ಬಿಜೆಪಿಯವರು ಶಾಶ್ವತವಾಗಿ ಭ್ರಮೆಯಲ್ಲಿರುತ್ತಾರೆ; ಭಿನ್ನಾಭಿಪ್ರಾಯದ ನಡುವೆ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಒಗ್ಗಟ್ಟು ಪ್ರದರ್ಶನ

ನಮ್ಮ ನಡುವೆ ಬಿರುಕು ಉಂಟುಮಾಡಬಹುದು ಎಂದು ಬಿಜೆಪಿ ಭ್ರಮೆಯಲ್ಲಿದೆ. ಅವರು ರಾಜಕೀಯ ಲಾಭದ ಕನಸು ಕಾಣುತ್ತಿದ್ದಾರೆ. ಅವರು ಶಾಶ್ವತವಾಗಿ ಆ ಭ್ರಮೆಯಲ್ಲಿಯೇ ಇರುತ್ತಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.
Siddaramaiah - DK Shivakumar
ಸಿದ್ದರಾಮಯ್ಯ- ಡಿಕೆ ಶಿವಕುಮಾರ್
Updated on

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭಾನುವಾರ ಕಬಿನಿ ಜಲಾಶಯಕ್ಕೆ 'ಬಾಗಿನ' ಅರ್ಪಿಸುವ ಮೂಲಕ ತಮ್ಮ ನಡುವಿನ ಭಿನ್ನಾಭಿಪ್ರಾಯದ ಒಗ್ಗಟ್ಟು ಪ್ರದರ್ಶಿಸಿದರು.

ಮೈಸೂರಿನಲ್ಲಿ ಜು. 19ರಂದು ನಡೆದ ಸರ್ಕಾರದ 2 ವರ್ಷಗಳ ಸಾಧನಾ ಸಮಾವೇಶದಲ್ಲಿ ತಮ್ಮ ಮಾತು ಆರಂಭಿಸುವ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವೇದಿಕೆ ಮೇಲಿದ್ದ ಗಣ್ಯರೆಲ್ಲರನ್ನೂ ಆಹ್ವಾನಿಸಿದರು. ಆದರೆ, ಆ ಸಂದರ್ಭದಲ್ಲಿ ಅವರು ಸರ್ಕಾರದ ಪ್ರಮುಖ ವ್ಯಕ್ತಿ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಸ್ವಾಗತಿಸಿಲ್ಲ.

ಇದನ್ನು ಗಮನಿಸಿದ ವೇದಿಕೆ ಮೇಲಿದ್ದ ಕಾಂಗ್ರೆಸ್ ನಾಯಕರೊಬ್ಬರು ಮುಖ್ಯಮಂತ್ರಿಗಳ ಬಳಿಗೆ ಹೋಗಿ ಕಿವಿಯಲ್ಲಿ ಡಿಸಿಎಂ ಅವರನ್ನು ಮರೆತಿರಿ ಎಂದು ಜ್ಞಾಪಿಸಿದ್ದಾರೆ. ಕೂಡಲೇ ಪ್ರತಿಕ್ರಿಯಿಸಿದ ಸಿಎಂ, 'ಶಿಷ್ಟಾಚಾರದ ಪ್ರಕಾರ ವೇದಿಕೆಯಲ್ಲಿದ್ದವರಿಗೆ ಮಾತ್ರ ಮಾನ್ಯತೆ ನೀಡಬೇಕು. ಮನೆಯಲ್ಲಿ ಕೂತಿರುವವರಿಗೆಲ್ಲ ವೆಲ್‌ಕಂ ಮಾಡೋಕೆ ಆಗಲ್ಲ' ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ, ಶಿವಕುಮಾರ್ ಅವರಿಗೆ ಸಿದ್ದರಾಮಯ್ಯ 'ಅವಮಾನ' ಮಾಡಿದ್ದಾರೆ ಮತ್ತು ಕಾಂಗ್ರೆಸ್‌ನೊಳಗೆ ಬಿರುಕು ಮೂಡಿದೆ ಎಂದಿತ್ತು.

Siddaramaiah - DK Shivakumar
ಸಂಪೂರ್ಣ ತುಂಬಿದ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿಯ ಪ್ರತಿಕ್ರಿಯೆಯು ರಾಜಕೀಯ ದುರುದ್ದೇಶ ಹೊಂದಿದೆ. ಬಿಜೆಪಿ ಮೊಸರಿನಲ್ಲಿ ಕಲ್ಲುಗಳನ್ನು ಹುಡುಕಲು ಪ್ರಯತ್ನಿಸುತ್ತಿದೆ. ಶಿವಕುಮಾರ್ ಮೊದಲೇ ಹಾಜರಿದ್ದರು. ದೆಹಲಿಗೆ ತೆರಳುತ್ತಿರುವುದಾಗಿ ಅವರು ನಮಗೆ ತಿಳಿಸಿದ್ದರು ಮತ್ತು ಅದನ್ನು ಸಾರ್ವಜನಿಕವಾಗಿಯೂ ಹೇಳಿದ್ದರು. ಅದಕ್ಕಾಗಿಯೇ ನಾನು ಅವರ ಹೆಸರನ್ನು ಉಲ್ಲೇಖಿಸಲಿಲ್ಲ ಎಂದು ತಳ್ಳಿಹಾಕಿದರು.

