Siddaramaih and dk shivakumar
ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್

Breakfast Meeting ನಂತರ ಸಿದ್ದರಾಮಯ್ಯ- ಶಿವಕುಮಾರ್ ಕದನ ವಿರಾಮ; ಅಧಿವೇಶನ ಬಳಿಕ 'ಕುರ್ಚಿ ಕಾಳಗ' ಮತ್ತೆ ಮುನ್ನೆಲೆಗೆ!

ತಮ್ಮ ಮಗ ಕೆಆರ್‌ಐಬಿಹೆಚ್‌ಸಿಒ ನಿರ್ದೇಶಕರಾಗಿರುವ ಕಾರಣ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು ಎಂದು ರಾಜಣ್ಣ ಸಮರ್ಥಿಸಿಕೊಂಡರು. ಉತ್ತರ ಕರ್ನಾಟಕದ ಕೆಲವು ಕಾಂಗ್ರೆಸ್ ಶಾಸಕರು ಸಹ ಅಮಿತ್ ಶಾ ಅವರೊಂದಿಗೆ ಸಭೆ ಸೇರಲು ಬಯಸಿದ್ದಾರೆ.
Published on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಬ್ಬರು ಒಟ್ಟಿಗೆ ಉಪಹಾರ ಸವಿಯುವ ಮೂಲಕ ಸದ್ಯದ ಗುದ್ದಾಟಕ್ಕೆ ರಾಜತಾಂತ್ರಿಕ ತೆರೆ ಎಳೆದಿದ್ದಾರೆ.

ಆದರೆ ಡಿಸೆಂಬರ್ 19 ರಂದು ಬೆಳಗಾವಿ ಅಧಿವೇಶನ ಮುಗಿದ ನಂತರ ನಾಯಕತ್ವ ಬದಲಾವಣೆಯ ವಿಷಯ ಮತ್ತೆ ತಲೆದೋರುವ ಸಾಧ್ಯತೆಯಿದೆ. ಸಂಸತ್ತಿನ ಚಳಿಗಾಲದ ಅಧಿವೇಶನವೂ ಅದೇ ದಿನ ಮುಕ್ತಾಯಗೊಳ್ಳುತ್ತದೆ.

2023 ರಲ್ಲಿ ಪಕ್ಷ ಅಧಿಕಾರಕ್ಕೆ ಬಂದಾಗ ಮಾಡಿಕೊಂಡ ಅಧಿಕಾರ ಹಂಚಿಕೆ ಒಪ್ಪಂದದ ವಿಷಯವನ್ನು ಶಿವಕುಮಾರ್ ಮತ್ತೆ ಮುನ್ನಲೆಗೆ ತರಬಹುದು ಎಂದು ವರದಿಯಾಗಿದೆ. ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಅನಿವಾರ್ಯವಾದರೆ ದಲಿತ ಸಿಎಂ ಕಾರ್ಡ್ ಪ್ಲೇ ಮಾಡುವುದು ಸೇರಿದಂತೆ ಹಲವಾರು ತಂತ್ರಗಳನ್ನು ಅವರು ರೂಪಿಸುತ್ತಿದ್ದಾರೆ.

ಸಿಡಬ್ಲ್ಯೂಸಿ ಖಾಯಂ ಆಹ್ವಾನಿತ ಬಿ.ಕೆ. ಹರಿಪ್ರಸಾದ್ ಅವರು ದೆಹಲಿಯಲ್ಲಿ ಹಿರಿಯ ನಾಯಕಿ ಸೋನಿಯಾ ಗಾಂಧಿಯನ್ನು ಭೇಟಿ ಮಾಡಿ ಯಥಾಸ್ಥಿತಿ ಕಾಯ್ದುಕೊಳ್ಳುವ ಅಗತ್ಯವನ್ನು ಮನವರಿಕೆ ಮಾಡಿಕೊಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಬುಧವಾರ ಮಂಗಳೂರಿನಲ್ಲಿ ಶ್ರೀ ನಾರಾಯಣ ಗುರುಗಳ ಕಾರ್ಯಕ್ರಮದ ಸಂದರ್ಭದಲ್ಲಿ ಹರಿಪ್ರಸಾದ್ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಚರ್ಚಿಸಿ ನಂತರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ನಂತರ, ಗೃಹ ಸಚಿವ ಡಾ. ಜಿ. ಪರಮೇಶ್ವರ ಮತ್ತು ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಅವರೊಂದಿಗೆ ಬೆಂಗಳೂರಿನಲ್ಲಿರುವ ಅವರ ನಿವಾಸದಲ್ಲಿ ಮಾತುಕತೆ ನಡೆಸಿದರು.

