ಟೈಗರ್‌ ಜಿಂದಾ ಹೈ, ಕಿಂಗ್‌ ಈಸ್ ಅಲೈವ್‌: CM ಬಗ್ಗೆ ಬೈರತಿ ಗುಣಗಾನ; ಯತೀಂದ್ರ ಹೇಳಿಕೆಗೆ ಕೆರಳಿ ಕೆಂಡವಾದ ಡಿಕೆಶಿ ಬಣ!

ವಿಧಾನಸಭಾ ಅಧಿವೇಶನದ ನಂತರ ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಕರೆಸುತ್ತದೆ . ಜನವರಿ 2026 ರ ಮಧ್ಯದಲ್ಲಿ ನಾಯಕತ್ವದಲ್ಲಿ ಬದಲಾವಣೆಯಾಗುತ್ತದೆ ಎಂದು ಡಿಕೆಎಸ್ ಪಾಳಯವು ಬಲವಾಗಿ ನಂಬಿದೆ.
Siddaramaiah, dk shivakumar, yathindra and Byrati Suresh
ಸಿದ್ದರಾಮಯ್ಯ, ಡಿಕೆಶಿವಕುಮಾರ್, ಯತೀಂದ್ರ ಮತ್ತು ಭೈರತಿ ಸುರೇಶ್
Updated on

ಬೆಂಗಳೂರು: ತಮ್ಮ ತಂದೆ ಮುಖ್ಯಮಂತ್ರಿಯಾಗಿ ಐದು ವರ್ಷಗಳನ್ನು ಪೂರ್ಣಗೊಳಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ನೀಡಿರುವ ಹೇಳಿಕೆ ಕಾಂಗ್ರೆಸ್‌ನಲ್ಲಿ ಕೋಲಾಹಲ ಸೃಷ್ಟಿಸಿದೆ. ಇದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪಾಳಯವನ್ನು ಕೆರಳಿಸಿದೆ. ಆದರ ಎರಡೂ ಬಣಗಳ ಬಗ್ಗೆ ತಟಸ್ಥರಾಗಿದ್ದ ಕೆಲವು ಶಾಸಕರಿಗೆ ಮುಜುಗರಕ್ಕೀಡು ಮಾಡಿದೆ.

ವಿಧಾನಸಭೆಯ ಜಂಟಿ ಅಧಿವೇಶನ ನಡೆಯುತ್ತಿದ್ದು, ಇದು ವಿರೋಧ ಪಕ್ಷಗಳು ಸರ್ಕಾರದ ಮೇಲೆ ದಾಳಿ ಮಾಡಲು ಆಹಾರವಾಗುವುದರಿಂದ ನಾಯಕತ್ವ ಬದಲಾವಣೆಯ ಕುರಿತು ಅಂತಹ ಹೇಳಿಕೆಗಳನ್ನು ನೀಡಬೇಡಿ ಎಂದು ಸಿದ್ದರಾಮಯ್ಯ ಸೋಮವಾರ ಯತೀಂದ್ರ ಅವರಿಗೆ ಸಲಹೆ ನೀಡಿದ್ದಾರೆ ಎಂದು ಕೆಲವು ಮೂಲಗಳು ತಿಳಿಸಿವೆ. ಯತೀಂದ್ರ ಅವರ ಹೇಳಿಕೆಯು ಶಿವಕುಮಾರ್ ಅವರ ಪಾಳಯಕ್ಕೆ ಸಂದೇಶ ಕಳುಹಿಸಲು ಉದ್ದೇಶಪೂರ್ವಕವಾಗಿ ಹೇಳಲಾಗಿದೆಯೇ ಎಂಬುದು ಸದ್ಯದ ಕುತೂಹಲವಾಗಿದೆ.

ವಿಧಾನಸಭಾ ಅಧಿವೇಶನದ ನಂತರ ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಕರೆಸುತ್ತದೆ . ಜನವರಿ 2026 ರ ಮಧ್ಯದಲ್ಲಿ ನಾಯಕತ್ವದಲ್ಲಿ ಬದಲಾವಣೆಯಾಗುತ್ತದೆ ಎಂದು ಡಿಕೆಎಸ್ ಪಾಳಯವು ಬಲವಾಗಿ ನಂಬಿದೆ. ಈ ಮಧ್ಯೆ, ಸಂಕ್ರಾಂತಿ ಹಬ್ಬದ ನಂತರ ಪಕ್ಷದ ಹೈಕಮಾಂಡ್ ಸಂಪುಟ ಪುನರ್ರಚನೆಗೆ ಹಸಿರು ನಿಶಾನೆ ತೋರಿಸುತ್ತದೆ ಎಂದು ಸಿದ್ದರಾಮಯ್ಯ ಪಾಳಯದ ಪ್ರಬಲ ನಂಬಿಕೆಯಿದೆ.

ನನಗೆ ಅನ್ನಿಸಿದ್ದನ್ನು ನಾನು ಹೇಳಿದ್ದೇನೆ, ಇದರಲ್ಲಿ ಬೇರೆ ಯಾವುದೇ ದುರುದ್ದೇಶ ಇಲ್ಲ ಎಂದು ಯತೀಂದ್ರ ಹೇಳಿದರು. ಯತೀಂದ್ರ ಅವರ ಹೇಳಿಕೆಯನ್ನು ಆಳವಾಗಿ ಪರಿಶೀಲಿಸಲಿಲ್ಲ ಆದರೆ ಅವರ ಜೊತೆ ಮಾತನಾಡುತ್ತೇನೆ ಎಂದು ಶಿವಕುಮಾರ್ ಹೇಳಿದರು.

