ಸಿಎಂ ಬದಲಾವಣೆ ವಿಚಾರ ಅಪ್ರಸ್ತುತ: ಸಚಿವ ಕೆ.ಎಚ್. ಮುನಿಯಪ್ಪ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿರುವಾಗ, ಅವರನ್ನು ಬದಲಾಯಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ.
Food Minister KH Muniyappa
ಕೆಹೆಚ್ ಮುನಿಯಪ್ಪ
Updated on

ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದು, ಅವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಬುಧವಾರ ಹೇಳಿದರು.

ಸುದ್ದಿಗಾರರೊಂದಿಗ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿರುವಾಗ, ಅವರನ್ನು ಬದಲಾಯಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದರು.

ರಾಜ್ಯದ ಜನರ ಹಿತದೃಷ್ಟಿಯಿಂದ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡುತ್ತಿದ್ದಾರೆ. ಮುಂದೆ ಬಜೆಟ್ ಇದೆ, ಒಳ್ಳೆಯ ಬಜೆಟ್ ಅನ್ನು ಮುಖ್ಯಮಂತ್ರಿಗಳು ನೀಡಲಿದ್ದಾರೆ. ಸರ್ಕಾರದಿಂದ ಗ್ಯಾರಂಟಿ ಯೋಜನೆಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗುತ್ತಿದ್ದು, ಸಿದ್ದರಾಮಯ್ಯ ಉತ್ತಮ ಆಡಳಿತ ನೀಡುತ್ತಿದ್ದಾರೆ. ಮುಂದಿನ ತಿಂಗಳು ಉತ್ತಮ ಬಜೆಟ್‌ ಕೂಡ ಮಂಡಿಸಲಿದ್ದಾರೆ. ಹೀಗಾಗಿ ಅವರನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

ಕೆಲವು ಸಚಿವರು ಮತ್ತು ಶಾಸಕರು ನವದೆಹಲಿಗೆ ಹೋಗಿ ಕಾಂಗ್ರೆಸ್‌ ಹೈಕಮಾಂಡ್ ಭೇಟಿಯಾಗಿ ಮುಖ್ಯಮಂತ್ರಿ ಬದಲಾಯಿಸುವಂತೆ ಒತ್ತಾಯಿಸಲು ಹೋಗುತ್ತಿರುವ ಕುರಿತ ಪ್ರಶ್ನೆಗೆ, ‘ಆ ವಿಷಯ ನನ್ನ ಗಮನಕ್ಕೆ ಬಂದಿಲ್ಲ. ಯಾರೂ ನನ್ನೊಂದಿಗೆ ಚರ್ಚಿಸಿಲ್ಲ ಎಂದರು.

Food Minister KH Muniyappa
ಸಿಎಂ ಬದಲಾವಣೆ ಸೂಚನೆಗಳಿಲ್ಲ; ಎರಡನೇ ಏರ್‌ಪೋರ್ಟ್‌ಗೆ ಸ್ಥಳ ಅಂತಿಮಗೊಂಡಿಲ್ಲ: ಪರಮೇಶ್ವರ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com