ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಟೀಕಿಸಲು BJP ದೇವೇಗೌಡರನ್ನು ಕಣಕ್ಕಿಳಿಸಿದೆ: ಸುರ್ಜೇವಾಲಾ ಟೀಕೆ

ಬಿಜೆಪಿ-ಜೆಡಿಎಸ್ ಮೈತ್ರಿಯ ದ್ವೇಷಕ್ಕೆ ಮಿತಿಯೇ ಇಲ್ಲ. ಜನರ ಬದುಕಿಗೆ ಬೆಳಕಾಗಿರುವ ಈ ಯೋಜನೆಗಳನ್ನು ವಿರೋಧಿಸಲು ದೇವೇಗೌಡರನ್ನೇ ಬಿಜೆಪಿ ಮುಂದೆ ಬಿಟ್ಟಿದೆ. ಇಂತಹ 'ಕುರುಡು ದೃಷ್ಟಿಯುಳ್ಳ ಪಕ್ಷಗಳು ನಾಚಿಕೆಪಡಬೇಕು.
 Randeep Singh Surjewala
ರಣದೀಪ್ ಸಿಂಗ್ ಸುರ್ಜೇವಾಲಾ
Updated on

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳನ್ನು ಟೀಕಿಸಲು ಬಿಜೆಪಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರನ್ನು ಕಣಕ್ಕಿಳಿಸಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ಸಿಂಗ್‌ ಸುರ್ಜೇವಾಲಾ ಅವರು ಶನಿವಾರ ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಮೈತ್ರಿಯ ದ್ವೇಷಕ್ಕೆ ಮಿತಿಯೇ ಇಲ್ಲ. ಜನರ ಬದುಕಿಗೆ ಬೆಳಕಾಗಿರುವ ಈ ಯೋಜನೆಗಳನ್ನು ವಿರೋಧಿಸಲು ದೇವೇಗೌಡರನ್ನೇ ಬಿಜೆಪಿ ಮುಂದೆ ಬಿಟ್ಟಿದೆ. ಇಂತಹ 'ಕುರುಡು ದೃಷ್ಟಿಯುಳ್ಳ ಪಕ್ಷಗಳು ನಾಚಿಕೆಪಡಬೇಕು ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳು ಕೇವಲ ಜನಪರ ಯೋಜನೆಗಳಲ್ಲ. ಸಾಮಾಜಿಕ ನ್ಯಾಯ ಎತ್ತಿ ಹಿಡಿದು, ಕೋಟ್ಯಂತರ ಜನರ ಜೀವನದಲ್ಲಿ ಬದಲಾವಣೆ ತಂದಿವೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂಬ ದೇವೇಗೌಡರ ಹೇಳಿಕೆ ಬಿಜೆಪಿ-ಜೆಡಿಎಸ್‌ ದ್ವೇಷ ರಾಜಕಾರಣಕ್ಕೆ ಒಂದು ಉದಾಹರಣೆ. ಎರಡೂ ‘ಕುರುಡು ದೃಷ್ಟಿಯುಳ್ಳ ಪಕ್ಷಗಳು ಎಂದು ಟೀಕಿಸಿದರು.

ಗ್ಯಾರಂಟಿ ಯೋಜನೆಗಳಿಗಾಗಿಯೇ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ 97 ಸಾವಿರ ಕೋಟಿ ರೂ. ಹಣವನ್ನು ವ್ಯಯಿಸುತ್ತಿರುವಾಗ ಆರ್ಥಿಕ ಪರಿಸ್ಥಿತಿ ಹೇಗೆ ಹದಗೆಡಲು ಸಾಧ್ಯ? ಸಾಮಾಜಿಕ ನ್ಯಾಯದ ಉದ್ದೇಶವನ್ನು ಹತ್ತಿಕ್ಕುವ ಮೂಲಕ ಗ್ಯಾರಂಟಿಗಳನ್ನು ಸ್ಥಗಿತಗೊಳಿಸಲು ಬಿಜೆಪಿ-ಜೆಡಿಎಸ್ ಬಯಸುತ್ತಿವೆ. ಇಂತಹ ದುಷ್ಟ ಪ್ರಯತ್ನವನ್ನು ಸಫಲವಾಗಲು ಕಾಂಗ್ರೆಸ್‌ ಬಿಡುವುದಿಲ್ಲ ಎಂದು ತಿಳಿಸಿದರು.

 Randeep Singh Surjewala
ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ, ಸರ್ಕಾರದ ಬಳಿ ಹಣವಿಲ್ಲ: ಎಚ್‌.ಡಿ ದೇವೇಗೌಡ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com