದಿಯನ್ನು ಕಡೆಗಣಿಸಿ ಗೇಟ್‌ ಬದಲಿಸದೆ ಕುಳಿತ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಟೀಕಾಸ್ತ್ರ ಪ್ರಯೋಗಿಸಿದ್ದು, ಗೇಟ್‌ಗಳ ಮೇಲೆ ಸಿಎಂ, ಡಿಸಿಎಂ ನಿದ್ದೆ ಮಾಡುತ್ತಿರುವಂತಹ ಫೋಟೊವನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದೆ.

ತಜ್ಞರ ವರದಿಯನ್ನು ಕಸದ ಬುಟ್ಟಿಗೆ ಎಸೆದ ಸರ್ಕಾರದ ಈ ನಿರ್ಲಕ್ಷ್ಯದಿಂದಾಗಿಯೇ ಲಕ್ಷಾಂತರ ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ, ಭಾರಿ ಪ್ರಮಾಣದಲ್ಲಿ ನೀರು ಇದೀಗ ಆಂಧ್ರದ ಪಾಲಾಗುತ್ತಿದೆ, ಅದನ್ನು ತಡೆಗಟ್ಟಲು ಕ್ರಮವಹಿಸಿ ಲಕ್ಷಾಂತರ ರೈತರಿಗೆ ನೀರಿನ ಭರವಸೆ ಕೊಡಿ ಎಂದು ಅದರಲ್ಲಿ ತಿಳಿಸಲಾಗಿದೆ.

ಈಗಾಗಲೇ ತಿಳಿದಿರುವಂತೆ ಕಳೆದ ವರ್ಷದ ಆಗಸ್ಟ್ 10ರಂದು ರಾತ್ರಿ ಅಣೆಕಟ್ಟೆ ಗರಿಷ್ಠ ಮಟ್ಟ ತಲುಪಿದ್ದಾಗ 19ನೆ ಗೇಟ್ ಕೊಚ್ಚಿಕೊಂಡು ಹೋಗಿತ್ತು. ಬಳಿಕ ವಾರದಲ್ಲೇ ತಾತ್ಕಾಲಿಕ ಸ್ಟಾಪ್‌ಲಾಗ್ ಗೇಟ್ ಅಳವಡಿಸಿ ನೀರು ಪೋಲಾಗುವುದನ್ನು ತಡೆಯಲಾಗಿತ್ತು. ಆದರೆ ಬಳಿಕ ತಜ್ಞರು ಅಣೆಕಟ್ಟೆಯ ಕೂಲಂಕಷ ಪರೀಕ್ಷೆ ನಡೆಸಿ, 19ನೇ ಗೇಟ್‌ ಮಾತ್ರವಲ್ಲ, ಇತರ ಎಲ್ಲ 32 ಗೇಟ್‌ಗಳನ್ನು ಬದಲಿಸಿ ಹೊಸ ಗೇಟ್ ಅಳವಡಿಸಬೇಕು ಎಂದು ತಿಳಿಸಿದ್ದರು. ಆದರೆ ವಿನ್ಯಾಸ ಅಂತಿಮಗೊಳಿಸುವುದು, ಟೆಂಡರ್ ಪ್ರಕ್ರಿಯೆ ವಿಳಂಬವಾಗಿ ಮತ್ತೆ ಮಳೆಗಾಲ ಆರಂಭವಾದರೂ ಗೇಟ್ ಬದಲಾವಣೆ ಸಾಧ್ಯವಾಗಲಿಲ್ಲ.

BJP tweet
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾಭದ್ರಾ ನದಿ: ತಗ್ಗು ಪ್ರದೇಶ‌ಗಳ ನಿವಾಸಿಗಳಿಗೆ ಎಚ್ಚರಿಕೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com