Bengaluru stampede: CM ಸಿದ್ದರಾಮಯ್ಯ, DCM ಡಿಕೆ ಶಿವಕುಮಾರ್ ವಿರುದ್ಧ ಪೊಲೀಸರಿಗೆ ಬಿಜೆಪಿ ದೂರು

ಕಾಲ್ತುಳಿತ ಪ್ರಕರಣದಲ್ಲಿ ಮೊದಲ ಆರೋಪಿ ಸಿದ್ದರಾಮಯ್ಯ ಮತ್ತು ಎರಡನೇ ಆರೋಪಿ ಡಿ.ಕೆ. ಶಿವಕುಮಾರ್ ಆಗಿದ್ದು, ಇಬ್ಬರೂ ರಾಜಕೀಯ ಲಾಭ ಪಡೆಯುವ ಉದ್ದೇಶವನ್ನು ಹೊಂದಿದ್ದರು.
ಡಿಕೆ ಶಿವಕುಮಾರ್, ಸಿದ್ದರಾಮಯ್ಯ
ಡಿಕೆ ಶಿವಕುಮಾರ್, ಸಿದ್ದರಾಮಯ್ಯ
Updated on

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಗೃಹ ಸಚಿವ ಜಿ. ಪರಮೇಶ್ವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿರುವುದಾಗಿ ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ತಿಳಿಸಿದ್ದಾರೆ.

"ಕಾಲ್ತುಳಿತ ಪ್ರಕರಣದಲ್ಲಿ ಮೊದಲ ಆರೋಪಿ ಸಿದ್ದರಾಮಯ್ಯ ಮತ್ತು ಎರಡನೇ ಆರೋಪಿ ಡಿ.ಕೆ. ಶಿವಕುಮಾರ್ ಆಗಿದ್ದು, ಇಬ್ಬರೂ ರಾಜಕೀಯ ಲಾಭ ಪಡೆಯುವ ಉದ್ದೇಶವನ್ನು ಹೊಂದಿದ್ದರು(ಆರ್‌ಸಿಬಿ ಗೆಲುವಿನಿಂದ). ಅವರು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದು, ಅವರಿಂದಲೇ ಸಾವುಗಳು ಸಂಭವಿಸಿವೆ. ನಾನು ಜಿ. ಪರಮೇಶ್ವರ ಅವರನ್ನು ಮೂರನೇ ಆರೋಪಿ ಎಂದು ಉಲ್ಲೇಖಿಸಿದ್ದೇನೆ. ನನ್ನ ಪ್ರಕಾರ, ಅವರಿಗೆ ಯಾವುದೇ ಉದ್ದೇಶವಿಲ್ಲ. ಆದರೆ ಅವರು ನಿರ್ಲಕ್ಷ್ಯ ವಹಿಸಿದ್ದರು ಮತ್ತು ಗೃಹ ಸಚಿವರಾಗಿ ವಿಫಲರಾಗಿದ್ದಾರೆ" ಎಂದು ರಾಜೀವ್ ಆರೋಪಿಸಿದ್ದಾರೆ.

ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ದುರಂತಕ್ಕೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನೈತಿಕ ಹೊಣೆ ಹೊರಬೇಕಾಗುತ್ತದೆ ಎಂದು ಹೇಳಿದರು.

ಡಿಕೆ ಶಿವಕುಮಾರ್, ಸಿದ್ದರಾಮಯ್ಯ
Bengaluru stampede: RCB, DNA, KSCA ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು

"ನಾನು ದೂರಿನ ಪ್ರತಿಯನ್ನು ಎಸಿಪಿಗೆ ನೀಡಿದ್ದೇನೆ. ಅದನ್ನು ಎಫ್‌ಐಆರ್ ಆಗಿ ಪರಿವರ್ತಿಸಬೇಕು. ಇಲ್ಲದಿದ್ದರೆ, ನಾನು ನ್ಯಾಯಾಲಯಕ್ಕೆ ಹೋಗಿ ಪಿಸಿಆರ್ ದಾಖಲಿಸುತ್ತೇನೆ. ಪಾರದರ್ಶಕ ಕಾನೂನು ಪ್ರಕ್ರಿಯೆಗೆ ಒತ್ತಾಯಿಸುತ್ತೇನೆ" ಎಂದು ಅವರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ ಮತ್ತು ಇತರ ನಾಲ್ವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಕ್ಕಾಗಿ ಬಿಜೆಪಿ ಮಾಜಿ ಶಾಸಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಆರ್‌ಸಿಬಿಯ ಐಪಿಎಲ್ ಗೆಲುವಿನಿಂದ ರಾಜಕೀಯ ಲಾಭ ಪಡೆಯುವ ಉದ್ದೇಶ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರಿಗಿದೆ. "ಸರ್ಕಾರಕ್ಕೂ ಆರ್‌ಸಿಬಿಗೂ ಏನು ಸಂಬಂಧ? ಆರ್‌ಸಿಬಿಯ ವಿಜಯೋತ್ಸವಕ್ಕೆ ಸಾರ್ವಜನಿಕ ಹಣವನ್ನು ಏಕೆ ಖರ್ಚು ಮಾಡಲಾಯಿತು?" ಎಂದು ಪ್ರಶ್ನಿಸಿದರು.

ಈಗಾಗಲೇ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್‌ಪೆಕ್ಟರ್ ನೀಡಿದ ದೂರಿನ ಆಧಾರದ ಮೇಲೆ ಗುರುವಾರ ಆರ್‌ಸಿಬಿ, ರಾಜ್ಯ ಕ್ರಿಕೆಟ್ ಸಂಸ್ಥೆ ಮತ್ತು ಈವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ವಿರುದ್ಧ ಮೊದಲ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ನಾಲ್ವರನ್ನು ಬಂಧಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com