ಸದ್ಗುರು ಜೊತೆ ವೇದಿಕೆ ಹಂಚಿಕೊಂಡ ಡಿಕೆಶಿ: ರಾಹುಲ್ ಅವಮಾನಿಸಿದವರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಎಷ್ಟು ಸರಿ?- ಸಚಿವ ರಾಜಣ್ಣ

ನಮ್ಮ ಹಿರಿಯ ನಾಯಕ ರಾಹುಲ್ ಗಾಂಧಿಯವರನ್ನು ಸದ್ಗುರುಗಳು ಅವಮಾನಿಸಿದ್ದಾರೆಂದು ಡಿಕೆ.ಶಿವಕುಮಾರ್ ಅವರಿಗೆ ತಿಳಿದಿಲ್ಲವೇ?
DK Shivakumar with Amit shah at isha foundation
ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಡಿಕೆ.ಶಿವಕುಮಾರ್ ಹಾಗೂ ಅಮಿತ್ ಶಾ.online desk
Updated on

ಬೆಂಗಳೂರು: ಸದ್ಗುರು ಜಗದೀಶ್ ವಾಸುದೇವ್ ಅವರ ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿಯಾಗಿದ್ದರ ಕುರಿತು ಸಚಿವ ರಾಜಣ್ಣ ಅವರು ತೀವ್ರವಾಗಿ ಕಿಡಿಕಾರಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಯಾರೆಂದು ನನಗೆ ತಿಳಿದಿಲ್ಲ ಎಂದು ಒಮ್ಮೆ ಸದ್ಗುರು ಹೇಳಿದ್ದರು. ಅವರೊಂದಿಗೆ ಡಿಕೆ.ಶಿವಕುಮಾರ್ ಹೇಗೆ ವೇದಿಕೆ ಹಂಚಿಕೊಂಡರು. ಈ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಹೇಳಿದರು.

ನಮ್ಮ ಹಿರಿಯ ನಾಯಕ ರಾಹುಲ್ ಗಾಂಧಿಯವರನ್ನು ಸದ್ಗುರುಗಳು ಅವಮಾನಿಸಿದ್ದಾರೆಂದು ಡಿಕೆ.ಶಿವಕುಮಾರ್ ಅವರಿಗೆ ತಿಳಿದಿಲ್ಲವೇ? ರಾಜಕಾರಣದಲ್ಲಿ ಯಾರ್ಯಾರು, ಏನೇನು ಮಾತನಾಡುತ್ತಾರೆ ಎಂಬುದು ನನಗಿಂತಲೂ ಡಿ.ಕೆ.ಶಿವಕುಮಾರ್ ಅವರಿಗೆ ಹೆಚ್ಚಿನ ಮಾಹಿತಿ ಇರುತ್ತದೆ ಎಂದು ತಿಳಿಸಿದರು.

ಮತ್ತೊಬ್ಬ ಕಾಂಗ್ರೆಸ್ ಹಿರಿಯ ನಾಯಕ ಸತೀಶ್ ಜಾರಕಿಹೊಳಿ ಅವರು ಮಾತನಾಡಿ, ಈ ವಿಷಯ ಪಕ್ಷದ ಕೇಂದ್ರ ನಾಯಕತ್ವದ ನಿರ್ಧಾರಕ್ಕೆ ಬಿಟ್ಟದ್ದು ಎಂದು ಹೇಳಿದರು.

ಎಂ.ಬಿ. ಪಾಟೀಲ್ ಅವರು ಮಾತನಾಡಿ, ಶಿವಕುಮಾರ್ ಹಿಂದೂ ಧರ್ಮವನ್ನು ಅನುಸರಿಸುವವರು. ಧಾರ್ಮಿಕ ಕಾರ್ಯಕ್ರಮಕ್ಕೆ ಹಾಜರಾಗುವುದರಲ್ಲಿ ತಪ್ಪೇನಿದೆ? ಎಂದು ವಾದಿಸಿದರು,

ಹಿಂದುತ್ವ ಬಿಜೆಪಿಯ ಆಸ್ತಿಯಲ್ಲ. ಶಿವಕುಮಾರ್ ಸೇರಿದಂತೆ ಎಲ್ಲಾ ಪಕ್ಷಗಳ ನಾಯಕರು ಭಾರತೀಯ ಸಂಸ್ಕೃತಿಯನ್ನು ಸಂರಕ್ಷಿಸಲು ಶ್ರಮಿಸುತ್ತಿದ್ದಾರೆಂದು ಹೇಳಿದರು.

DK Shivakumar with Amit shah at isha foundation
ಶಾ ಜೊತೆ ಡಿಕೆಶಿ ಕಾಣಿಸಿಕೊಂಡ ಮಾತ್ರಕ್ಕೆ ಸರ್ಕಾರ ಬಿದ್ದು ಹೋಗುತ್ತದೆಯೇ? ಯಾವ ಕ್ಷಿಪ್ರ ಕ್ರಾಂತಿಯೂ ನಡೆಯಲ್ಲ; ಜಾರಕಿಹೊಳಿ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com