ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷನಾಗಲು ನಾನು ಸಿದ್ಧ: ಸಚಿವ ಕೆಎನ್ ರಾಜಣ್ಣ

ನಾವು ನಮ್ಮ ಬೇಡಿಕೆಗಳನ್ನು ಹೈಕಮಾಂಡ್ ಮುಂದೆ ಇಡುತ್ತೇವೆ. ನಾವು ವಿರೋಧ ಪಕ್ಷಗಳ ಸಹಾಯವನ್ನು ತೆಗೆದುಕೊಳ್ಳುವುದಿಲ್ಲ ಎಂದು ಅವರು ಹೇಳಿದರು.
ಸಹಕಾರ ಸಚಿವ ಕೆಎನ್ ರಾಜಣ್ಣ
ಸಹಕಾರ ಸಚಿವ ಕೆಎನ್ ರಾಜಣ್ಣ
Updated on

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಲು ನಾನು ಸಿದ್ಧ ಎಂದು ಸಿದ್ದರಾಮಯ್ಯ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ಸಹಕಾರ ಸಚಿವ ಕೆಎನ್ ರಾಜಣ್ಣ ಶುಕ್ರವಾರ ಘೋಷಿಸಿದ್ದಾರೆ. ಸದ್ಯ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ.

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಈವರೆಗೆ ಒಗ್ಗಟ್ಟಿನ ಮಂತ್ರವನ್ನು ಜಪಿಸುತ್ತಿದ್ದರೂ, ಕೆಎನ್ ರಾಜಣ್ಣ ಅವರ ಈ ಹೇಳಿಕೆಯು ಈ ಇಬ್ಬರು ಹಿರಿಯ ನಾಯಕರ ನಡುವೆ ಬಹಿರಂಗ ಹೋರಾಟವನ್ನು ಪ್ರಚೋದಿಸುವ ಎಲ್ಲ ಸಾಧ್ಯತೆಗಳನ್ನು ಹೊಂದಿದೆ ಎಂದು ಮೂಲಗಳು ಸೂಚಿಸಿವೆ.

ಮೂರು ದಿನಗಳ ಕಾಲ ದೆಹಲಿಯಲ್ಲಿ ಬೀಡುಬಿಟ್ಟು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಸಚಿವ ರಾಜಣ್ಣ, ಹೈಕಮಾಂಡ್ ಅವಕಾಶ ನೀಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಿದ್ಧ ಎಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

'ನಾವು ರಾಜ್ಯಾಧ್ಯಕ್ಷರ ಬದಲಾವಣೆಗೆ ಒತ್ತಾಯಿಸುತ್ತಿಲ್ಲ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿನ ನಂತರ ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಕೆಸಿ ವೇಣುಗೋಪಾಲ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಸಿದ್ದರಾಮಯ್ಯ ಅವರು ಸಿಎಂ ಸ್ಥಾನವನ್ನು ಅಲಂಕರಿಸುತ್ತಾರೆ ಮತ್ತು ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗುತ್ತಾರೆ ಎಂದು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ' ಎಂದು ರಾಜಣ್ಣ ಹೇಳಿದರು.

ಡಿಕೆ ಶಿವಕುಮಾರ್ ಅವರು ಲೋಕಸಭೆ ಚುನಾವಣೆವರೆಗೂ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. ಆದರೆ, ಲೋಕಸಭೆ ಚುನಾವಣೆ ಮುಗಿದ ಬಳಿಕವೂ ಈವರೆಗೆ ಕೆಪಿಸಿಸಿ ಅಧ್ಯಕ್ಷರನ್ನು ಏಕೆ ಬದಲಿಸಿಲ್ಲ ಎಂದು ನಾವು ಕೇಳುತ್ತಿದ್ದೇವೆ ಎಂದರು.

