ಮುಖ್ಯಮಂತ್ರಿ 660 KV ಕರೆಂಟ್, ಮುಟ್ಟಿದ್ರೆ ಸುಟ್ಟು ಹೋಗ್ತಾರೆ; ಡಿಸಿಎಂ ಅವರೇ ಸಿದ್ದರಾಮಯ್ಯಗೆ ಮಗ್ಗುಲ ಮುಳ್ಳು: ಮುನಿರತ್ನ

ಕಾಂಗ್ರೆಸ್‍ನಲ್ಲಿ ಕಣ್ಣಿಲ್ಲದ ಮೈತ್ರಿ ಇದೆ. ಅಂದು ಸಿಎಂ, ಡಿಸಿಎಂ ಎರಡು ಪಕ್ಷದ ಮೈತ್ರಿಯಲ್ಲಿದ್ದ ಪರಿಸ್ಥಿತಿ ಇದೆ. ಇಂದು ಕುಮಾರಸ್ವಾಮಿ ಜಾಗದಲ್ಲಿ ಸಿದ್ದರಾಮಯ್ಯ ಇದ್ದಾರೆ. ಪರಮೇಶ್ವರ್ ಜಾಗದಲ್ಲಿ ಡಿಸಿಎಂ ಇದ್ದಾರೆ. ಡಿಸಿಎಂ ಅವರೇ ಸಿದ್ದರಾಮಯ್ಯಗೆ ಮಗ್ಗುಲ ಮುಳ್ಳು ಎಂದಿದ್ದಾರೆ.
munirathna
ಶಾಸಕ ಮುನಿರತ್ನ
Updated on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಟ್ಟುವುದು ಸುಲಭ ಅಲ್ಲ. ಮುಟ್ಟಿದರೆ ಕಾಂಗ್ರೆಸ್‌ಗೆ ಸಂಕಷ್ಟ ತಪ್ಪಿದ್ದಲ್ಲ ಎಂದು ಬಿಜೆಪಿ ಶಾಸಕ ಮುನಿರತ್ನ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ 11 ಕೆವಿ ಕರೆಂಟಲ್ಲ. ಅದು 660 ಕೆವಿ ಕರೆಂಟ್‌. ಅದನ್ನು ಮುಟ್ಟುವುದು ಅಷ್ಟು ಸುಲಭ ಅಲ್ಲ. ಅದನ್ನು ಮುಟ್ಟಿ ಗೆಲ್ಲುತ್ತೇವೆ. ಚಲಾವಣೆ ಆಗ್ತೀವಿ ಅಂದುಕೊಂಡರೆ ಅದು ಭ್ರಮೆ ಎಂದರು.

ಕಾಂಗ್ರೆಸ್‍ನಲ್ಲಿ ಕಣ್ಣಿಲ್ಲದ ಮೈತ್ರಿ ಇದೆ. ಅಂದು ಸಿಎಂ, ಡಿಸಿಎಂ ಎರಡು ಪಕ್ಷದ ಮೈತ್ರಿಯಲ್ಲಿದ್ದ ಪರಿಸ್ಥಿತಿ ಇದೆ. ಇಂದು ಕುಮಾರಸ್ವಾಮಿ ಜಾಗದಲ್ಲಿ ಸಿದ್ದರಾಮಯ್ಯ ಇದ್ದಾರೆ. ಪರಮೇಶ್ವರ್ ಜಾಗದಲ್ಲಿ ಡಿಸಿಎಂ ಇದ್ದಾರೆ. ಡಿಸಿಎಂ ಅವರೇ ಸಿದ್ದರಾಮಯ್ಯಗೆ ಮಗ್ಗುಲ ಮುಳ್ಳು ಎಂದಿದ್ದಾರೆ.

