ಅಧಿಕಾರ ಹಂಚಿಕೆ ವಿಚಾರ ಎಲ್ಲರ ಗಮನಕ್ಕೆ ತಂದಿದ್ದರೆ ಸಮಸ್ಯೆಯಾಗುತ್ತಿರಲಿಲ್ಲ: ಪರಮೇಶ್ವರ್

ಸಿಎಂ ಬದಲಾವಣೆ ವಿಷಯದ ಕುರಿತು ಕೆಲವು ಶಾಸಕರ ಹೇಳಿಕೆಗಳು ಕೆಲವು ಗೊಂದಲಗಳನ್ನು ಸೃಷ್ಟಿಸಿವೆ ಎಂದು ಒಪ್ಪಿಕೊಂಡ ಅವರು, ನಾಯಕತ್ವದ ವಿಷಯದ ಬಗ್ಗೆ ಸಾರ್ವಜನಿಕವಾಗಿ ಮಾತನಾಡದಂತೆ ಪಕ್ಷದ ಹೈಕಮಾಂಡ್ ನಮಗೆ ನಿರ್ದೇಶನ ನೀಡಿದೆ.
Dr.G. Parameshwar
ಗೃಹ ಸಚಿವ ಡಾ. ಜಿ. ಪರಮೇಶ್ವರ್
Updated on

ಮೈಸೂರು: ಸಿದ್ದರಾಮಯ್ಯ ತಾವೇ ಮುಂದಿನ 5 ವರ್ಷಗಳ ಕಾಲ ಮುಖ್ಯಮಂತ್ರಿ ಎಂದು ಹೇಳುತ್ತಿದ್ದಂತೆ, ಹೈಕಮಾಂಡ್ ಜೊತೆ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ಘಟಕವು ಹೈಕಮಾಂಡ್ ನಿರ್ಧಾರಕ್ಕೆ ಬದ್ಧವಾಗಿರುತ್ತದೆ ಎಂದು ಸಚಿವರು ಪುನರುಚ್ಚರಿಸಿದರು. ಶಾಸಕರ ಅಭಿಪ್ರಾಯ ಏನೇ ಇರಲಿ, ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಡಾ. ಪರಮೇಶ್ವರ್ ಹೇಳಿದರು.

ಸಿಎಂ ಬದಲಾವಣೆ ವಿಷಯದ ಕುರಿತು ಕೆಲವು ಶಾಸಕರ ಹೇಳಿಕೆಗಳು ಕೆಲವು ಗೊಂದಲಗಳನ್ನು ಸೃಷ್ಟಿಸಿವೆ ಎಂದು ಒಪ್ಪಿಕೊಂಡ ಅವರು, ನಾಯಕತ್ವದ ವಿಷಯದ ಬಗ್ಗೆ ಸಾರ್ವಜನಿಕವಾಗಿ ಮಾತನಾಡದಂತೆ ಪಕ್ಷದ ಹೈಕಮಾಂಡ್ ನಮಗೆ ನಿರ್ದೇಶನ ನೀಡಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸುರ್ಜೇವಾಲಾ ಅವರೊಂದಿಗಿನ ಸಭೆಯಲ್ಲಿ ಕೆಲವು ಶಾಸಕರು ಈ ಬಗ್ಗೆ ಮಾತನಾಡಿದ್ದಾರೆ. ಯಾರು ಯಾರನ್ನು ಬೆಂಬಲಿಸುತ್ತಿದ್ದಾರೆ ಎಂಬ ಪ್ರಶ್ನೆ ಈಗ ಏಕೆ ಉದ್ಭವಿಸಿದೆ ಎಂದು ನನಗೆ ತಿಳಿದಿಲ್ಲ ಎಂದು ಅವರು ಹೇಳಿದರು.

Dr.G. Parameshwar
Watch | ಡ್ರಾಮಾ ನಡೆಯುತ್ತಿದೆ, ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ!

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಲು ಶ್ರಮಿಸಿದ್ದಾರೆ ಎಂದು ಅವರು ಹೇಳಿದರು. ರಾಜಕೀಯದಲ್ಲಿ ಎಲ್ಲರಿಗೂ ಮಹತ್ವಾಕಾಂಕ್ಷೆಗಳಿವೆ ಎಂದು ಅವರು ಹೇಳಿದರು. ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಮಾತನಾಡಿದ ಅವರು, ಅದರ ಬಗ್ಗೆ ತಮಗೆ ತಿಳಿದಿಲ್ಲ ಎಂದು ಹೇಳಿದರು. ಅಧಿಕಾರ ಹಂಚಿಕೆ ಒಪ್ಪಂದದ ಸಂಬಂಧ ವಿಚಾರವನ್ನು ಎಲ್ಲರ ಗಮನಕ್ಕೆ ತಂದಿದ್ದರೆ ಅದು ಸಮಸ್ಯೆಯಾಗುತ್ತಿರಲಿಲ್ಲ ಎಂದು ಸಮರ್ಥಿಸಿಕೊಂಡರು.

ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ತಾವೇ ಮುಖ್ಯಮಂತ್ರಿಯಾಗಿ ಉಳಿಯುವುದಾಗಿ ಸ್ಪಷ್ಟವಾಗಿ ಹೇಳುವ ಮೂಲಕ ನಾಯಕತ್ವ ಬದಲಾವಣೆಯ ಊಹಾಪೋಹಗಳು ಕೊನೆಗೊಂಡಿವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com