ತಾಲಿಬಾನ್, RSS ಒಂದೇ 'ಮೈಂಡ್ ಸೆಟ್': ಯತೀಂದ್ರ ಸಿದ್ದರಾಮಯ್ಯ ಕಿಡಿ!

ಶಾಲೆಗಳಲ್ಲಿ, ಕಾಲೇಜುಗಳಲ್ಲಿ, ಪಾರ್ಕ್‌ಗಳಲ್ಲಿ ಸುಮ್ಮನೆ ಸಭೆಗಳನ್ನ ಮಾಡುವುದು, ಅವರ ವಿಷಪೂರಿತವಾದ ಸಿದ್ಧಾಂತಗಳನ್ನ ಹರಡುವ ಕೆಲಸಗಳನ್ನ ಮಾಡಬಾರದು
Yathindra Siddaramaiah
ಯತೀಂದ್ರ ಸಿದ್ದರಾಮಯ್ಯ
Updated on

ರಾಯಚೂರು: ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ಬ್ರೇಕ್ ಹಾಕಬೇಕು ಎಂಬ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ಕುರಿತು ರಾಜ್ಯದಲ್ಲಿ ತೀವ್ರ ಚರ್ಚೆ ನಡೆಯುತ್ತಿರುವಂತೆಯೇ ಆರ್ ಎಸ್ ಎಸ್ , ತಾಲಿಬಾನಿಗಳ ಮೈಂಡ್ ಸೆಟ್ ಒಂದೇ ಯಾಗಿದೆ ಎಂದು ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ರಾಯಚೂರಿನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಏನೇ ಬೈಠಕ್ ಮಾಡಬೇಕೆಂದರೂ ಪೂರ್ವಾನುಮತಿ ಪಡೆಯಬೇಕು. ಆರ್‌ಎಸ್‌ಎಸ್‌ನವರು (RSS)ಯಾವುದೇ ಪೂರ್ವಾನುಮತಿಯಿಲ್ಲದೆ ಕಾರ್ಯಕ್ರಮ ಮಾಡ್ತಾರೆ.ಯಾರೂ ಹೇಳುವವರಿಲ್ಲ ಕೇಳುವವರಿಲ್ಲ ಅಂತ ಇಷ್ಟು ದಿನ ಮಾಡಿಕೊಂಡು ಬಂದುಬಿಟ್ಟಿದ್ದಾರೆ. ಹಾಗಾಗಿ ಅದಕ್ಕೆ ಕಡಿವಾಣ ಹಾಕಬೇಕು ಎಂದರು.

ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ನಡೆಸುವುದಕ್ಕೆ ತೀವ್ರ ಆಕ್ಷೇಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಶಾಲೆಗಳಲ್ಲಿ, ಕಾಲೇಜುಗಳಲ್ಲಿ, ಪಾರ್ಕ್‌ಗಳಲ್ಲಿ ಸುಮ್ಮನೆ ಸಭೆಗಳನ್ನ ಮಾಡುವುದು, ಅವರ ವಿಷಪೂರಿತವಾದ ಸಿದ್ಧಾಂತಗಳನ್ನ ಹರಡುವ ಕೆಲಸಗಳನ್ನ ಮಾಡಬಾರದು ಎಂದು ಹೇಳಿದರು.

ಆರ್ ಎಸ್ ಎಸ್ ನವರು ಸುಮ್ನೆ ಮಾಮೂಲಾಗಿ ಕಾರ್ಯಕ್ರಮಗಳನ್ನ ಮಾಡಲ್ಲ. ಹಾಗಾಗಿ ಅದಕ್ಕೆ ಕಡಿವಾಣ ಹಾಕಬೇಕು. ಅನುಮತಿ ಪಡೆದು ಕಾರ್ಯಕ್ರಮ ಮಾಡಲಿ ಎಂದು ತಿಳಿಸಿದರು.

Yathindra Siddaramaiah
ಸರ್ಕಾರಿ ಸ್ಥಳಗಳಲ್ಲಿ RSS ನಿರ್ಬಂಧಕ್ಕೆ ಪ್ರಿಯಾಂಕ್ ಖರ್ಗೆ ಆಗ್ರಹ: ಪರಿಶೀಲಿಸಿ ಕ್ರಮ ಕೈಗೊಳ್ಳಲು ಮುಖ್ಯ ಕಾರ್ಯದರ್ಶಿಗಳಿಗೆ CM ಸೂಚನೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com