ವರ್ಷಾಂತ್ಯಕ್ಕೆ ಸರ್ಕಾರದಲ್ಲಿ ಸಣ್ಣಪುಟ್ಟ ಬದಲಾವಣೆ: ಸಚಿವ ಸತೀಶ್ ಜಾರಕಿಹೊಳಿ

"ನಾನು ಕೆಪಿಸಿಸಿ ಅಧ್ಯಕ್ಷನಾಗಲು ಯಾವುದೇ ಪ್ರಯತ್ನ ಮಾಡಿಲ್ಲ. ನಾನು ಪ್ರಯತ್ನಿಸಿದ್ದರೆ, ಅದನ್ನು ಮತ್ತಷ್ಟು ಮುಂದುವರಿಸುತ್ತಿದ್ದೆ. ನನ್ನ ಪ್ರಸ್ತುತ ಸ್ಥಾನದಿಂದ ನಾನು ತೃಪ್ತನಾಗಿದ್ದೇನೆ.
Minister Satish Jarkiholi
ಸಚಿವ ಸತೀಶ್ ಜಾರಕಿಹೊಳಿ
Updated on

ಬೆಳಗಾವಿ: ಈ ವರ್ಷದ ಅಂತ್ಯದ ವೇಳೆಗೆ ರಾಜ್ಯ ಸರ್ಕಾರದಲ್ಲಿ ಸಣ್ಣಪುಟ್ಟ ಬದಲಾವಣೆಗಳಾಗುವ ಸಾಧ್ಯತೆ ಇದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಗುರುವಾರ ಹೇಳಿದ್ದಾರೆ. ಆದರೆ ಯಾವುದೇ ಸಂಪುಟ ಪುನರ್ರಚನೆಯಂತಹ ದೊಡ್ಡ ಬದಲಾವಣೆಯನ್ನು ತಳ್ಳಿಹಾಕಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, "ನಾನು ಕೆಪಿಸಿಸಿ ಅಧ್ಯಕ್ಷನಾಗಲು ಯಾವುದೇ ಪ್ರಯತ್ನ ಮಾಡಿಲ್ಲ. ನಾನು ಪ್ರಯತ್ನಿಸಿದ್ದರೆ, ಅದನ್ನು ಮತ್ತಷ್ಟು ಮುಂದುವರಿಸುತ್ತಿದ್ದೆ. ನನ್ನ ಪ್ರಸ್ತುತ ಸ್ಥಾನದಿಂದ ನಾನು ತೃಪ್ತನಾಗಿದ್ದೇನೆ. ನಿಮಗೆಲ್ಲರಿಗೂ ತಿಳಿದಿರುವಂತೆ, ನಾನು ಎಲ್ಲಿದ್ದೆನೋ, ಅಲ್ಲೇ ಇದ್ದೇನೆ. ನಮ್ಮನ್ನು ಪುಶ್ ಮಾಡೋರು ಇಲ್ವಲ್ಲ'' ಎಂದು ಮಾರ್ಮಿಕವಾಗಿ ತಿಳಿಸಿದರು

ಜಲಸಂಪನ್ಮೂಲ ಇಲಾಖೆಯಿಂದ ಹಣ ಪಡೆಯದಿರುವ ಬಗ್ಗೆ ಕಾಂಗ್ರೆಸ್ ಶಾಸಕರ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು, "ಶಾಸಕ ರಾಜು ಕಾಗೆ ನೀರಾವರಿ ಸಮಸ್ಯೆಗಳ ಬಗ್ಗೆ ನಿರಂತರವಾಗಿ ಕಳವಳ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ವಿಷಯ ತಿಳಿದಿದೆ ಮತ್ತು ಈ ಬಗ್ಗೆ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸುತ್ತಾರೆ" ಎಂದರು.

Minister Satish Jarkiholi
ರಾಜ್ಯ ಕಾಂಗ್ರೆಸ್‌ನಲ್ಲಿ ಅನೇಕ 'ಪವರ್ ಸೆಂಟರ್'; ಸೆಪ್ಟೆಂಬರ್ ನಂತರ ರಾಜಕೀಯ ಬೆಳವಣಿಗೆ: ಸಚಿವ ಕೆ.ಎನ್ ರಾಜಣ್ಣ

"ಜಲಸಂಪನ್ಮೂಲ ಇಲಾಖೆಯಲ್ಲಿ ಹಣವಿಲ್ಲ ಎಂದು ಯಾರು ಹೇಳಿದ್ದಾರೆ?". "ಪ್ರಸ್ತುತ ಆ ಇಲಾಖೆಯಲ್ಲಿ 25,000 ಕೋಟಿ ಹಣ ಇದೆ. ಬಾಕಿ ಬಿಲ್‌ಗಳು ಸಹ ಇವೆ. ಯಾವುದೇ ಸರ್ಕಾರ ಅಧಿಕಾರದಲ್ಲಿದ್ದರೂ, ಮೊದಲ ಮೂರು ವರ್ಷಗಳವರೆಗೆ ಬಿಲ್‌ಗಳು ಹೆಚ್ಚಾಗಿ ಪಾವತಿಸುವುದಿಲ್ಲ" ಎಂದರು.

ಇದೇ ವೇಳೆ ಬಿಜೆಪಿ ರಾಜ್ಯ ಅಧ್ಯಕ್ಷರ ಬದಲಾವಣೆಯು ಕೆಪಿಸಿಸಿ ಪುನರ್ರಚನೆಗೆ ಕಾರಣವಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಜಾರಕಿಹೊಳಿ, "ಬಿಜೆಪಿ ವಿಭಿನ್ನ ವಿಧಾನವನ್ನು ಅನುಸರಿಸುತ್ತದೆ. ಅವರ ಸಿದ್ಧಾಂತ ಮತ್ತು ತತ್ವಗಳು ನಮ್ಮ ಪಕ್ಷಕ್ಕಿಂತ ಭಿನ್ನವಾಗಿವೆ. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತುಂಬಾ ವ್ಯತ್ಯಾಸವಿದೆ" ಎಂದರು.

ಕೆಪಿಸಿಸಿ ಅಧ್ಯಕ್ಷರನ್ನು ಬದಲಾಯಿಸುವ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಅವರು ಹೇಳಿದರು.

ಪಕ್ಷದ ಆಂತರಿಕ ಭಿನ್ನಾಭಿಪ್ರಾಯಗಳ ಕುರಿತು, "ಹಿರಿಯ ನಾಯಕರು ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಜವಾಬ್ದಾರಿಗಳನ್ನು ಹೇಗೆ ನಿಯೋಜಿಸಬೇಕೆಂದು ಹೈಕಮಾಂಡ್‌ಗೆ ತಿಳಿದಿದೆ. ಶಾಸಕ ಬಿ.ಆರ್. ಪಾಟೀಲ್ ಅವರ ಹೇಳಿಕೆ ಬಗ್ಗೆ ದೆಹಲಿಯಲ್ಲಿ ಚರ್ಚಿಸಲಾಗಿದೆ ಮತ್ತು ಹಿರಿಯ ನಾಯಕರು ಮುಖ್ಯಮಂತ್ರಿಯೊಂದಿಗೆ ಮಾತನಾಡಿದ್ದಾರೆ" ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com