ಯಾರೂ ಅಧಿಕಾರ ಹಂಚಿಕೆ ಬಗ್ಗೆ ಮಾತನಾಡಬೇಡಿ, ಅದರಿಂದ ಪಕ್ಷಕ್ಕೆ ಡ್ಯಾಮೇಜ್: ಡಿ ಕೆ ಶಿವಕುಮಾರ್

ಇದಕ್ಕೆ ಪ್ರತಿಕ್ರಿಯಿಸಿರುವ ಡಿ ಕೆ ಶಿವಕುಮಾರ್, ಕಾಂಗ್ರೆಸ್​ನಲ್ಲಿ ಯಾರೂ ಅಧಿಕಾರ ಹಂಚಿಕೆ ಬಗ್ಗೆ ಮಾತನಾಡಬೇಡಿ, ಅದು ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆ ಎಂದಿದ್ದಾರೆ.
D K Shivakumar
ಡಿ ಕೆ ಶಿವಕುಮಾರ್
Updated on

ಬೆಂಗಳೂರು: ಕಾಂಗ್ರೆಸ್ ನಲ್ಲಿ ದಸರಾ ಹಬ್ಬದ ಮಧ್ಯೆ ಮತ್ತೆ ಪವರ್ ಶೇರಿಂಗ್​​​ ಚರ್ಚೆ ಮುನ್ನಲೆಗೆ ಬಂದಿದೆ. ನವೆಂಬರ್ ನಲ್ಲಿ ರಾಜ್ಯ ಕಾಂಗ್ರೆಸ್ ನಲ್ಲಿ ಕ್ರಾಂತಿಯಾಗುತ್ತದೆ ಎಂಬ ಮಾತುಗಳನ್ನು ರಾಜಕೀಯ ನಾಯಕರೇ ಹೇಳುತ್ತಿದ್ದಾರೆ. ಕೆಲ ಕಾಂಗ್ರೆಸ್​​ ನಾಯಕರು ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಡಿ ಕೆ ಶಿವಕುಮಾರ್, ಕಾಂಗ್ರೆಸ್​ನಲ್ಲಿ ಯಾರೂ ಅಧಿಕಾರ ಹಂಚಿಕೆ ಬಗ್ಗೆ ಮಾತನಾಡಬೇಡಿ, ಅದು ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆ ಎಂದಿದ್ದಾರೆ.

ಕುಣಿಗಲ್ ಶಾಸಕ ರಂಗನಾಥ್​ಗೆ ನೋಟಿಸ್

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಯಾರಿಗೂ ಪವರ್ ಶೇರಿಂಗ್ ಬಗ್ಗೆ ಮಾತನಾಡುವುದಕ್ಕೆ ಹಕ್ಕಿಲ್ಲ. ಕುಣಿಗಲ್ ಶಾಸಕ ರಂಗನಾಥ್ ಸೇರಿದಂತೆ ಯಾರು ಸಹ ಮಾತನಾಡಬಾರದು. ಅವರಿಗೆ ನೋಟಿಸ್ ಕೊಡಲು ಹೇಳಿದ್ದೇನೆ ಎಂದರು.

D K Shivakumar
ಮೈಸೂರು: ಮುಂದಿನ ವರ್ಷಗಳಲ್ಲೂ ದಸರಾದಲ್ಲಿ ನಾನೇ ಪುಷ್ಪಾರ್ಚನೆ: ಡಿಕೆಶಿ ಕನಸಿಗೆ 'ಕೊಳ್ಳಿ' ಇಟ್ರಾ ಸಿದ್ದರಾಮಯ್ಯ?

ಪವರ್ ಶೇರಿಂಗ್ ಬಗ್ಗೆ ಎಲ್ಲಿ ಚರ್ಚೆ ಇದೆ? ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಹೇಳಿದ್ದಾರೆ, ಯಾರು ಚರ್ಚೆ ಮಾಡಬಾರದು. ಇದರ ಬಗ್ಗೆ ಮಾತನಾಡುವವರು ಪಕ್ಷಕ್ಕೆ ಡ್ಯಾಮೇಜ್ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಪರವಾಗಿ ಮಾತಾಡಿದರೂ, ನನ್ನ ಪರವಾಗಿ ಮಾತಾಡಿದರೂ ಅದು ಡ್ಯಾಮೇಜ್ ಆಗುತ್ತೆ. ಇದರ ಬಗ್ಗೆ ಚರ್ಚೆ ಮಾಡಿದರೆ ಪಕ್ಷ ವಿರೋಧಿ ಚಟುವಟಿಕೆ ಮಾಡಿದಂತೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಬೇರೆ ರೀತಿ ಹೇಳಿದ್ದಾರೆ, ಅವರು ಹೇಳಿದಂತೆ ಹೈಕಮಾಂಡ್ ಮಾತೇ ಅಂತಿಮ. ಹೈಕಮಾಂಡ್​ ಹೇಳಿದಂತೆ ನಾವು ನಡೆದುಕೊಳ್ಳುತ್ತೇವೆ. ನಮಗೆ ಪಕ್ಷ ಮುಖ್ಯ, ವ್ಯಕ್ತಿಯಲ್ಲ. ಪಕ್ಷ ಹೇಳಿದಂತೆ ಕೇಳಿಕೊಂಡು ಹೋಗುತ್ತೇವೆ ಎಂದರು.

ಬಿಜೆಪಿ ಪಕ್ಷದರು ಅವರ ಪಾರ್ಟಿಯ ಕ್ರಾಂತಿಯ ಬಗ್ಗೆ ಚರ್ಚೆ ಮಾಡಿಕೊಂಡು ಹೋಗಲಿ. ನಾನು ಸೂಜಿ, ದಾರ ಬೇಕಾದರೆ ಕಳಿಸಿಕೊಡುತ್ತೇನೆ ಅವರು ಹೊಲೆದುಕೊಂಡು ಅವರ ಪಕ್ಷವನ್ನು ರೆಡಿ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com