ಚುನಾವಣಾ ಆಯೋಗದ ವಿರುದ್ಧ ಆರೋಪ: ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಕ್ಷಮೆಯಾಚಿಸಬೇಕು- ಬಿ.ವೈ ವಿಜಯೇಂದ್ರ

ಕಾಂಗ್ರೆಸ್ ನಾಯಕರು ಸಾಂವಿಧಾನಿಕ ಸಂಸ್ಥೆಯ ಸಮಗ್ರತೆಯನ್ನು ಪ್ರಶ್ನಿಸುವ ಮೂಲಕ ಸಾರ್ವಜನಿಕರ ಮನಸ್ಸಿನಲ್ಲಿ ಅನುಮಾನದ ಬೀಜಗಳನ್ನು ಬಿತ್ತುತ್ತಿದ್ದಾರೆ ಎಂದು ಹೇಳಿದರು.
BY Vijayendra
ಬಿವೈ ವಿಜಯೇಂದ್ರ
Updated on

ಬೆಂಗಳೂರು: ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಚುನಾವಣಾ ಆಯೋಗದ ಮೇಲೆ ಆಪಾದನೆಗಳನ್ನು ಮಾಡಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಾಜ್ಯದ ಜನರ ಕ್ಷಮೆಯಾಚಿಸಬೇಕು ಎಂದು ಶುಕ್ರವಾರ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ನಾಯಕರು ಸಾಂವಿಧಾನಿಕ ಸಂಸ್ಥೆಯ ಸಮಗ್ರತೆಯನ್ನು ಪ್ರಶ್ನಿಸುವ ಮೂಲಕ ಸಾರ್ವಜನಿಕರ ಮನಸ್ಸಿನಲ್ಲಿ ಅನುಮಾನದ ಬೀಜಗಳನ್ನು ಬಿತ್ತುತ್ತಿದ್ದಾರೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಜಯೇಂದ್ರ, 'ಹಿಂದಿನ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಈಗ ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಅದೇ ಆರೋಪಗಳನ್ನು ಪ್ರತಿಧ್ವನಿಸಿದ್ದಾರೆ. ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಯನ್ನು ಪ್ರಶ್ನಿಸುವುದು ಸಂಸ್ಥೆಗೆ ಮಾಡಿದ ಅವಮಾನ ಮಾತ್ರವಲ್ಲದೆ ಪ್ರಜಾಪ್ರಭುತ್ವ ವಿರೋಧಿ ಕೃತ್ಯವೂ ಆಗಿದೆ' ಎಂದು ಹೇಳಿದರು.

'ಚುನಾವಣಾ ಆಯೋಗವನ್ನು ನಿಜವಾಗಿಯೂ ಬಿಜೆಪಿ ದುರುಪಯೋಗಪಡಿಸಿಕೊಂಡಿದ್ದರೆ, 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 134 ಸ್ಥಾನಗಳೊಂದಿಗೆ ಕರ್ನಾಟಕದಲ್ಲಿ ಹೇಗೆ ಅಧಿಕಾರಕ್ಕೆ ಬಂದಿತು? ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಸಾಧ್ಯವಿತ್ತೇ? ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಕೂಡ ಕಾಂಗ್ರೆಸ್ ಗೆಲ್ಲಲಿಲ್ಲವೇ? ಚುನಾವಣೆಗಳನ್ನು ತಿರುಚಿದ್ದರೆ ಅದು ಹೇಗೆ ಸಾಧ್ಯವಾಯಿತು?' ಎಂದು ಪ್ರಶ್ನಿಸಿದರು.

BY Vijayendra
'100 ಪರ್ಸೆಂಟ್ ಪ್ರೂಫ್ ಇದೆ'; ಕರ್ನಾಟಕದಲ್ಲಿ ಚುನಾವಣಾ ಅಕ್ರಮಕ್ಕೆ ಆಯೋಗ ಅವಕಾಶ ನೀಡಿದೆ: ರಾಹುಲ್ ಗಾಂಧಿ

ಕಾಂಗ್ರೆಸ್ ನಾಯಕರ ಹೇಳಿಕೆಗಳು 'ಅಪಾಯಕಾರಿ ಬೆಳವಣಿಗೆ'ಯಾಗಿದ್ದು, ಇದು ಪಕ್ಷದ 'ತುರ್ತು ಪರಿಸ್ಥಿತಿಯ ಯುಗದ ಮನಸ್ಥಿತಿಯನ್ನು' ಪ್ರತಿಬಿಂಬಿಸುತ್ತದೆ. ಅದು ಇಂದಿಗೂ ಬದಲಾಗಿಲ್ಲ. ಸುಪ್ರೀಂ ಕೋರ್ಟ್‌ನಲ್ಲಿ ಮತದಾರರ ಪಟ್ಟಿ ಮತ್ತು ಚುನಾವಣೆಗಳ ವಿಷಯವಿರುವಾಗ, ಅಂತಹ ಹೇಳಿಕೆಗಳನ್ನು ನ್ಯಾಯಾಲಯದಲ್ಲಿ ನೀಡಬೇಕು ಹೊರತು ಸಾರ್ವಜನಿಕ ವೇದಿಕೆಗಳಲ್ಲಿ ಅಲ್ಲ ಎಂದರು.

