ಕಂಡಕ್ಟರ್ ಮೇಲೆ ಮರಾಠಿಗರ ಹಲ್ಲೆ: ಕಠಿಣ ಕ್ರಮಕ್ಕೆ BJP ಆಗ್ರಹ

ಬೆಳಗಾವಿ ಗಡಿ ಪ್ರದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಭಾಷಾ ಸೌಹಾರ್ದತೆ ವೃದ್ಧಿಸುತ್ತಿದೆ, ನಾಡ ಪ್ರೇಮ ಪಸರಿಸುತ್ತಿದೆ, ಗಡಿ ಸೌಹಾರ್ದತೆಯೂ ಇಮ್ಮಡಿಸುತ್ತಿದೆ.
BJP
ಬಿಜೆಪಿ online desk
Updated on

ಬೆಂಗಳೂರು: ಬೆಳಗಾವಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಆಗ್ರಹಿಸಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ.ವಿಜಯೇಂದ್ರ ಅವರು, ಬೆಳಗಾವಿ ಗಡಿ ಪ್ರದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಭಾಷಾ ಸೌಹಾರ್ದತೆ ವೃದ್ಧಿಸುತ್ತಿದೆ, ನಾಡ ಪ್ರೇಮ ಪಸರಿಸುತ್ತಿದೆ, ಗಡಿ ಸೌಹಾರ್ದತೆಯೂ ಇಮ್ಮಡಿಸುತ್ತಿದೆ. ಈ ನಡುವೆ ಸಮಾಜಘಾತುಕ ಕಿಡಿಗೇಡಿಗಳು ಭಾಷೆಯ ಹೆಸರಿನಲ್ಲಿ ಪುಂಡತನ ಮೆರೆಯುತ್ತಿರುವುದು ಅತ್ಯಂತ ಖಂಡನೀಯ ಎಂದು ಹೇಳಿದ್ದಾರೆ.

ಮರಾಠಿ ಭಾಷೆಯ ಹೆಸರಿನಲ್ಲಿ ಕೆ.ಎಸ್.ಆರ್.ಟಿ.ಸಿ ನಿರ್ವಾಹಕರ ಮೇಲೆ ಹಲ್ಲೆ ನಡೆದಿರುವ ಘಟನೆ ಭಾಷಾ ದೌರ್ಜನ್ಯದ ಪರಮಾವಧಿಯಾಗಿದೆ. ನಾಗರಿಕ ಸಮಾಜ ತಲೆತಗ್ಗಿಸುವ ಈ ದುರ್ವರ್ತನೆಯನ್ನು ಸಹಿಕೊಳ್ಳುವ ಪ್ರಶ್ನೆಯೇ ಇಲ್ಲ. ದುಷ್ಕರ್ಮಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಲಿ. ಮರಾಠಿ-ಕನ್ನಡದ ಸೌಹಾರ್ದತೆಗೆ ಧಕ್ಕೆ ತರುತ್ತಿರುವ ಕನ್ನಡ ವಿರೋಧಿ ಮನಸ್ಥಿತಿಯ ದುರಾಕ್ರಮಣಗಳು ಪುನರಾವರ್ತನೆಯಾಗದ ರೀತಿಯಲ್ಲಿ ಸರ್ಕಾರ ಮುನ್ನೆಚ್ಚರಿಕೆ ಕ್ರಮವಹಿಸಲಿ ಎಂದು ಒತ್ತಾಯಿಸುತ್ತೇನೆಂದು ತಿಳಿಸಿದ್ದಾರೆ.

BJP
ಬೆಳಗಾವಿ: ಕನ್ನಡ ಅಲ್ಲ, ಮರಾಠಿಯಲ್ಲಿ ಮಾತಾಡು; KSRTC ಕಂಡಕ್ಟರ್ ಗೆ ಥಳಿಸಿದ ಯುವಕರು, ನಿರ್ವಾಹಕ ಕಣ್ಣೀರು!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com