R.Ashok
ವಿಪಕ್ಷ ನಾಯಕ ಆರ್.ಅಶೋಕ್

ಸ್ವಾಮಿ ಡಿ.ಕೆ ಶಿವಕುಮಾರ್ ಅವರೇ, ಅಧಿಕಾರವನ್ನ ಒದ್ದು ಕಿತ್ತುಕೊಳ್ಳುವ ಸಮಯ ಬಂದಿದೆ: ಡಿನ್ನರ್ ಮೀಟಿಂಗ್ ಗೆ ಅಶೋಕ್ ಟಾಂಗ್!

ಸ್ವಾಮಿ ಡಿ.ಕೆ.ಶಿವಕುಮಾರ್ ಅವರೇ, ಅಧಿಕಾರವನ್ನ ಒದ್ದು ಕಿತ್ತುಕೊಳ್ಳುತ್ತೇನೆ ಎಂದು ಸದನದಲ್ಲಿ ತಾವು ಅಬ್ಬರಿಸದ್ದನ್ನು ಕಾರ್ಯಗತ ಮಾಡುವ ಸಮಯ ಬಂದಿದೆ ಎಂದಿದ್ದಾರೆ.
Published on

ಬೆಂಗಳೂರು: ಹೊಸ ವರ್ಷಾಚರಣೆ ಪ್ರಯುಕ್ತ, ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸಕ್ಕೆ ಹೋಗಿದ್ದಾರೆ. ಇನ್ನೊಂದು ಕಡೆ, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಕಾಂಗ್ರೆಸ್ ಶಾಸಕರ ಸಭೆ ನಡೆದಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ, ವಿಧಾನಸಭೆಯಲ್ಲಿ ವಿಪಕ್ಷದ ನಾಯಕ ಆರ್. ಅಶೋಕ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಅತ್ತ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ವಿದೇಶ ಪ್ರವಾಸಕ್ಕೆ ಹೋಗುವುದನ್ನೇ ಕಾಯುತ್ತಿದ್ದ ಸಿಎಂ ಸಿದ್ದರಾಮಯ್ಯ ಬಣ, ಇತ್ತ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ 35 ಶಾಸಕರ ಡಿನ್ನರ್ ಮೀಟಿಂಗ್ ನಡೆಸಿ ಶಕ್ತಿ ಪ್ರದರ್ಶನ ಮಾಡಿದೆ.

ಸ್ವಾಮಿ ಡಿ.ಕೆ.ಶಿವಕುಮಾರ್ ಅವರೇ, ಅಧಿಕಾರವನ್ನ ಒದ್ದು ಕಿತ್ತುಕೊಳ್ಳುತ್ತೇನೆ ಎಂದು ಸದನದಲ್ಲಿ ತಾವು ಅಬ್ಬರಿಸದ್ದನ್ನು ಕಾರ್ಯಗತ ಮಾಡುವ ಸಮಯ ಬಂದಿದೆ ಎಂದಿದ್ದಾರೆ.

ತಮ್ಮ ಅನುಪಸ್ಥಿತಿಯಲ್ಲಿ ಸಂಪುಟ ಸಭೆ ನಡೆಯುತ್ತದೆ. ಬಸ್ ಟಿಕೆಟ್ ದರ 15% ಹೆಚ್ಚಿಸುವಂತಹ ಪ್ರಮುಖ ನಿರ್ಧಾರ ಆಗುತ್ತೆ. ಒಬ್ಬ ಉಪಮುಖ್ಯಮಂತ್ರಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷರ ಅನುಪಸ್ಥಿತಿಯಲ್ಲಿ ಇಂತಹ ನಿರ್ಧಾರಗಳು ಆಗುತ್ತೆ ಅಂದರೆ ಏನರ್ಥ? ಕಾಂಗ್ರೆಸ್ ಪಕ್ಷದಲ್ಲಿ ತಾವು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆಯೇ ಅಥವಾ ತಮ್ಮ ಅಬ್ಬರ ಏನಿದ್ದರೂ ಮಾಧ್ಯಮಗಳ ಮುಂದೆ ಮಾತ್ರವೇ? ಹೀಗೆ ಮುಂದುವರೆದರೆ ತಮ್ಮ ಕನಸು ಕನಸಾಗಿಯೇ ಉಳಿಯುವುದು ಮಾತ್ರ ಗ್ಯಾರೆಂಟಿ ಎಂದು ಟಾಂಗ್ ನೀಡಿದ್ದಾರೆ.

R.Ashok
ಡಿಕೆಶಿ ವಿದೇಶ ಪ್ರವಾಸದಲ್ಲಿರುವಾಗಲೇ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್ ಮೀಟಿಂಗ್: ಸಿಎಂ ಜೊತೆಗೆ 35 MLA ಗಳು ಭಾಗಿ!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com