Siddaramaiah, dk shivakumar, yathindra and Byrati Suresh
ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ: ಪುತ್ರ ಡಾ ಯತೀಂದ್ರ ಹೇಳಿಕೆಗೆ ಡಿ.ಕೆ ಶಿವಕುಮಾರ್ ಹೇಳಿದ್ದೇನು?

ಪ್ರತಿಯೊಬ್ಬ ನಾಯಕರು ಪಕ್ಷದ ಶಿಸ್ತನ್ನು ಪಾಲಿಸಬೇಕು ಎಂದು ಕಾನೂನು ಸಚಿವ ಎಚ್‌ಕೆ ಪಾಟೀಲ್ ಸೂಚಿಸಿದರು. ಯತೀಂದ್ರ ಅವರು ಹೈಕಮಾಂಡ್ ಪಾತ್ರ ನಿರ್ವಹಿಸಬಾರದು ಎಂದು ಶಿವಕುಮಾರ್ ಆಪ್ತ ಮತ್ತು ರಾಮನಗರ ಶಾಸಕ ಹುಸೇನ್ ಹೇಳಿದ್ದಾರೆ.

ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರಲಿದ್ದಾರೆ ಎಂಬ ಯತೀಂದ್ರ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಯತೀಂದ್ರ ತಮ್ಮ ಅಭಿಪ್ರಾಯ ಹೇಳಿದ್ದಾರೆ. ಅಭಿಪ್ರಾಯ ಹೇಳಲು ಸ್ವತಂತ್ರರು. ಇನ್ನು, ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧ ಎಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಇಬ್ಬರೂ ಹೇಳಿದ್ದಾರೆ. ಹೈಕಮಾಂಡ್‌ ನಿರ್ಧಾರವನ್ನು ನಾವೆಲ್ಲರೂ ಎಂದು ಹೇಳಿದರು.

ಸುರೇಶ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ಅಭಿಪ್ರಾಯಗಳು ಭಿನ್ನಾಭಿಪ್ರಾಯ ಹೊಂದಿವೆ ಎಂದು ಹೇಳಲಾಗುತ್ತಿದೆ. ಸಿದ್ದರಾಮಯ್ಯ ಅವರ ರಾಜಕೀಯ ಉತ್ತರಾಧಿಕಾರಿಯ ಬಗ್ಗೆ ಮಾತನಾಡುವ ಅಗತ್ಯವಿಲ್ಲ ಎಂದು ಸುರೇಶ್ ಹೇಳಿದ್ದಾರೆ ಎಂದು ಮೂಲವೊಂದು ತಿಳಿಸಿದೆ.

ಯತೀಂದ್ರ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸುರೇಶ್, "ಅವರು ತಮ್ಮ ವೈಯಕ್ತಿಕ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರೂ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ಹೇಳಿದ್ದಾರೆ" ಎಂದು ಹೇಳಿದರು.

Siddaramaiah, dk shivakumar, yathindra and Byrati Suresh
'ಅಧಿಕಾರ ಹಂಚಿಕೆ ಬಗ್ಗೆ ಯಾರೂ ಮಾತನಾಡಬೇಡಿ, ಸಾರ್ವಜನಿಕ ಹೇಳಿಕೆ ಕೊಡಬೇಡಿ': ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಬುದ್ದಿಮಾತು

ಅಹಿಂದ ನಾಯಕತ್ವ ಸತೀಶ್‌ ಜಾರಕಿಹೊಳಿ ವಹಿಸಬಹುದು ಎಂದು ಬಿ.ಕೆ. ಹರಿಪ್ರಸಾದ್‌ ಅವರ ಅಭಿಪ್ರಾಯದ ಕುರಿತ ಪ್ರಶ್ನೆಗೆ ಉತ್ತರಿಸಿ, ಅಹಿಂದ ನಾಯಕತ್ವ ವಹಿಸಲು ಸತೀಶ್‌ ಜಾರಕಿಹೊಳಿ ಸೂಕ್ತ ಇರಬಹುದು. ಆದರೂ, ಅಹಿಂದ ನಾಯಕತ್ವದ ಬಗ್ಗೆ ತೀರ್ಮಾನಿಸುವುದೂ ಸಿದ್ದರಾಮಯ್ಯ ಅವರೇ. ಆದ್ದರಿಂದ ಸದ್ಯಕ್ಕೆ ಆ ಪ್ರಶ್ನೆ ಉದ್ಘವಿಸುವುದಿಲ್ಲ ಎಂದರು.

ಸಿದ್ದರಾಮಯ್ಯ ಅವರೇ ನಮ್ಮ (ಅಹಿಂದ) ನಾಯಕರು. ಅವರು ಇನ್ನೂ ಇದ್ದಾರೆ. ಟೈಗರ್‌ ಜಿಂದಾ ಹೈ ಮತ್ತು ಕಿಂಗ್‌ ಇಸ್‌ ಅಲೈವ್‌. ಹೀಗಾಗಿ, ಸರ್ಕಾರವನ್ನಾಗಲಿ ಅಥವಾ ಅಹಿಂದ ಹೋರಾಟವನ್ನಾಗಲೀ ಮುಂದೆ ತೆಗೆದುಕೊಂಡು ಹೋಗುವವರು ಯಾರು ಎಂದು ಸಿದ್ದರಾಮಯ್ಯ ಅವರೇ ತೀರ್ಮಾನಿಸುತ್ತಾರೆ. ಹೀಗಂತ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದರು. ಮುಂದಿನ ಅಹಿಂದ ನಾಯಕ ಯಾರು ಎಂಬ ಬಗ್ಗೆ ಹಿರಿಯ ಕಾಂಗ್ರೆಸ್ಸಿಗ ಬಿ.ಕೆ. ಹರಿಪ್ರಸಾದ್ ಸೇರಿ ಕೆಲ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಬೈರತಿ, ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಯೇ ಇಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com