ತೆಲಂಗಾಣದಂತೆ ಕೇರಳದಲ್ಲೂ ನಡೆಯುತ್ತಾ ಡಿ ಕೆ ಶಿವಕುಮಾರ್ ಮ್ಯಾಜಿಕ್? ಹೈಕಮಾಂಡ್ ಇಟ್ಟಿರುವ ಭರವಸೆಯೇನು?

ಕಾಂಗ್ರೆಸ್ ಪಕ್ಷದಲ್ಲಿ ಏನೇ ಸಮಸ್ಯೆ ಬಂದರೂ ಹೈಕಮಾಂಡ್ ಡಿಕೆಶಿಯತ್ತ ಮುಖ ಮಾಡುತ್ತದೆ. ಡಿ ಕೆ ಶಿವಕುಮಾರ್ ಕಾಂಗ್ರೆಸ್ ನ ಟ್ರಬಲ್ ಶೂಟರ್ ಎಂಬ ಮಾತು ಕೂಡ ಇದೆ.
D K Shivakumar
ಡಿ ಕೆ ಶಿವಕುಮಾರ್
Updated on

ತಿರುವನಂತಪುರಂ: 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಬಹಳ ಮುಖ್ಯ ಕಾರಣ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಎಂಬುದು ಬಹಿರಂಗ ಸತ್ಯ. ಅದೇ ರೀತಿ ನಂತರ ನೆರೆಯ ತೆಲಂಗಾಣ ರಾಜ್ಯದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕೂಡ ಕಾಂಗ್ರೆಸ್ ಗೆಲುವಿನಲ್ಲಿ ಡಿ ಕೆ ಶಿವಕುಮಾರ್ ಅವರ ಪಾತ್ರ ಬಹಳ ಮುಖ್ಯವಾಗಿತ್ತು.

ಕಾಂಗ್ರೆಸ್ ಪಕ್ಷದಲ್ಲಿ ಏನೇ ಸಮಸ್ಯೆ ಬಂದರೂ ಹೈಕಮಾಂಡ್ ಡಿಕೆಶಿಯತ್ತ ಮುಖ ಮಾಡುತ್ತದೆ. ಡಿ ಕೆ ಶಿವಕುಮಾರ್ ಕಾಂಗ್ರೆಸ್ ನ ಟ್ರಬಲ್ ಶೂಟರ್ ಎಂಬ ಮಾತು ಕೂಡ ಇದೆ. ಹಾಗಾದರೆ ಈ ಮ್ಯಾಜಿಕ್ ನೆರೆಯ ಕೇರಳ ರಾಜ್ಯದಲ್ಲಿಯೂ ಪುನರಾವರ್ತನೆಯಾಗುತ್ತದೆಯೇ?

D K Shivakumar
ಕುತೂಹಲ ಮೂಡಿಸಿದ ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟ್: ಗರಿಗೆದರಿದ ಸಂಪುಟ ಪುನಾರಚನೆ, ಡಿಸಿಎಂ ಡಿಕೆಶಿ ಏನೆಂದರು?

ಡಿ ಕೆ ಶಿವಕುಮಾರ್ ಅವರ ಆಪ್ತರಾದ ಹರ್ಷ ಕನದಂ ಅವರನ್ನು ತಿರುವನಂತಪುರಂನಲ್ಲಿರುವ ಕೇರಳ ರಾಜ್ಯ ಕಾಂಗ್ರೆಸ್ ವಾರ್ ರೂಮ್‌ನ ಅಧ್ಯಕ್ಷರನ್ನಾಗಿ ನೇಮಿಸುವ ಮೂಲಕ ಈ ಮಾತು ಬಲವಾಗಿ ಕೇಳಿಬರುತ್ತಿದೆ. ಕೇರಳ ಕಾಂಗ್ರೆಸ್‌ನ ಚುನಾವಣಾ ಕಾರ್ಯತಂತ್ರ ಯೋಜನೆಯಲ್ಲಿ ಡಿ ಕೆ ಶಿವಕುಮಾರ್ ನೇರವಾಗಿ ಭಾಗಿಯಾಗಿದ್ದಾರೆ ಎಂದರ್ಥವಲ್ಲ, ಆದರೆ ಈ ಪ್ರಕ್ರಿಯೆಯಲ್ಲಿ ಅವರ ಬಲವಾದ ಪಾಲ್ಗೊಳ್ಳುವಿಕೆಯನ್ನು ಸೂಚಿಸುತ್ತದೆ.

ಡಿ ಕೆ ಶಿವಕುಮಾರ್ ಅವರು ಪ್ರಚಾರದಲ್ಲಿ ಸಕ್ರಿಯ ಪಾತ್ರ ವಹಿಸಿ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಮರಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಕರ್ನಾಟಕದ ನಾಯಕರೊಬ್ಬರು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ (The New Indian Express) ಪತ್ರಿಕೆಗೆ ಹೇಳುತ್ತಾರೆ.

