ರಾಜ್ಯ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ: ಆರ್. ಅಶೋಕ್

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ನಾಯಕತ್ವ ಜಗಳ ಉತ್ತುಂಗದಲ್ಲಿದ್ದಾಗ, ವಿರೋಧ ಪಕ್ಷವು ಇತ್ತೀಚೆಗೆ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಸುಳಿವು ನೀಡಿತ್ತು.
No decision yet on moving no confidence motion against Cong govt: R Ashoka
ಆರ್. ಅಶೋಕ್
Updated on

ಬೆಂಗಳೂರು: ಮುಂಬರುವ ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಬಿಜೆಪಿ-ಜೆಡಿ(ಎಸ್) ಸಮನ್ವಯ ಸಮಿತಿಯಲ್ಲಿ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಶುಕ್ರವಾರ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ನಾಯಕತ್ವ ಜಗಳ ಉತ್ತುಂಗದಲ್ಲಿದ್ದಾಗ, ವಿರೋಧ ಪಕ್ಷವು ಇತ್ತೀಚೆಗೆ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಸುಳಿವು ನೀಡಿತ್ತು.

ಅಧಿವೇಶನದ ಆರಂಭದಲ್ಲಿಯೇ ಎತ್ತಲಾಗುವ ಪ್ರಮುಖ ವಿಷಯಗಳಲ್ಲಿ ಉತ್ತರ ಕರ್ನಾಟಕದ ವಿಷಯಗಳು ಸೇರಿವೆ ಎಂದು ಬಿಜೆಪಿಯ ಹಿರಿಯ ನಾಯಕ ತಿಳಿಸಿದ್ದಾರೆ.

ವಿಧಾನಸಭೆಯ ಚಳಿಗಾಲದ ಅಧಿವೇಶನವು ಡಿಸೆಂಬರ್ 8-19 ರಂದು ಬೆಳಗಾವಿಯಲ್ಲಿ ನಡೆಯಲಿದೆ.

"ಬಿಜೆಪಿ-ಜೆಡಿ(ಎಸ್) ಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಈ ಬಗ್ಗೆ ಕೆಲವು ಸಲಹೆಗಳು ಬಂದಿವೆ. ಎರಡೂ ಪಕ್ಷಗಳ ಸಮನ್ವಯ ಸಮಿತಿ ಸಭೆಯಲ್ಲಿ ಇದನ್ನು ನಿರ್ಧರಿಸಬೇಕಾಗಿದೆ, ಆದರೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ" ಎಂದು ಅಶೋಕ್ ಅವರು ವರದಿಗಾರರಿಗೆ ತಿಳಿಸಿದ್ದಾರೆ.

No decision yet on moving no confidence motion against Cong govt: R Ashoka
CM ಪಟ್ಟಕ್ಕಾಗಿ ಫೈಟ್: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ ಚಿಂತನೆ

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳನ್ನು ಚರ್ಚಿಸಬೇಕು. ಆದರೆ ಸರ್ಕಾರ ಸಾಮಾನ್ಯವಾಗಿ ಅವುಗಳನ್ನು ಕೊನೆಯ ದಿನದಂದು ಕೈಗೆತ್ತಿಕೊಳ್ಳುತ್ತದೆ ಮತ್ತು ಯಾವುದೇ ಉತ್ತರವನ್ನು ನೀಡದೆ ತಪ್ಪಿಸಿಕೊಳ್ಳುತ್ತದೆ ಎಂದರು.

"ಉತ್ತರ ಕರ್ನಾಟಕದ ಸಮಸ್ಯೆಗಳನ್ನು ಅಧಿವೇಶನದ ಆರಂಭದಲ್ಲಿಯೇ ಕೈಗೆತ್ತಿಕೊಂಡು ಚರ್ಚಿಸಬೇಕು ಮತ್ತು ಉತ್ತರ ನೀಡಬೇಕು ಎಂದು ಒತ್ತಾಯಿಸಿ ನಾನು ನಿಲುವಳಿ ಸೂಚನೆ ನಿರ್ಣಯ ಮಂಡಿಸುತ್ತೇನೆ". ಇದನ್ನು ಮಾಡದಿದ್ದರೆ ಈ ಪ್ರದೇಶದ ಜನರಿಗೆ ಅನ್ಯಾಯವಾಗುತ್ತದೆ ಮತ್ತು ಅಲ್ಲಿ ಅಧಿವೇಶನ ನಡೆಸುವುದು ವ್ಯರ್ಥ ಎಂದರು.

ವಿರೋಧ ಪಕ್ಷವನ್ನು ಎದುರಿಸಲು ಸಾಧ್ಯವಾಗದೆ, ಸರ್ಕಾರವು ಕಾರ್ಯತಂತ್ರ ರೂಪಿಸಲು ಸರಣಿ ಸಭೆಗಳನ್ನು ನಡೆಸುತ್ತಿದೆ. ಏಕೆಂದರೆ ಸರ್ಕಾರ ಮತ್ತು ಆಡಳಿತ ಪಕ್ಷದೊಳಗೆ ಗೊಂದಲವಿದೆ ಎಂದು ಆರ್ ಅಶೋಕ್ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com