ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಆಗಲಿದೆಯೇ?: ಸ್ವತಃ ಸ್ಪಷ್ಟನೆ ನೀಡಿದ ಡಿ ಕೆ ಶಿವಕುಮಾರ್

ರಾಜ್ಯ ಸರ್ಕಾರದಲ್ಲಿ ಅಧಿಕಾರ ಹಸ್ತಾಂತರ, ನವೆಂಬರ್ ಕ್ರಾಂತಿಯ ಊಹಾಪೋಹಗಳ ನಡುವೆ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಿನ್ನೆ ಬುಧವಾರ ದೆಹಲಿಗೆ ತೆರಳಿದ್ದರು.
DCM D K Shivakumar discusses with advocates in Delhi Karnataka Bhavan
ರಾಜ್ಯದ ಜಲವಿವಾದಗಳ ಕುರಿತು ವಕೀಲರೊಂದಿಗೆ ಚರ್ಚೆ
Updated on

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಅಧಿಕಾರ ಹಸ್ತಾಂತರ, ನವೆಂಬರ್ ಕ್ರಾಂತಿಯ ಊಹಾಪೋಹಗಳ ನಡುವೆ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಿನ್ನೆ ಬುಧವಾರ ದೆಹಲಿಗೆ ತೆರಳಿದ್ದರು. ಹೈಕಮಾಂಡ್ ಭೇಟಿಯಾಗುತ್ತಾರೆ ಎಂದು ಹೇಳಲಾಗುತ್ತಿತ್ತು.

ಆದರೆ, ಈ ಕುರಿತು ಸ್ಪಷ್ಟನೆ ನೀಡಿರುವ ಅವರು, ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಲ್ಲ, ಮಾಡುತ್ತಲೂ ಇಲ್ಲ ಎಂದು ತಿಳಿಸಿದ್ದಾರೆ. ಎಲ್ಲಾ ಸುಳ್ಳು. ನಾನು ಯಾರನ್ನೂ ಭೇಟಿ ಮಾಡಿಲ್ಲ, ಭೇಟಿ ಮಾಡೋದೂ ಇಲ್ಲ ಎಂದು ಹೇಳಿದ್ದಾರೆ.

ದೆಹಲಿ ಭೇಟಿಯ ಮುಖ್ಯ ಉದ್ದೇಶ ರಾಜ್ಯದ ಪ್ರಮುಖ ಜಲ ವಿವಾದಗಳಾದ ಕಾವೇರಿ, ಮೇಕೆದಾಟು ಮತ್ತು ಕೃಷ್ಣಾ ನದಿ ವಿಚಾರಗಳ ಕುರಿತು ಚರ್ಚೆ ನಡೆಸುವುದಾಗಿತ್ತು. ಮಹದಾಯಿ ವಿಚಾರದಲ್ಲೂ ಕೆಲವು ಅಂಶಗಳಿದ್ದು, ಸದ್ಯಕ್ಕೆ ಆ ಬಗ್ಗೆ ಮಾತನಾಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಕೆಲವು ದಾಖಲೆಗಳನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

ಡಿ ಕೆ ಶಿವಕುಮಾರ್ ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

DCM D K Shivakumar discusses with advocates in Delhi Karnataka Bhavan
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡುವೆ 'ದೆಹಲಿಗೆ' ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್! ವರಿಷ್ಠರನ್ನು ಭೇಟಿಯಾಗ್ತಾರಾ?

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com