`ಚುನಾವಣಾ ಆಯೋಗದ ಬಗ್ಗೆ ಸಾರ್ವಜನಿಕರ ಗ್ರಹಿಕೆಯನ್ನು ಭ್ರಷ್ಟಗೊಳಿಸುವುದು ಒಳ್ಳೆಯ ಅಭಿರುಚಿಯಲ್ಲ' ಎಂದು ಅವರು ಹೇಳಿದರು.

ಚುನಾವಣಾ ಆಯೋಗವು ಕರ್ನಾಟಕದ ಒಂದು ಲೋಕಸಭಾ ಕ್ಷೇತ್ರದಲ್ಲಿ ವಂಚನೆಗೆ ಅವಕಾಶ ನೀಡಿದೆ ಎಂಬುದಕ್ಕೆ ಕಾಂಗ್ರೆಸ್ ಬಳಿ ಶೇ 100 ರಷ್ಟು ಖಚಿತವಾದ ಪುರಾವೆಗಳಿವೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಮಾಡಿದ್ದ ಆರೋಪಕ್ಕೆ ಪ್ರತಿಯಾಗಿ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.

ಗಾಂಧಿಯವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಚುನಾವಣಾ ಆಯೋಗ, ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 80ರ ಪ್ರಕಾರ ಚುನಾವಣಾ ಅರ್ಜಿ ಸಲ್ಲಿಸುವ ಬದಲು ಅಥವಾ ಹೈಕೋರ್ಟ್‌ನ ತೀರ್ಪಿಗಾಗಿ ಕಾಯುವ ಬದಲು, ಅವರು 'ಆಧಾರರಹಿತ ಆರೋಪಗಳನ್ನು' ಮಾಡಿರುವುದು ಮಾತ್ರವಲ್ಲದೆ, ಸಾಂವಿಧಾನಿಕ ಸಂಸ್ಥೆಗೆ 'ಬೆದರಿಕೆ ಹಾಕುತ್ತಿರುವುದು' ಅತ್ಯಂತ ದುರದೃಷ್ಟಕರ ಎಂದು ಹೇಳಿದೆ.

BY Vijayendra
ಚುನಾವಣಾ ಆಯೋಗ ಬಿಜೆಪಿಯ 'ಚುನಾವಣಾ ಕಳ್ಳತನ' ಶಾಖೆಯಾಗಿದೆಯೇ?: ರಾಹುಲ್ ಗಾಂಧಿ

ಚುನಾವಣಾ ಫಲಿತಾಂಶ ಪ್ರಕಟವಾದ 45 ದಿನಗಳ ಒಳಗೆ, ತೀರ್ಪಿನಿಂದ ತೃಪ್ತರಾಗದ ಯಾರಾದರೂ ಚುನಾವಣಾ ಅರ್ಜಿಯನ್ನು ಸಲ್ಲಿಸಬಹುದು. ಅಂತಹ ಅರ್ಜಿಗಳನ್ನು ಸಂಬಂಧಪಟ್ಟ ಕ್ಷೇತ್ರದ ರಾಜ್ಯದ ಹೈಕೋರ್ಟ್‌ಗಳಲ್ಲಿ ಸಲ್ಲಿಸಬಹುದು.

ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ರಾಹುಲ್ ಗಾಂಧಿಯವರ ಹೇಳಿಕೆಗಳನ್ನು ಬೆಂಬಲಿಸಿ, ಕರ್ನಾಟಕದಲ್ಲಿ ಚುನಾವಣಾ ಅಕ್ರಮ ನಡೆದಿರುವುದಕ್ಕೆ 'ಸ್ಪಷ್ಟ ಮತ್ತು ನಿರಾಕರಿಸಲಾಗದ ಪುರಾವೆಗಳಿವೆ' ಎಂದು ಹೇಳಿದ್ದರು.

ಈ ಹೇಳಿಕೆಗಳನ್ನು ಬೇಜವಾಬ್ದಾರಿ ಮತ್ತು ಹಾನಿಕಾರಕ ಎಂದು ಟೀಕಿಸಿದ ವಿಜಯೇಂದ್ರ, 'ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಕರ್ನಾಟಕದ ಜನತೆಯಲ್ಲಿ ಕ್ಷಮೆಯಾಚಿಸಬೇಕು. ಪುರಾವೆಗಳಿಲ್ಲದೆ ಮತ್ತು ಕಾನೂನು ಪರಿಹಾರಗಳು ಇರುವಾಗ ಚುನಾವಣಾ ಆಯೋಗವನ್ನು ಪ್ರಶ್ನಿಸುವುದು ಸ್ವೀಕಾರಾರ್ಹವಲ್ಲ' ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com