ಜಾತಿಗಣತಿ ವಿವಾದ: ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವ ಎಲ್ಲಾ ಹಕ್ಕು ನನಗಿದೆ- ಸಚಿವ ಸತೀಶ್ ಜಾರಕಿಹೊಳಿ

ಸರ್ಕಾರ ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರವನ್ನು ಬೆಂಬಲಿಸಲು ನಾನು ಬದ್ಧನಾಗಿಲ್ಲ. ಒಂದು ನಿರ್ಧಾರ ಸರಿಯಾಗಿಲ್ಲದಿದ್ದರೆ ಅದನ್ನು ವಿರೋಧಿಸುವ ಹಕ್ಕು ನನಗಿದೆ.
ಸಚಿವ ಸತೀಶ್ ಜಾರಕಿಹೊಳಿ
ಸಚಿವ ಸತೀಶ್ ಜಾರಕಿಹೊಳಿ
Updated on

ಹುಬ್ಬಳ್ಳಿ: ನಾನು ಸರ್ಕಾರದ ಸರ್ಕಾರದ ಭಾಗವಾಗಿದ್ದರೂ, ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾದ ನಿರ್ಧಾರಗಳನ್ನು ವಿರೋಧಿಸುವ ಎಲ್ಲಾ ಹಕ್ಕು ನನಗಿದೆ ಎಂದು ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಸಚಿವ ಸತೀಶ್ ಜಾರಕಿಹೊಳಿ ಅವರು ಭಾನುವಾರ ಹೇಳಿದರು.

ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಜಾರಕಿಹೊಳಿ ಅವರು, ರಾಜ್ಯ ಸರ್ಕಾರ ಇತ್ತೀಚೆಗೆ ಅಂಗೀಕರಿಸಿದ ಜಾತಿ ಜನಗಣತಿ ವರದಿ ಕುರಿತು ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು.

ಸರ್ಕಾರ ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರವನ್ನು ಬೆಂಬಲಿಸಲು ನಾನು ಬದ್ಧನಾಗಿಲ್ಲ. ಒಂದು ನಿರ್ಧಾರ ಸರಿಯಾಗಿಲ್ಲದಿದ್ದರೆ ಅದನ್ನು ವಿರೋಧಿಸುವ ಹಕ್ಕು ನನಗಿದೆ. ಅಂತಹ ಯಾವುದೇ ನಿರ್ಧಾರವನ್ನು ತಿರಸ್ಕರಿಸುವ ಅಧಿಕಾರವೂ ನನಗಿದೆ ಎಂದು ಹೇಳಿದರು.

ಇದೇ ವೇಳೆ ಜಾತಿ ಜನಗಣತಿ ವರದಿಯ ಕುರಿತು ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯಗಳನ್ನು ಸಚಿವರು ಒಪ್ಪಿಕೊಂಡರು.

ಸಚಿವ ಸತೀಶ್ ಜಾರಕಿಹೊಳಿ
ಜಾತಿ ಗಣತಿ: ರಾಜಕೀಯ ಲಾಭ ಪಡೆಯಲು ಬಿಜೆಪಿ, ಕಾಂಗ್ರೆಸ್ ನಡುವೆ ಸಮರ; ರಾಹುಲ್ ಗೆ ನೀಡಿದ ಸೂಚನೆ ಏನು?

ಭಿನ್ನಾಭಿಪ್ರಾಯ ಹೊಂದಿರುವವರು ತಮ್ಮ ಅಭಿಪ್ರಾಯಗಳನ್ನು ಲಿಖಿತವಾಗಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ಸರ್ಕಾರ ನಮ್ಮ ಅಭಿಪ್ರಾಯಗಳನ್ನು ಪರಿಗಣಿಸುತ್ತದೆ ಎಂದು ವಿಶ್ವಾಸವಿದೆ ಎಂದು ಹೇಳಿದರು.

ಮೇ 9 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಪ್ರಸ್ತಾಪವಾಗುವ ನಿರೀಕ್ಷೆಯಿರುವುದರಿಂದ, ಏನಾಗುತ್ತದೆ ಎಂದು ನೋಡೋಣ ಎಂದರು.

ಸಾಮಾನ್ಯ ಜನಗಣತಿಯ ಜೊತೆಗೆ ಜಾತಿ ಗಣತಿ ನಡೆಸುವ ಕೇಂದ್ರ ಸರ್ಕಾರದ ನಿರ್ಧಾರದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಜಾತಿ ಗಣತಿ ವಿಚಾರದಲ್ಲಿ ಬಿಜೆಪಿ ಯೂಟರ್ನ್ ಹೊಡೆದಿದೆ. ಜಾತಿ ಗಣತಿ ಬಗ್ಗೆ ಅವರಿಗೆ ಏಕಾಏಕಿ ಪ್ರೀತಿ ಬಂದಿದೆ ಎಂದು ವ್ಯಂಗ್ಯವಾಡಿದರು.

ನಾವು ಜಾತಿ ಗಣತಿ ಮಾಡಿದಾಗ ಬಿಜೆಪಿಯವರು ವಿರೋಧ ಮಾಡಿದರು. ಈಗ ಕೇಂದ್ರ ಸರಕಾರ ಜಾತಿ ಗಣತಿ ಮಾಡುವ ತೀರ್ಮಾನ ಕೈಗೊಂಡಿರುವುದಕ್ಕೆ, ಪ್ರಧಾನಿಗೆ ದೂರದೃಷ್ಟಿಯಿದೆ ಎಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಟೀಕಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com