ಬುಧವಾರ ಮಂಗಳೂರಿನಲ್ಲಿ ಶ್ರೀ ನಾರಾಯಣ ಗುರುಗಳ ಕಾರ್ಯಕ್ರಮದ ಸಂದರ್ಭದಲ್ಲಿ ಹರಿಪ್ರಸಾದ್ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಚರ್ಚಿಸಿ ನಂತರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ನಂತರ, ಗೃಹ ಸಚಿವ ಡಾ. ಜಿ. ಪರಮೇಶ್ವರ ಮತ್ತು ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಅವರೊಂದಿಗೆ ಬೆಂಗಳೂರಿನಲ್ಲಿರುವ ಅವರ ನಿವಾಸದಲ್ಲಿ ಮಾತುಕತೆ ನಡೆಸಿದರು.

Siddaramaih and dk shivakumar
Power Sharing: ಸಿದ್ದರಾಮಯ್ಯ ಅವರನ್ನು ನಿಭಾಯಿಸುವುದೇ ಹೈಕಮಾಂಡ್‌? (ನೇರ ನೋಟ)

ಮಾಜಿ ಸಹಕಾರ ಸಚಿವ ಮತ್ತು ಸಿದ್ದರಾಮಯ್ಯ ಅವರ ಆಪ್ತ ಕೆ.ಎನ್. ರಾಜಣ್ಣ ಮಾತನಾಡಿ ಸಿದ್ದರಾಮಯ್ಯ ರಾಜೀನಾಮೆ ಅನಿವಾರ್ಯವಾದರೆ, ಡಾ. ಜಿ. ಪರಮೇಶ್ವರ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಪುನರುಚ್ಚರಿಸಿದರು. ರಾಜಣ್ಣ ಅವರ ಎಂಎಲ್‌ಸಿ-ಮಗ ರಾಜೇಂದ್ರ ಅವರು ಎರಡು ದಿನಗಳ ಹಿಂದೆ ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿರುವುದು ಹಲವು ಕುತೂಹಲಗಳಿಗೆ ಕಾರಣವಾಗಿದೆ. ಗೃಹ ಸಚಿವ ಅಮಿತ್ ಶಾ ಅವರೊಂದಿಗಿನ ಅವರ ಇತ್ತೀಚಿನ ಭೇಟಿ ರಾಜಕೀಯ ವಲಯಗಳಲ್ಲಿ ಚರ್ಚೆ ಹುಟ್ಟುಹಾಕಿದೆ.

ತಮ್ಮ ಮಗ ಕೆಆರ್‌ಐಬಿಹೆಚ್‌ಸಿಒ ನಿರ್ದೇಶಕರಾಗಿರುವ ಕಾರಣ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು ಎಂದು ರಾಜಣ್ಣ ಸಮರ್ಥಿಸಿಕೊಂಡರು. ಉತ್ತರ ಕರ್ನಾಟಕದ ಕೆಲವು ಕಾಂಗ್ರೆಸ್ ಶಾಸಕರು ಸಹ ಅಮಿತ್ ಶಾ ಅವರೊಂದಿಗೆ ಸಭೆ ಸೇರಲು ಬಯಸಿದ್ದಾರೆ.

2028 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಅವರು ತಮ್ಮ ರಾಜಕೀಯ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಮತ್ತು ಪಕ್ಷ ಬದಲಾಯಿಸಲು ಚಿಂತಿಸುತ್ತಿದ್ದಾರೆ. ಏಕೆಂದರೆ ಸಿದ್ದರಾಮಯ್ಯ 2023 ರಲ್ಲಿ ಇದ್ದಂತೆ ಮುಂದಿನ ಚುನಾವಣೆಗಳಲ್ಲಿ ಪ್ರಭಾವಶಾಲಿಯಾಗಿರುವುದಿಲ್ಲ ಎಂಬ ಹಿನ್ನೆಲೆಯಲ್ಲಿ ಶಾಸಕರು ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com