ಭಿನ್ನಮತೀಯರ ಭೇಟಿಗೆ ಸಿಗದ BJP ವರಿಷ್ಠರು: ರಾಜ್ಯಾಧ್ಯಕ್ಷ ಹುದ್ದೆಯಿಂದ ಕೆಳಗಿಳಿಸುವಲ್ಲಿ ವಿಜಯೇಂದ್ರ ವಿರೋಧಿಗಳ ರಣತಂತ್ರ ವಿಫಲ!

ಹೈಕಮಾಂಡ್, ವಿಶೇಷವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆಶೀರ್ವಾದದೊಂದಿಗೆ ವಿಜಯೇಂದ್ರ ರಾಜ್ಯ ಅಧ್ಯಕ್ಷರಾಗಿ ಮುಂದುವರಿಯುವ ಸಾಧ್ಯತೆಯಿದೆ.
Vijayendra And Yatnal
ವಿಜಯೇಂದ್ರ ಮತ್ತು ಯತ್ನಾಳ್
Updated on

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಸಮರ ಸಾರಿರುವ ಪಕ್ಷದ ಭಿನ್ನಮತೀಯ ನಾಯಕರು ಬುಧವಾರ ಇಲ್ಲಿ ಸಭೆ ಸೇರಿ ಮುಂದಿನ ಹೋರಾಟದ ರಣತಂತ್ರ ರೂಪಿಸಿದ್ದಾರೆ. ಆದರೆ ಪಕ್ಷದ ವರಿಷ್ಠರನ್ನು ಭೇಟಿ ಮಾಡುವ ಮಹದಾಸೆಗೆ ಫಲ ಸಿಗಲಿಲ್ಲ. ಆದರೆ ಅವರ ಪ್ರಯತ್ನವು ಉದ್ದೇಶಿತ ಫಲಿತಾಂಶಗಳನ್ನು ನೀಡಿದೆಯೇ ಅಥವಾ ಇಲ್ಲವೇ ಎಂಬುದನ್ನು ಕಾದು ನೋಡಬೇಕು.

ಬುಧವಾರ ಮುಕ್ತಾಯಗೊಂಡ ದೆಹಲಿ ವಿಧಾನಸಭಾ ಚುನಾವಣೆಯ ಕಾರ್ಯದಲ್ಲಿ ನಿರತರಾಗಿರುವ ಪಕ್ಷದ ಹೈಕಮಾಂಡ್, ಫೆಬ್ರವರಿ 8 ರಂದು ಫಲಿತಾಂಶಗಳ ನಂತರ ಕರ್ನಾಟಕದ ರಾಜಕೀಯ ಬಿಕ್ಕಟ್ಟನ್ನು ಪರಿಶೀಲಿಸುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ, ಫೆಬ್ರವರಿ 9 ಅಥವಾ 10 ರಂದು ಕರ್ನಾಟಕ ಘಟಕದ ಪಕ್ಷದ ಅಧ್ಯಕ್ಷರನ್ನು ಸರ್ವಾನುಮತದಿಂದ ಘೋಷಿಸುವ ಸಾಧ್ಯತೆಯಿದೆ.

ರಾಜ್ಯ ಅಧ್ಯಕ್ಷರ ಹುದ್ದೆಗೆ ಚುನಾವಣೆ ಘೋಷಿಸುವುದು ಪಕ್ಷದ ನಿಯಮವಾಗಿಲ್ಲ. ರಾಜ್ಯ ಉಸ್ತುವಾರಿ ಮತ್ತು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಆಗಮಿಸಿ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯಿದೆ.

ಹೈಕಮಾಂಡ್, ವಿಶೇಷವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆಶೀರ್ವಾದದೊಂದಿಗೆ ವಿಜಯೇಂದ್ರ ರಾಜ್ಯ ಅಧ್ಯಕ್ಷರಾಗಿ ಮುಂದುವರಿಯುವ ಸಾಧ್ಯತೆಯಿದೆ. ಕೆಲವು ಭಿನ್ನಮತೀಯರನ್ನು ಸೇರಿಸಿಕೊಳ್ಳುವ ಮೂಲಕ ಮತ್ತು ಜಿಲ್ಲಾ ಅಧ್ಯಕ್ಷರನ್ನು ಬದಲಾಯಿಸುವ ಮೂಲಕ ಪದಾಧಿಕಾರಿಗಳನೆ ಮಾಡುವ ಯೋಜನೆಯಲ್ಲಿದೆ ಎಂದು ಅವರು ಹೇಳಿದರು.

ಚುನಾವಣೆ ಘೋಷಣೆಯಾದರೆ ಭಿನ್ನಮತೀಯ ಬಣದಲ್ಲಿ ಗುರುತಿಸಿಕೊಂಡು ತಾವು ಕೂಡ ಅಧ್ಯಕ್ಷ ಹುದ್ದೆಗೆ ಆಕಾಂಕ್ಷಿಯೆಂದು ಬಿಂಬಿಸಲು ಪ್ರಯತ್ನಿಸಿದ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡುವ ಮೂಲಕ ಸಮಾಧಾನಪಡಿಸಲಾಗುವುದು ಎಂದು ಬಿಜೆಪಿಯ ಆಂತರಿಕ ಮೂಲಗಳು ತಿಳಿಸಿವೆ.

