ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ನವೆಂಬರ್ 26 ರಂದು ನಡೆಯುವ ಸಂವಿಧಾನ ದಿನಾಚರಣೆಗೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ಇಲ್ಲಿಗೆ ಬಂದಿದ್ದೇನೆ.
Mallikarjun Kharge
ಮಲ್ಲಿಕಾರ್ಜುನ ಖರ್ಗೆ
Updated on

ನವದೆಹಲಿ/ಬೆಂಗಳೂರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ವಿಷಯವು ಸಾರ್ವಜನಿಕವಾಗಿ ಚರ್ಚಿಸಬೇಕಾದ ವಿಷಯವಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಹೇಳಿದ್ದಾರೆ.

ನವೆಂಬರ್ 26 ರಂದು ನಡೆಯುವ ಸಂವಿಧಾನ ದಿನಾಚರಣೆಯಲ್ಲಿ ಭಾಗವಹಿಸಲು ಇಂದು ಬೆಂಗಳೂರಿನಿಂದ ದೆಹಲಿಗೆ ಆಗಮಿಸಿದ ಖರ್ಗೆ, "ಇದು ಇಲ್ಲಿ ಮತ್ತು ಸಾರ್ವಜನಿಕವಾಗಿ ಚರ್ಚಿಸಬೇಕಾದ ವಿಷಯವಲ್ಲ ಎಂದು ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ನವೆಂಬರ್ 26 ರಂದು ನಡೆಯುವ ಸಂವಿಧಾನ ದಿನಾಚರಣೆಗೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ಇಲ್ಲಿಗೆ ಬಂದಿದ್ದೇನೆ. ಈ ಕಾರ್ಯಕ್ರಮಕ್ಕೆ ನನಗೆ ಆಹ್ವಾನವಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ, ನಾನು ಪರಿಶೀಲನಾ ಸಭೆಗಳಲ್ಲಿ ಭಾಗವಹಿಸಬೇಕಾಗಿದೆ ಎಂದರು.

Mallikarjun Kharge
CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಹುಲ್ ಗಾಂಧಿಯವರೊಂದಿಗಿನ ಅವರ ಸಂಭಾವ್ಯ ಭೇಟಿಯ ಬಗ್ಗೆ ಕೇಳಿದಾಗ, "ಅಧ್ಯಕ್ಷರು ಬೇರೆಲ್ಲಿಯೂ ಚರ್ಚಿಸುವುದಿಲ್ಲ ಎಂದು ನಿಮಗೆಲ್ಲರಿಗೂ ತಿಳಿದಿದೆ. ಸಭೆ ನಡೆದರೆ, ಆ ಬಗ್ಗೆ ನಾವು ಚರ್ಚಿಸುತ್ತೇವೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ತಿಳಿಸಿದರು.

ನವೆಂಬರ್ 20 ರಂದು ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷ ಪೂರ್ಣಗೊಳಿಸಿದ ನಂತರ, 2023 ರಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ "ಅಧಿಕಾರ ಹಂಚಿಕೆ" ಒಪ್ಪಂದವನ್ನು ಉಲ್ಲೇಖಿಸಿ, ಆಡಳಿತ ಪಕ್ಷದೊಳಗೆ ಸಿಎಂ ಪಟ್ಟಕ್ಕಾಗಿ ಫೈಟ್ ತೀವ್ರಗೊಂಡಿದ್ದು, ಸಿಎಂ ಮತ್ತು ಡಿಸಿಎಂ ಇಬ್ಬರೂ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದು ಹೇಳುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com