ಸುಳ್ಳು ಸುದ್ದಿ ಹರಡಿದ ಸಿಎಂ ಸಿದ್ದರಾಮಯ್ಯನವರ ಮೇಲೆ ಕೇಸು ಹಾಕ್ತೀರಾ?: ಪ್ರಿಯಾಂಕ್ ಖರ್ಗೆಗೆ BJP ಪ್ರಶ್ನೆ

ರಾಜ್ಯದ ಮುಖ್ಯಮಂತ್ರಿಗಳೇ ಸುಳ್ಳು ಸುದ್ದಿ ಹರಡುವ ಬ್ರ್ಯಾಂಡ್ ಅಂಬಾಸಿಡರ್ ಆಗಿರುವುದು ಕರ್ನಾಟಕದ ದುರಂತ ಎಂದು ತಿರುಗೇಟು ನೀಡಿದ್ದಾರೆ.
Priyank Kharge
ಪ್ರಿಯಾಂಕ್ ಖರ್ಗೆonline desk
Updated on

ಬೆಂಗಳೂರು: ಹಾರ್ಟ್ ಅಟ್ಯಾಕ್ ಗಳಿಗೆ ಕೋವಿಡ್ ಲಸಿಕೆಗೆ ತರಾತುರಿಯಲ್ಲಿ ಅನುಮೋದನೆ ನೀಡಿ ಲಸಿಕೆ ಕೊಟ್ಟಿದ್ದೇ ಕಾರಣ ಎಂದು ಸುಳ್ಳು ಸುದ್ದಿ ಹರಡಿದ ಸಿಎಂ ಸಿದ್ದರಾಮಯ್ಯನವರ ಮೇಲೆ ಸುಳ್ಳು ಸುದ್ದಿ ಕೇಸು ಹಾಕ್ತೀರಾ? ಎಂದು ಸಚಿವ ಪ್ರಿಯಾಂಕ್ ಖರ್ಗೆಗೆ ಬಿಜೆಪಿ ಭಾನುವಾರ ಪ್ರಶ್ನೆ ಮಾಡಿದೆ.

ಸಾಮಾಜಿಕ ಜಾಲತಾಣ ಎಕ್ಸ್ ಪೋಸ್ಟ್ ಮಾಡಿರುವ ಬಿಜೆಪಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಸುಳ್ಳು ಸುದ್ದಿ ಹರಡುವ ಸಿಎಂ ಸಿದ್ದರಾಮಯ್ಯ ಸರ್ಕಾರ ಸುಳ್ಳು ಸುದ್ದಿ ತಡೆಗೆ ಕಾನೂನು ರೂಪಿಸಲು ಹೊರಟಿರುವುದು ಈ ಶತಮಾನದ ಅತ್ಯಂತ ದೊಡ್ಡ ವಿಪರ್ಯಾಸ ಎಂದು ಕಿಡಿಕಾರಿದ್ದಾರೆ.

ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರೇ, ರಾಜ್ಯದಲ್ಲಿ ಸಂಭವಿಸುತ್ತಿರುವ ಹಾರ್ಟ್ ಅಟ್ಯಾಕ್ ಗಳಿಗೆ ಕೋವಿಡ್ ಲಸಿಕೆ ಕಾರಣವಲ್ಲ ಎಂದು ತಜ್ಞರ ವರದಿ ಸ್ಪಷ್ಟಪಡಿಸಿದೆ.ಹಾರ್ಟ್ ಅಟ್ಯಾಕ್ ಗಳಿಗೆ ಕೋವಿಡ್ ಲಸಿಕೆಗೆ ತರಾತುರಿಯಲ್ಲಿ ಅನುಮೋದನೆ ನೀಡಿ ಲಸಿಕೆ ಕೊಟ್ಟಿದ್ದೇ ಕಾರಣ ಎಂದು ಸುಳ್ಳು ಸುದ್ದಿ ಹರಡಿದ ಸಿಎಂ ಸಿದ್ದರಾಮಯ್ಯನವರ ಮೇಲೆ ಸುಳ್ಳು ಸುದ್ದಿ ಕೇಸು ಹಾಕ್ತೀರಾ?

ಬೇಕಾದರೆ ನಿಮ್ಮ ಚೀಫ್ @zoo_bear ಅವರ ಕೈಯಲ್ಲಿ ಫ್ಯಾಕ್ಟ್ ಚೆಕ್ ಮಾಡಿಸಿ ಆಮೇಲೆ ಕೇಸು ಹಾಕಿ. ರಾಜ್ಯದ ಮುಖ್ಯಮಂತ್ರಿಗಳೇ ಸುಳ್ಳು ಸುದ್ದಿ ಹರಡುವ ಬ್ರ್ಯಾಂಡ್ ಅಂಬಾಸಿಡರ್ ಆಗಿರುವುದು ಕರ್ನಾಟಕದ ದುರಂತ ಎಂದು ತಿರುಗೇಟು ನೀಡಿದ್ದಾರೆ.

Priyank Kharge
ಸರಣಿ ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ: ತಜ್ಞರ ಸಮಿತಿಯಿಂದ ವರದಿ ಸಲ್ಲಿಕೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com