Vijayendra And Yatnal
ಬಿಜೆಪಿ ರಾಜ್ಯಾಧ್ಯಕ್ಷ ಮಾಡಿದರೆ ರಾಜ್ಯದಲ್ಲಿ 150 ಸೀಟ್​​ ಗೆಲ್ಲಿಸುತ್ತೇನೆ : ಶ್ರೀರಾಮುಲು

23 ಜಿಲ್ಲೆಗಳಿಗೆ ನೇಮಕಗೊಂಡ ಹೆಚ್ಚಿನ ಅಧ್ಯಕ್ಷರು ವಿಜಯೇಂದ್ರ ಅವರ ನಿಷ್ಠಾವಂತರು ಎಂಬ ಭಿನ್ನಮತೀಯರ ಆಕ್ಷೇಪವನ್ನು ಹೈಕಮಾಂಡ್ ಪರಿಹರಿಸುತ್ತದೆ. ಎರಡು ದಿನಗಳ ಕಾಲ ರಾಷ್ಟ್ರ ರಾಜಧಾನಿಯಲ್ಲಿ ಬೀಡುಬಿಟ್ಟು ಅಮಿತ್ ಶಾ ಹೊರತುಪಡಿಸಿ ಕೇಂದ್ರ ನಾಯಕರನ್ನು ಭೇಟಿಯಾದ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಮತ್ತು ರಮೇಶ್ ಜಾರಕಿಹೊಳಿ ಸೇರಿದಂತೆ ಯತ್ನಾಳ್ ಅವರ ತಂಡ ಬುಧವಾರ ಸಂಜೆ ಮರಳಿತು. ಆದಾಗ್ಯೂ, ಫೆಬ್ರವರಿ 9 ರಂದು ನವದೆಹಲಿಗೆ ಮರಳುವುದಾಗಿ ಅವರು ಹೇಳಿದರು. ಹೈಕಮಾಂಡ್ ಒಬ್ಬ ನಾಯಕನನ್ನು ಪಕ್ಷದ ಅಧ್ಯಕ್ಷರನ್ನಾಗಿ ಘೋಷಿಸಿದರೆ, ಯತ್ನಾಳ್ ಅವರ ಬಣ ಹೋಗುವ ಸಾಧ್ಯತೆಯಿಲ್ಲ" ಎಂದು ಬಿಜೆಪಿ ನಾಯಕರೊಬ್ಬರು ಹೇಳಿದರು.

ಸಂಡೂರು ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಗೆಲುವು ಸಾಧಿಸಲು ವಿಫಲರಾದ ಮಾಜಿ ಸಚಿವ ಬಿ. ಶ್ರೀರಾಮುಲು ವಿರುದ್ಧ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಅಗರ್ ವಾಲ್ ಅಸಮಾಧಾನ ವ್ಯಕ್ತ ಪಡಿಸಿದ್ದರು, ಇದರಿಂದ ಬೇಸರಗೊಂಡಿದ್ದ ಶ್ರೀರಾಮುಲು ಅವರು ಅಸಮಾಧಾನದ ವಿಷಯವನ್ನು ಲಾಭ ಪಡೆಯಲು ಪ್ರಯತ್ನಿಸಿದರು. ಆದರೆ ವಿಜಯೇಂದ್ರ ಅವರು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರನ್ನು ಶ್ರೀರಾಮುಲು ಅವರ ಬಳಿಗೆ ಕಳುಹಿಸುವ ಮೂಲಕ ಅವರನ್ನು ಸಮಾಧಾನಪಡಿಸುವಲ್ಲಿ ಯಶಸ್ವಿಯಾದರು.

ಇದಲ್ಲದೆ, ಚಿಕ್ಕಬಳ್ಳಾಪುರ ಸಂಸದ ಡಾ. ಕೆ. ಸುಧಾಕರ್ ಅವರ ಸಮಾಲೋಚನೆ ಇಲ್ಲದೆ ಜಿಲ್ಲಾಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಎದ್ದಿದ್ದ ಆಕ್ಷೇಪಣೆ ಬಗೆಹರಿದಂತೆ ಕಾಣುತ್ತಿದೆ. ಬಿಜೆಪಿ ಭಿನ್ನಮತೀಯರು ಮಾಜಿ ಮುಖ್ಯಮಂತ್ರಿ ಮತ್ತು ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಅಧ್ಯಕ್ಷ ಸ್ಥಾನಕ್ಕೆ ಉಮೇದುವಾರಿಕೆಯನ್ನು ಒತ್ತಾಯಿಸಲು ಪ್ರಯತ್ನಿಸಿದರು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com