ಸಿದ್ದರಾಮಯ್ಯ ಕಾಂಗ್ರೆಸ್‌ನಿಂದ ಆಚೆ ಹೋದರೆ ಪರಿಣಾಮ ಏನಾಗುತ್ತದೆ ಅನ್ನುವುದು ಅವರ ನಾಯಕರಿಗೇ ಗೊತ್ತಿಲ್ಲ. ಅವರ ಜತೆ ಐದು ವರ್ಷ ಕೆಲಸ ಮಾಡಿದ್ದೇನೆ. ಅವರ ಒಡನಾಟ ಇಟ್ಟುಕೊಂಡಿದ್ದೇನೆ. ಅವರ ಮನಸ್ಥಿತಿ ಗೊತ್ತಿದೆ. ಅವರ ಶಕ್ತಿಯನ್ನೂ ನೋಡಿದ್ದೇನೆ ಎಂದರು.

munirathna
ದಿನಗೂಲಿ ಕಾರ್ಮಿಕರ ಮೇಲೆ ದೌರ್ಜನ್ಯ: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು FIR ದಾಖಲು

ಸಿದ್ದರಾಮಯ್ಯ 2 ಗಂಟೆಗೆ ಭಾಷಣಕ್ಕೆ ಬರುತ್ತಾರೆ. ಅಂದರೆ 6 ಗಂಟೆಯವರೆಗೆ ಜನ ಕಾಯುತ್ತಾರೆ. ಅವರ ಒಂದು ಕರೆಗೆ 10 ಲಕ್ಷ ಜನ ಸೇರುತ್ತಾರೆ. ಅಂತಹ ಶಕ್ತಿ ಇರುವವರು ಕಾಂಗ್ರೆಸ್‌ನಲ್ಲಿ ಬೇರೆ ಯಾರಿದ್ದಾರೆ ಎಂದೂ ಪ್ರಶ್ನಿಸಿದರು.

ಸಿದ್ದರಾಮಯ್ಯ ಹೊರತಾಗಿ ಕಾಂಗ್ರೆಸ್‌ ಶೂನ್ಯ. ರಾಜಕಾರಣದಲ್ಲಿ ಯಾವುದೇ ಕ್ಷಣದಲ್ಲಿ ಏನು ಬೇಕಾದರೂ ಆಗಬಹುದು. ಮುಡಾ ಹಗರಣವನ್ನು ಸಿಬಿಐಗೆ ಕೊಟ್ಟರೆ ಸಾಕು, ಸಿದ್ದರಾಮಯ್ಯ ಅವರನ್ನು ಸಿಲುಕಿಸಿದರೆ ಸಾಕು, ಅಂತಾ ಕಾಯ್ತಾ ಇರುವವರು ಕಾಂಗ್ರೆಸ್‌ನಲ್ಲಿ ಇದ್ದಾರೆ. ಕೇಜ್ರಿವಾಲ್‌ ರೀತಿ ಸಿದ್ದರಾಮಯ್ಯ ಬಂಧನಕ್ಕೆ ಒಳಗಾದರೆ, ತಾವು ಮುಖ್ಯಮಂತ್ರಿ ಆಗಬಹುದು ಎಂದು ಕೆಲವರು ಕಾಯ್ತಾ ಕುಳಿತ್ತಿದ್ದಾರೆ ಎಂದರು.

ಸಿದ್ದರಾಮಯ್ಯ ಕಾಂಗ್ರೆಸ್‍ನಲ್ಲಿದ್ರೆ 135 ಸೀಟು, ಆಚೆ ಹೋದ್ರೆ ಶೂನ್ಯವಾಗಲಿದೆ. ಸಿದ್ದರಾಮಯ್ಯ ಅವರನ್ನು ಇಳಿಸಿದರೆ ಆರೇ ತಿಂಗಳಿಗೆ ಚುನಾವಣೆ ಬರುತ್ತೆ. ಹಾಗಾಗಿ ನಮ್ಮ ಪಕ್ಷದಲ್ಲಿ ಎಲ್ರೂ ಒಗ್ಗಟ್ಟಾಗಬೇಕು. ಕಾಂಗ್ರೆಸ್ (Congress) ನಲ್ಲಿ ಸಿದ್ದರಾಮಯ್ಯ ಇಳಿಸೋ ಪ್ರಯತ್ನ ನಡೀತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com