ಬಸನಗೌಡ ಪಾಟೀಲ್ ಯತ್ನಾಳ್ ಸವಾಲು ಸ್ವೀಕಾರ: ಶಾಸಕ ಸ್ಥಾನಕ್ಕೆ ಸಚಿವ ಶಿವಾನಂದ ಪಾಟೀಲ ರಾಜೀನಾಮೆ

ರಾಜಕೀಯಕ್ಕಾಗಿ ಪಾಟೀಲ’ ಅಂತ ಸರ್‌ನೇಮ್ ಸೇರಿಸಿದ್ದು, ಅಪ್ಪನಿಗೆ ಹುಟ್ಟಿದವ ಆದರೆ ಶುಕ್ರವಾರದೊಳಗೆ ರಾಜೀನಾಮೆ ನೀಡಿ ಚುನಾವಣೆಯಲ್ಲಿ ನನ್ನ ಮುಂದೆ ಸ್ಪರ್ಧಿಸಲಿ ಎಂದು ಸವಾಲು ಹಾಕಿದ್ದರು.
 shivanand patil resignation letter
ಶಾಸಕ ಸ್ಥಾನಕ್ಕೆ ಶಿವಾನಂದ ಪಾಟೀಲ್ ರಾಜಿನಾಮೆ
Updated on

ಬೆಂಗಳೂರು: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಸವಾಲನ್ನು ಸ್ವೀಕರಿಸಿರುವ ಶಿವಾನಂದ ಪಾಟೀಲ ಶುಕ್ರವಾರ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ.

ಯತ್ನಾಳ್ ಅವರು ಇತ್ತೀಚೆಗೆ ಶಿವಾನಂದ ಪಾಟೀಲ ಅವರನ್ನು ಉದ್ದೇಶಿಸಿ, ಅವರು ಪಾಟೀಲರೇ ಅಲ್ಲ, ‘ರಾಜಕೀಯಕ್ಕಾಗಿ ಪಾಟೀಲ’ ಅಂತ ಸರ್‌ನೇಮ್ ಸೇರಿಸಿದ್ದು, ಅಪ್ಪನಿಗೆ ಹುಟ್ಟಿದವ ಆದರೆ ಶುಕ್ರವಾರದೊಳಗೆ ರಾಜೀನಾಮೆ ನೀಡಿ ಚುನಾವಣೆಯಲ್ಲಿ ನನ್ನ ಮುಂದೆ ಸ್ಪರ್ಧಿಸಲಿ ಎಂದು ಸವಾಲು ಹಾಕಿದ್ದರು. ಆ ಸವಾಲು ಸ್ವೀಕರಿಸಿದ ಶಿವಾನಂದ ಪಾಟೀಲ ರಾಜೀನಾಮೆ ನೀಡಿದ್ದಾರೆ. ಬಸನಗೌಡ ಪಾಟೀಲ ರಾಜೀನಾಮೆ ನೀಡಿದ ನಂತರ ತಮ್ಮ ರಾಜೀನಾಮೆ ಸ್ವೀಕರಿಸಬೇಕು ಎಂದು ಶಿವಾನಂದ ಪಾಟೀಲ್ ಷರತ್ತು ಹಾಕಿದ್ದಾರೆ.

ರಾಜೀನಾಮೆ ಪತ್ರ ನೀಡಿದ ಬಳಿಕ ಸುದ್ದಿಗಾರರ ಜತೆ‌ ಮಾತನಾಡಿ ಶಿವಾನಂದ ಪಾಟೀಲ, ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ನೀಡಿದ್ದೇನೆ. ಇದಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ. ಇದು ವೈಯಕ್ತಿಕ ತೀರ್ಮಾನ. ಯತ್ನಾಳ ರಾಜೀನಾಮೆ ನೀಡಿ ನನ್ನ ವಿರುದ್ಧ ಚುನಾವಣೆ ಎದುರಿಸಲಿ ಎಂದು ಸವಾಲು ಹಾಕಿದರು.

 shivanand patil resignation letter
ಅತ್ಯಾಚಾರಿಗಳು, ಕೊಲೆಗಡುಕರು ಸಿಕ್ಕರೆ ಮುಲಾಜಿಲ್ಲದೆ Encounter ಮಾಡಿ; ಹಿಂದೂಗಳ ರಕ್ಷಿಸುವಂತ ಸರ್ಕಾರ ಇರಬೇಕು: ಯತ್ನಾಳ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com