ಡಿ ಕೆ ಶಿವಕುಮಾರ್ ಅವರು ಯಾವುದೇ ಅಧಿಕೃತ ಹುದ್ದೆಗಳನ್ನು ಹೊಂದಿರಲಿಲ್ಲ, ಆದರೆ ಪ್ರಚಾರವನ್ನು ಮೇಲ್ವಿಚಾರಣೆ ಮಾಡಲು ಮತ್ತು ಕಾರ್ಯತಂತ್ರಗಳನ್ನು ರೂಪಿಸಲು ತೆಲಂಗಾಣದಲ್ಲಿ ಬೀಡುಬಿಟ್ಟಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿಯೂ ಅವರು ಕೇರಳದಲ್ಲಿ ಕಾಂಗ್ರೆಸ್‌ಗೆ ಸಹಾಯ ಮಾಡಿದ್ದರು ಎನ್ನುತ್ತಾರೆ.

5 ರಾಜ್ಯಗಳಲ್ಲಿ ಚುನಾವಣೆ

ಮುಂದಿನ ವರ್ಷ 5 ರಾಜ್ಯಗಳಾದ ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಚುನಾವಣೆ ನಡೆಯುತ್ತದೆ. ಕೇರಳದಲ್ಲಿ ಅಧಿಕಾರವನ್ನು ಹೊಂದುವ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಹೆಚ್ಚಿನ ಭರವಸೆ ಹೊಂದಿದೆ.

ಕಾಂಗ್ರೆಸ್ ಅಧಿಕಾರ ಪಡೆಯುವುದು ಮೊದಲ ಆದ್ಯತೆ: ಹರ್ಷ

ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಹಿರಿಯ ನಾಯಕರೊಂದಿಗೆ ರಾಜ್ಯ ನಾಯಕತ್ವದೊಳಗಿನ ಭಿನ್ನಾಭಿಪ್ರಾಯವು ಕಳವಳಕಾರಿ ಅಂಶವಾಗಿದೆ. ದೆಹಲಿಯ ಕಾಂಗ್ರೆಸ್ ವಾರ್ ರೂಮ್‌ನಲ್ಲಿ ನಾಯಕರನ್ನು ಭೇಟಿಯಾದ ನಂತರ ಹರ್ಷ ಕನದಂ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಕೇರಳದಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯಲು ಸಹಾಯ ಮಾಡುವುದು ನನ್ನ ಮೊದಲ ಆದ್ಯತೆಯಾಗಿದೆ ಎಂದು ಹರ್ಷ TNIE(The New Indian Express) ಗೆ ತಿಳಿಸಿದರು. ನಾವು ತಂತ್ರಜ್ಞಾನದೊಂದಿಗೆ ತಳಮಟ್ಟದ ಜನರನ್ನು ಸಂಪರ್ಕಿಸುತ್ತೇವೆ. ಸ್ಥಳೀಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಮತ್ತು ಹಿರಿಯ ನಾಯಕರ ಮಾರ್ಗದರ್ಶನದೊಂದಿಗೆ ಮುಂದುವರಿಯುತ್ತೇವೆ. ಎಲ್ಲಾ ಕಾರ್ಯಕರ್ತರನ್ನು ತಲುಪುವುದು ನಮ್ಮ ಉದ್ದೇಶವಾಗಿದೆ ಎಂದರು.

ಹರ್ಷ ಅವರು ಈ ಹಿಂದೆ ಹರಿಯಾಣ, ಮಹಾರಾಷ್ಟ್ರ ಮತ್ತು ದೆಹಲಿ ವಿಧಾನಸಭಾ ಚುನಾವಣೆಗಳಲ್ಲಿ ಎಐಸಿಸಿ ವೀಕ್ಷಕರಾಗಿದ್ದರು. ಕಾಂಗ್ರೆಸ್ ಪಕ್ಷವು ಮುಂದಿನ ದಿನಗಳಲ್ಲಿ ಅಧಿಕ ರಾಜ್ಯಗಳಲ್ಲಿ ಅಧಿಕಾರಕ್ಕೆ ಬರದಿದ್ದರೆ ವಿಶೇಷವಾಗಿ ದಕ್ಷಿಣ ಭಾರತದಲ್ಲಿ, ಅದರ ಭವಿಷ್ಯವು ಕತ್ತಲೆಯಾಗಲಿದೆ ಎಂದು ಕಾಂಗ್ರೆಸ್ ಹೈಕಮಾಂಡ್ ಅಭಿಪ್ರಾಯಪಟ್ಟಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com