'ಈಗಾಗಲೇ ಸ್ಥಳದಿಂದ ಹೊರಟು ಹೋಗಿರುವ ಯಾರನ್ನಾದರೂ ಹೆಸರಿಸದಿದ್ದರೆ ಅದು ಹೇಗೆ ಅವಮಾನವಾಗುತ್ತದೆ? ನಮ್ಮ ನಡುವೆ ಬಿರುಕು ಉಂಟುಮಾಡಬಹುದು ಎಂದು ಬಿಜೆಪಿ ಭ್ರಮೆಯಲ್ಲಿದೆ. ಅವರು ರಾಜಕೀಯ ಲಾಭದ ಕನಸು ಕಾಣುತ್ತಿದ್ದಾರೆ. ಅವರು ಶಾಶ್ವತವಾಗಿ ಆ ಭ್ರಮೆಯಲ್ಲಿಯೇ ಇರುತ್ತಾರೆ' ಎಂದರು.

Siddaramaiah - DK Shivakumar
DKS ಹೆಸರು ಪ್ರಸ್ತಾಪಿಸದ ಸಿಎಂ: 'ಮನೇಲಿ ಕೂತಿರೋರಿಗೆ ಸ್ವಾಗತ ಮಾಡೋಕಾಗುತ್ತಾ'; ಕಾಂಗ್ರೆಸ್ ನಾಯಕನ ವಿರುದ್ಧ ಸಿದ್ದರಾಮಯ್ಯ ಗರಂ!

ಈ ಬಗ್ಗೆ ಪ್ರತಿಕ್ರಿಯಿಸಿದ ಶಿವಕುಮಾರ್, 'ಬಿಜೆಪಿ ನಾಯಕರು ನನ್ನ ಮೇಲೆ ಹೆಚ್ಚು ಪ್ರೀತಿ ಹೊಂದಿರುವಂತೆ ತೋರುತ್ತಿದೆ ಮತ್ತು ನೀವು ಬಲಶಾಲಿಯಾಗಿದ್ದರೆ, ನೀವು ಹೆಚ್ಚು ಅಭಿಮಾನಿಗಳನ್ನು ಆಕರ್ಷಿಸುತ್ತೀರಿ. ನಾನು ಕಾರ್ಯಕ್ರಮದಿಂದ ನಿರ್ಗಮಿಸುವ ಬಗ್ಗೆ ಮುಂಚಿತವಾಗಿ ತಿಳಿಸಿದ್ದೆ. ನನಗೆ ದೆಹಲಿಯಲ್ಲಿ ತುರ್ತು ಕೆಲಸವಿದೆ ಎಂದು ಮುಖ್ಯಮಂತ್ರಿ ಮತ್ತು ಇತರರಿಗೆ ತಿಳಿಸಿದ್ದೆ' ಎಂದು ಹೇಳಿದರು.

'ನಾನು ವಕೀಲರೊಂದಿಗೆ ಅಪಾಯಿಂಟ್ಮೆಂಟ್ ಪಡೆದುಕೊಂಡಿದ್ದೆ ಮತ್ತು ನನ್ನ ಭಾಷಣದ ನಂತರ ತಕ್ಷಣವೇ ನಾನು ಅಲ್ಲಿಗೆ ಹಾರಿದೆ. ಅದೇ ರಾತ್ರಿ ನಾನು ಹಿಂತಿರುಗಿದೆ. ನನ್ನ ದೆಹಲಿ ಭೇಟಿಯಲ್ಲಿ ಯಾವುದೇ ರಾಜಕೀಯ ಇರಲಿಲ್ಲ' ಎಂದು ಶಿವಕುಮಾರ್ ಸ್ಪಷ್ಟಪಡಿಸಿದರು.

ತಮ್ಮ ಬೆಂಗಾವಲು ಪಡೆಯ ವಾಹನವೊಂದಕ್ಕೆ ಸಂಬಂಧಿಸಿದ ಸಣ್ಣ ಅಪಘಾತವನ್ನು ಸಹ ಉಲ್ಲೇಖಿಸಿದ ಅವರು, 'ಚಾಮುಂಡೇಶ್ವರಿ ದೇವಿಯ ಕೃಪೆಯಿಂದ ಯಾವುದೇ ಹಾನಿ ಸಂಭವಿಸಿಲ್ಲ' ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com