ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಮರಳಿ ಕಾಂಗ್ರೆಸ್ ಗೆ

ಕಾಂಗ್ರೆಸ್​ ತೊರೆದು ಆಮ್​ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದ ಬ್ರಿಜೇಶ್​ ಕಾಳಪ್ಪ ಕೂಡ ಮರಳಿ ಮಾತೃ ಪಕ್ಷಕ್ಕೆ ವಾಪಸ್​ ಆಗಿದ್ದಾರೆ.
L R Shivarame Gowda and others joined congress party today
ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಹಾಗೂ ಅವರ ಪುತ್ರ, ಎಲ್.ಎಸ್. ಚೇತನ್ ಗೌಡ ಹಾಗೂ ಅವರ ಬೆಂಬಲಿಗರು ಇಂದು ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡರು.
Updated on

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಮಾಜಿ ಸಂಸದ, ಮಾಜಿ ಶಾಸಕ ಎಲ್​.ಆರ್​.ಶಿವರಾಮೇಗೌಡ ಇಂದು ಭಾನುವಾರ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ಸಂಸದ ಶಿವರಾಮೇಗೌಡ ಮತ್ತು ಪುತ್ರ ಮಂಜೇಗೌಡ, ಬ್ರಿಜೇಶ್ ಕಾಳಪ್ಪ ಮತ್ತು ಎಲ್.ಎಸ್.ಚೇತನ್ ಗೌಡ ಕಾಂಗ್ರೆಸ್ ಸೇರ್ಪಡೆಯಾದರು. ಎಲ್.ಆರ್. ಶಿವರಾಮೇಗೌಡ ಅವರ ಬೆಂಬಲಿಗರೂ ಕೂಡ ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್​ ಸೇರಿದ್ದಾರೆ.

ಎಲ್​ಆರ್​ ಶಿವರಾಮೇಗೌಡ ಅವರು ಇತ್ತೀಚಿಗೆ ಬಿಜೆಪಿ ಸೇರಿದ್ದರು. ಇದೀಗ ಮರಳಿ ಕಾಂಗ್ರೆಸ್​ ಪಕ್ಷ ಸೇರಿಕೊಂಡಿದ್ದಾರೆ. ಕಾಂಗ್ರೆಸ್​ ತೊರೆದು ಆಮ್​ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದ ಬ್ರಿಜೇಶ್​ ಕಾಳಪ್ಪ ಕೂಡ ಮರಳಿ ಮಾತೃ ಪಕ್ಷಕ್ಕೆ ವಾಪಸ್​ ಆಗಿದ್ದಾರೆ.

L R Shivarame Gowda and others joined congress party today
ಸಿದ್ದರಾಮಯ್ಯ ರಾಜ್ಯಕ್ಕಷ್ಟೇ ಅಲ್ಲ ದೇಶಕ್ಕೇ ಅನಿವಾರ್ಯ: ಕಾಂಗ್ರೆಸ್ ಶಾಸಕ ಕಂಪ್ಲಿ ಗಣೇಶ್

ಎಲ್​ ಆರ್ ಶಿವರಾಮೇಗೌಡ ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೊತೆ ವೇದಿಕೆ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದರು. ಚನ್ನಪಟ್ಟಣ ಉಪಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಸಿಪಿ ಯೋಗೇಶ್ವರ ಪರ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಇದು ಎಲ್​ ಆರ್​ ಶಿವರಾಮೇಗೌಡ ಕಾಂಗ್ರೆಸ್​ ಸೇರ್ಪಡೆ ಬಹುತೇಕ ಖಚಿತ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿದ್ದವು.

ಮಾಜಿ ಸಂಸದ ಜಿ. ಮಾದೇಗೌಡ ಅವರ ಬಗ್ಗೆ ಹಗುರ ಮಾತನಾಡಿ ಜೆಡಿಎಸ್​ನಿಂದ ಉಚ್ಚಾಟನೆಗೊಂಡಿದ್ದ ಎಲ್​ಆರ್ ಶಿವರಾಮೇಗೌಡ ಅವರು 2023ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಇದೀಗ ಬಿಜೆಪಿಗೆ ರಾಜಿನಾಮೆ ನೀಡಿ ಮತ್ತೆ ಕಾಂಗ್ರೆಸ್​ ಸೇರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com