ಸಿದ್ದರಾಮಯ್ಯ ಬಳಿಕ ಡಿಕೆ ಶಿವಕುಮಾರ್ ಮುಖ್ಯಮಂತ್ರಿ: ಮಾಗಡಿ ಬಾಲಕೃಷ್ಣ

ಸಿದ್ದರಾಮಯ್ಯ ಬಳಿಕ ಡಿಸಿಎಂ ಡಿಕೆಶಿ ಆವರು ಸಿಎಂ ಆಗ್ತಾರೆ. ಸಿದ್ದರಾಮಯ್ಯ ಬಳಿಕ ಡಿಸಿಎಂ ಸಿಎಂ ಆಗಬೇಕಲ್ವಾ. ಬೇರೆ ಬೇರೆಯವರೂ ಇದ್ದಾರೆ. ಆದರೆ ಅಂತಿಮವಾಗಿ ಹೈಕಮಾಂಡ್ ನಾಯಕರು ನಿರ್ಧಾರ ಮಾಡುತ್ತಾರೆ ಎಂದರು.
HC Balakrishna
ಎಚ್ ಸಿ ಬಾಲಕೃಷ್ಣ
Updated on

ಬೆಂಗಳೂರು: ಸಿದ್ದರಾಮಯ್ಯ ಬಳಿಕ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ಶಾಸಕ ಹಾಗೂ ಡಿಕೆ ಶಿವಕುಮಾರ್ ಬಳಗದಲ್ಲಿ ಗುರುತಿಸಿಕೊಂಡಿರುವ ಮಾಗಡಿ ಬಾಲಕೃಷ್ಣ ಹೇಳಿದ್ದಾರೆ.

ಭಾರತ್ ಜೋಡೋ ಭವನದಲ್ಲಿ ಕಾಂಗ್ರೆಸ್ ನಾಯಕರ ಸಭೆಗೂ ಮುನ್ನ ಮಾತನಾಡಿದ ಅವರು, ಅಧಿಕಾರ ಹಂಚಿಕೆ ಚರ್ಚೆ ವಿಚಾರವಾಗಿ ಶಾಸಕರು ಚರ್ಚೆ ಮಾಡುತ್ತಿಲ್ಲ, ಮಾಧ್ಯಮಗಳಲ್ಲಿ ಚರ್ಚೆ ಆಗ್ತಿದೆ ಎಂದರು.

ಸಿದ್ದರಾಮಯ್ಯ ಬಳಿಕ ಡಿಸಿಎಂ ಡಿಕೆಶಿ ಆವರು ಸಿಎಂ ಆಗ್ತಾರೆ. ಸಿದ್ದರಾಮಯ್ಯ ಬಳಿಕ ಡಿಸಿಎಂ ಸಿಎಂ ಆಗಬೇಕಲ್ವಾ. ಬೇರೆ ಬೇರೆಯವರೂ ಇದ್ದಾರೆ. ಆದರೆ ಅಂತಿಮವಾಗಿ ಹೈಕಮಾಂಡ್ ನಾಯಕರು ನಿರ್ಧಾರ ಮಾಡುತ್ತಾರೆ ಎಂದರು.

ಒಕ್ಕಲಿಗರ ಸಂಘದಿಂದ ಡಿಕೆಶಿ ಸಿಎಂ ಮಾಡಲು ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾರೊ ಹೇಳಿದ್ರು ಅಂದ ಮಾತ್ರಕ್ಕೆ ಹೇಳಿದವರನ್ನೆಲ್ಲಾ ಸಿಎಂ ಮಾಡೋದಕ್ಕೆ ಆಗಲ್ಲ. ಅವರು ಜಾತಿ ಅಭಿಮಾನದಿಂದ ಹೇಳಿದ್ದಾರೆ. ಹೈಕಮಾಂಡ್ ನಾಯಕರು ಅಂತಿಮ ನಿರ್ಧಾರ ಮಾಡ್ತಾರೆ ಎಂದರು.

HC Balakrishna
ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ಸಿಎಂ ಕುರ್ಚಿ ಖಾಲಿ ಇಲ್ಲ: ನಾಯಕತ್ವ ಬದಲಾವಣೆ ಊಹಾಪೋಹಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com