ಸಹಕಾರ ಸಚಿವ ಕೆಎನ್ ರಾಜಣ್ಣ
ಪ್ರಯತ್ನ ವಿಫಲವಾಗಬಹುದು, ಪ್ರಾರ್ಥನೆಗೆ ಗೆಲುವು ನಿಶ್ಚಿತ: ಡಿಸಿಎಂ ಡಿಕೆ ಶಿವಕುಮಾರ್ ಮಾರ್ಮಿಕ ಟ್ವೀಟ್!

ದಲಿತ ಸಿಎಂ ಬೇಡಿಕೆ ಕುರಿತು ಮಾತನಾಡಿದ ಸಚಿವ ರಾಜಣ್ಣ, ದಲಿತ ಮುಖ್ಯಮಂತ್ರಿ ಬೇಡುವುದರಲ್ಲಿ ತಪ್ಪೇನು? ದಲಿತರು, ಇತರೆ ಸಮುದಾಯಗಳು ಮತ್ತು ಅಲ್ಪಸಂಖ್ಯಾತರು ಸಿಎಂ ಹುದ್ದೆಗೆ ಬೇಡಿಕೆ ಇಡಬಹುದು. ಈ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದ್ದು, ಅದಕ್ಕೆ ಬದ್ಧರಾಗಿರುತ್ತೇವೆ ಎಂದು ತಿಳಿಸಿದರು.

ನಾವು ನಮ್ಮ ಬೇಡಿಕೆಗಳನ್ನು ಹೈಕಮಾಂಡ್ ಮುಂದೆ ಇಡುತ್ತೇವೆ. ನಾವು ವಿರೋಧ ಪಕ್ಷಗಳ ಸಹಾಯವನ್ನು ತೆಗೆದುಕೊಳ್ಳುವುದಿಲ್ಲ ಎಂದು ಅವರು ಹೇಳಿದರು.

ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ದೆಹಲಿಗೆ ಭೇಟಿ ನೀಡಿ ಪಕ್ಷದ ಹೈಕಮಾಂಡ್‌ಗೆ ಶಿವಕುಮಾರ್‌ ಅವರನ್ನು ಕೆಪಿಸಿಸಿ ಹುದ್ದೆಗೆ ಡಿಕೆ ಶಿವಕುಮಾರ್ ಬದಲಿಗೆ ಬೇರೆಯವರನ್ನು ನೇಮಿಸುವ ಹಿಂದಿನ ಘೋಷಣೆಯನ್ನು ನೆನಪಿಸಿದ್ದಾರೆ.

ಗೃಹ ಸಚಿವ ಜಿ.ಪರಮೇಶ್ವರ ಅವರು ಮುಂದಿನ ವಾರ ನವದೆಹಲಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಒಬ್ಬರ ನಂತರ ಒಬ್ಬರು ದೆಹಲಿಗೆ ಭೇಟಿ ಮೂಲಕ ವ್ಯವಸ್ಥಿತವಾಗಿ ಹೈಕಮಾಂಡ್ ಮೇಲೆ ಒತ್ತಡ ಹೇರಲು ಸಿಎಂ ಸಿದ್ದರಾಮಯ್ಯ ಬೆಂಬಲಿಗರು ರಣತಂತ್ರ ರೂಪಿಸಿದ್ದಾರೆ ಎಂದು ಮೂಲಗಳು ಬಹಿರಂಗಪಡಿಸಿವೆ.

ಈ ಬೆಳವಣಿಗೆ ಬಗ್ಗೆ ಡಿಸಿಎಂ ಶಿವಕುಮಾರ್ ಇನ್ನೂ ಪ್ರತಿಕ್ರಿಯಿಸಿಲ್ಲ.

ಸಹಕಾರ ಸಚಿವ ಕೆಎನ್ ರಾಜಣ್ಣ
KPCC ಅಧ್ಯಕ್ಷ ಸ್ಥಾನ ಅಹಿಂದ ವರ್ಗಕ್ಕೆ ನೀಡಬೇಕೆಂಬ ಬೇಡಿಕೆ; ಸತೀಶ್ ಜಾರಕಿಹೊಳಿ ಹೇಳಿಕೆ ಹೀಗಿದೆ...

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com